ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪತ್ರಿಕಾ ವೃತ್ತಿ ಮಹಿಳೆಯರಿಗಲ್ಲ ಎನ್ನುವ ಮಾತು ಈಗ ಸಂಪೂರ್ಣ ಸುಳ್ಳಾಗಿದ್ದು, ಪತ್ರಿಕಾ ವೃತ್ತಿಯ ಘನತೆ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡುವಲ್ಲಿ ಪತ್ರಕರ್ತೆಯರ ಪಾತ್ರ ಪ್ರಾಮುಖ್ಯತೆ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.
ಕರ್ನಾಟಕ ಪತ್ರಕರ್ತೆಯರ ಸಂಘ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತ ಸಾಧಕಿಯರನ್ನು ಅಭಿನಂದಿಸಿ ಮಾತನಾಡಿದರು.

Also read: ಮೈಸೂರು | ಹಸಿದ ಹೊಟ್ಟೆಗೆ ರಾಯರ ನೈವೇದ್ಯ | ಉಚಿತ ಪ್ರಸಾದ ವಿತರಣೆಗೆ ಚಾಲನೆ
ನಾವು ಬೆಳಗ್ಗೆ ಎದ್ದು ಮನೆಯಿಂದ ಹೊರಗೆ ಕಾಲಿಡುವ ಮೊದಲೇ ಬೀದಿಯನ್ನು ಗುಡಿಸಿ, ನಮ್ಮ ಕಸವನ್ನು ತೆಗೆಯುವ ಪೌರ ಕಾರ್ಮಿಕರು ಮತ್ತು ಸಫಾಯಿ ಕರ್ಮ ಚಾರಿಗಳ ಪರವಾಗಿ ಹೋರಾಟ ನಡೆಸುತ್ತಿರುವ ಪದ್ಮಾ ಕೋಲಾರ ಅವರ ಆಯ್ಕೆ ಪತ್ರಕರ್ತೆಯರ ಸಂಘದ ಸಮಾಜಮುಖಿ ದೃಷ್ಠಿಕೋನಕ್ಕೆ ಸಾಕ್ಷಿಯಾಗಿದೆ.

ಮೂರನೆಯವರು ಪ್ರಭಾ ದತ್. ಬರ್ಕಾ ದತ್ ಅವರ ತಾಯಿ. 1965 ರಲ್ಲಿ ಭಾರತ-ಪಾಕಿಸ್ತಾನ ಯುದ್ಧದ ವರದಿಗಾರಿಕೆಗೆ ತೆರಳಿದ್ದ ಪ್ರಭಾದತ್ ಅವರನ್ನು ಈ ಸಂದರ್ಭದಲ್ಲಿ ನಾವು ವಿಶೇಷವಾಗಿ ಸ್ಮರಿಸಲೇಬೇಕು. ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯ ವರದಿಗಾರ್ತಿ ಆಗಿದ್ದ ಪ್ರಭಾ ದತ್ ಅವರಿಗೆ ಯುದ್ಧದ ವರದಿ ಮಾಡುವ ಉತ್ಸಾಹವಿತ್ತು. ಆದರೆ ಪತ್ರಿಕೆ ಅವಕಾಶ ಕೊಟ್ಟಿರಲಿಲ್ಲ. ಆದರೂ ಕೆಲಸಕ್ಕೆ ರಜೆ ಹಾಕಿ ರಣರಂಗಕ್ಕೆ ತೆರಳಿ ಸರಣಿ ವರದಿಗಳನ್ನು ಕಚೇರಿಗೆ ಕಳುಹಿಸಿದ್ದರು. ಅವು ಉತ್ತಮ ಗುಣಮಟ್ಟದ್ದಾಗಿದ್ದರಿಂದ ಪ್ರಕಟ ಕೂಡ ಆದವು. ಕೊನೆಗೆ ಇದೇ ಪತ್ರಿಕೆ ಪ್ರಭಾ ದತ್ ಅವರು ಮಿಲಿಟರಿ ಟ್ಯಾಂಕರ್ ಮುಂದೆ ನಿಂತಿದ್ದ ಫೋಟೋವನ್ನೂ ಪ್ರಕಟಿಸಿ ಪತ್ರಕರ್ತೆಯರ ಇತಿಹಾಸಕ್ಕೆ ದಾಖಲೆ ಉಳಿಸಿದೆ.

