ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿರುವ ವಿಶ್ವ ವಿಖ್ಯಾತ ವಿತ್ತ ತಜ್ಞ ಸಿದ್ದರಾಮಯ್ಯ CMSiddaramaiah ಅವರಿಗೆ ಕೇಂದ್ರ ಸರ್ಕಾರ ಬರ ಹಾಗೂ ಪ್ರವಾಹಕ್ಕೆ ಯಾವ ರೀತಿ ಪರಿಹಾರ ಕೊಡುತ್ತದೆ ಎಂಬ ಸಾಮಾನ್ಯ ತಿಳುವಳಿಕೆಯೂ ಸಹ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HDKumaraswamy ವ್ಯಂಗ್ಯ ಮಾಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ವಿಶ್ವವಿಖ್ಯಾತ ವಿತ್ತ ನೀವು ಮೆರೆಯುತ್ತಿದ್ದೀರಿ. ಅಧಿಕಾರಕ್ಕೆ ಬಂದೊಡನೆ ವಿಶೇಷವಾಗಿ ವಿತ್ತಖಾತೆಯನ್ನು ತಮ್ಮಲ್ಲಿಯೇ ‘ ಜೋಪಾನ ‘ ಮಾಡಿಕೊಳ್ಳುವ ನಿಮಗೆ, ಕೇಂದ್ರ ಸರ್ಕಾರವು ಬರಕ್ಕೆ, ಪ್ರವಾಹಕ್ಕೆ ಯಾವ ರೀತಿ ಪರಿಹಾರ ಕೊಡುತ್ತದೆ ಎನ್ನುವ ಸಾಮಾನ್ಯ ತಿಳಿವಳಿಕೆಯೂ ಇಲ್ಲವೇ? ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

Also read: ಮಂಗಳೂರಿಗೆ ಬರಲಿದೆ ವಂದೇ ಭಾರತ್ ರೈಲು: ಸಂಸದ ನಳೀನ್ ಕುಮಾರ್ ಹೇಳಿದ್ದೇನು?
ಕಾಂಗ್ರೆಸ್ ಸದಸ್ಯರು ಎಲ್ಲಿ ಅವಿತಿದ್ದರು?
ನೀವು ಕರೆದೊಯ್ಯುವ ಸರ್ವಪಕ್ಷ ನಿಯೋಗದಲ್ಲಿ ಜೆಡಿಎಸ್ ಪಕ್ಷವೂ ಇರುತ್ತದೆ, ನಮ್ಮ ಮಿತ್ರಪಕ್ಷ ಬಿಜೆಪಿಯೂ ಇರುತ್ತದೆ. ಇನ್ನೊಬ್ಬರ ಧೈರ್ಯದ ಬಗ್ಗೆ ಮಾತನಾಡುವ ನೀವು, ನಿಮ್ಮ ಸ್ಥೈರ್ಯದ ಬಗ್ಗೆಯೂ ಕೊಂಚ ಹೇಳಬೇಕಲ್ಲವೇ? ಮುಖ್ಯಮಂತ್ರಿಯಾಗಿ ನೀವು ರಾಜ್ಯಕ್ಕೆ ಸಂಬಂಧಿಸಿ ಪ್ರಧಾನಿಗಳನ್ನು, ಸಂಬಂಧಿಸಿದ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿ ಆಗಿದ್ದೀರಿ? ಎಷ್ಟು ಅರ್ಜಿ ಕೊಟ್ಟಿದ್ದೀರಿ? ರಾಜ್ಯದ ನೆಲ-ಜಲ, ಇನ್ನಿತರೆ ಸಂಕಷ್ಟದ ವೇಳೆ ಈ ಇಳಿವಯಸ್ಸಿನಲ್ಲಿಯೂ ಮಾನ್ಯ ದೇವೇಗೌಡರು ನಡೆಸುತ್ತಿರುವ ಹೋರಾಟ ನಿಮಗೆ ಕಾಣಿಸಿಲ್ಲವೇ? ಕಾವೇರಿ ಬಗ್ಗೆ ಅವರು ಸಂಸತ್ತಿನಲ್ಲಿ ಸಿಡಿದೆದ್ದಾಗ ನಿಮ್ಮ ಪಕ್ಷದ ಸದಸ್ಯರೆಲ್ಲರೂ ಎಲ್ಲಿ ಅವಿತು ಕುಳಿತಿದ್ದರು ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.











Discussion about this post