ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಮನೆ ಮನೆ ತಲುಪುತ್ತಿವೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಮಹಿಳೆಯರ ಏಳಿಗೆ ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ #Minister Lakshmi Hebbalkar ಹೇಳಿದರು.
ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ನಡೆದ ಶನಿವಾರ ನಡೆದ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷ ಮಹಿಳೆಯರ ಪರ ಇರುವ ಪಕ್ಷ, ಮಹಿಳೆಯರ, ಯುವಕರ, ವೃದ್ಧರ ಹೀಗೆ..ಎಲ್ಲರಿಗೂ ಸಲ್ಲುವ ಪಕ್ಷ ಕಾಂಗ್ರೆಸ್ ಪಕ್ಷ ಎಂದರು.

Also read: ಸ್ವಾತಿ ಹತ್ಯೆ ಹಿಂದೆ ಲವ್ ಜಿಹಾದ್ ಜಾಲ | ಬಸವರಾಜ ಬೊಮ್ಮಾಯಿ ಆರೋಪ
ಮಹಿಳೆಯರು ಇವತ್ತು ಯಾವುದರಲ್ಲೂ ಹಿಂದೆ ಇಲ್ಲ. ಸಮಾಜದಲ್ಲಿ ಮಹಿಳೆಯರನ್ನು ಬಿಟ್ಟು ಇರುವುದಕ್ಕೂ ಸಾಧ್ಯವಿಲ್ಲ. ಮಹಿಳಾ ಮೀಸಲಾತಿ ಜಾರಿಗೆ ಬಂದರೆ, ಕರ್ನಾಟಕ ವಿಧಾನಸಭೆಯಲ್ಲಿ 70 ರಿಂದ 78 ರವರೆಗೆ ಶಾಸಕಿಯರು ಇರಲಿದ್ದಾರೆ. ಮಹಿಳೆಯರು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

1999ರಲ್ಲಿ ನಾನು ಕೂಡ ಸಾಮಾನ್ಯ ಕಾರ್ಯಕರ್ತೆಯಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡೆ. ನಮ್ಮ ಹಿರಿಯ ನಾಯಕಿ ಮಾರ್ಗರೇಟ್ ಅಳ್ವ ಅವರೇ ನನಗೆ ಸ್ಫೂರ್ತಿ. ಹಂತ ಹಂತವಾಗಿ ಮೇಲೆ ಬಂದು ಇಂದು ಸರ್ಕಾರದಲ್ಲಿ ಸಚಿವರಾಗಿರುವೆ. ಕಾಂಗ್ರೆಸ್ ಪಕ್ಷ ಸಾಮಾನ್ಯರನ್ನು ಗುರುತಿಸುವ ಕೆಲಸ ಮಾಡುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post