ಉತ್ತರ ಪ್ರದೇಶದ ಹಾಥರಸ್ ಅತ್ಯಾಚಾರ ಪ್ರಕರಣವನ್ನು ಬೆನ್ನತ್ತಿದ್ದ ಇಂಡಿಯಾ ಟುಡೇಯ ತನುಶ್ರೀ ಪಾಂಡೆ, ಪೆಗಾಸಿಸ್ ತನಿಖಾ ವರದಿ ಪ್ರಕಟಿಸಿದ ರೋಹಿಣಿ ಸಿಂಗ್, ಕೋವಿಡ್ ಸಂದರ್ಭದ ದುಡಿಯುವ ವರ್ಗದ ಸಂಕಷ್ಟಗಳನ್ನು ಇಡೀ ದೇಶ ಸುತ್ತಿ ದಾಖಲಿಸಿದ ಬರ್ಖಾ ದತ್ ಮತ್ತು ರಾಣಾ ಅಯೂಬ್, ಸ್ವಾತಿ ಚತುರ್ವೇದಿ ಥರದ ಹಲವು ಮಂದಿ ಪತ್ರಿಕಾ ವೃತ್ತಿಯ ಘನತೆ ಹೆಚ್ಚಿಸುತ್ತಲೇ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿತ್ತಾ ತಮ್ಮ ಹಿಂದಿನವರ ಚರಿತ್ರೆಯನ್ನು ಮುಂದುವರೆಸಿದ್ದಾರೆ.
ಇವತ್ತು ತಂತ್ರಜ್ಞಾನದ ಕಾರಣಕ್ಕೆ ಮಾಧ್ಯಮ ಕ್ಷೇತ್ರ ಕೂಡ ವಿಪರಿತ ಬೆಳೆದಿದೆ. ಪುರುಷರಂತೆ ಮಹಿಳೆಯರಿಗೂ ಹೆಚ್ಚೆಚ್ಚು ಅವಕಾಶಗಳು ಒದಗುತ್ತಿವೆ. ಮಾಧ್ಯಮಗಳ ನಿರ್ಣಾಯಕ ಹುದ್ದೆಗಳಲ್ಲಿ ಮಹಿಳೆಯರೇ ಇಲ್ಲ ಎನ್ನುವ ಪರಿಸ್ಥಿತಿ ನಿಧಾನಕ್ಕೆ ಬದಲಾಗುತ್ತಿದೆ. “ಓ ವುಮೇನಿಯಾ” ಸಂಸ್ಥೆ ನೀಡಿರುವ ವರದಿಯ ಪ್ರಕಾರ ನಮ್ಮ ಮಾಧ್ಯಮಗಳಲ್ಲಿ ಶೇ13 ರಷ್ಟು ಪ್ರಮುಖ ಹುದ್ದೆಗಳಲ್ಲಿ ಈಗ ಪತ್ರಕರ್ತೆಯರು ಇದ್ದಾರೆ.
ಇನ್ನು ಪರ್ಯಾಯ ಮಾಧ್ಯಮಗಳಲ್ಲಿ, ಯು ಟ್ಯೂಬ್ ಚಾನಲ್ಗಳಲ್ಲಿ ಪತ್ರಕರ್ತೆಯರು ನಿರಂತರ ಹವಾ ಎಬ್ಬಿಸುತ್ತಿದ್ದಾರೆ. ನಮ್ಮವರೇ ಆದ ವಿಜಲಕ್ಷ್ಮಿ ಶಿಬರೂರು, ಮಂಜುಳಾ ಮಾಸ್ತಿಕಟ್ಟೆ, ರಾಷ್ಟ್ರೀಯ ಮಟ್ಟದಲ್ಲಿ ಧನ್ಯಾ ರಾಜೇಂದ್ರನ್, ಸಾಕ್ಷಿ ಜೋಶಿ, ಕುಂಕುಮ್ ಬಿಲ್ವಾಲ್ ಮುಂತಾದವರು ಪತ್ರಿಕಾ ವೃತ್ತಿಯ ಸಾಧ್ಯತೆಗಳನ್ನು. ತೂಕವನ್ನು ಹೆಚ್ಚಿಸುತ್ತಿದ್ದಾರೆ. ಇವರೆಲ್ಲರ ಸಾಧನೆಗಳನ್ನು ಸ್ಮರಿಸುತ್ತಾ ಪತ್ರಕರ್ತೆಯರ ಸಂಘದ ಮುಂದೆ ನಾನು ಒಂದು ಬೇಡಿಕೆ ಇಡುತ್ತಿದ್ದೇನೆ.

ಪತ್ರಕರ್ತೆಯರ ಸಂಘಕ್ಕೆ ಕಾರ್ಯ ನಿರ್ವಹಿಸಲು ಕಚೇರಿಯ ಅಗತ್ಯವಿದ್ದು ಇದಕ್ಕೆ ಸೂಕ್ತ ಕ್ರಮ ವಹಿಸಲು ಪ್ರಯತ್ನಿಸಲಾಗುವುದು ಎಂದರು.
ರಾಜ್ಯ ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ, ಪ್ರಧಾನ ಕಾರ್ಯದರ್ಶಿ ಮಂಜುಶ್ರೀ ಕಡಕೋಳ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post