ಕಲ್ಪ ಮೀಡಿಯಾ ಹೌಸ್ | ಬಂಟ್ವಾಳ |
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಡಿಜಿಟಲ್ ಸೇವಾ ಕೇಂದ್ರ ಕೊಳ್ನಾಡು ಹಾಗೂ ಶ್ರೀ ಮಹಮ್ಮಾಯೀ ಭಜನಾ ಮಂಡಳಿ (ರಿ.) ನಾಗವನ – ಕುಂಟ್ರಕಲ, ಕೊಳ್ನಾಡು ಗ್ರಾಮ, ಬಂಟ್ವಾಳ ತಾಲೂಕು ಇದರ ಜಂಟಿ ಆಶ್ರಯದಲ್ಲಿ ‘ಕೇಂದ್ರ ಸರಕಾರದ’ ಇ-ಶ್ರಮ (e-shram) ಯೋಜನೆಯ ಮಾಹಿತಿ ಕಾರ್ಯಕ್ರಮ ಹಾಗೂ ಆಯುಷ್ಮಾನ್ ಭಾರತ್ ಹೆಲ್ತ್ ಅಕೌಂಟ್ ಕಾರ್ಡ್ (ABHA ID) ನೋಂದಾಣಿ ಕಾರ್ಯಕ್ರಮ ಶ್ರೀ ಮಹಮ್ಮಾಯೀ ಭಜನಾ ಮಂದಿರ, ನಾಗವನ – ಕುಂಟ್ರಕಲ ಇದರ ವಠಾರದಲ್ಲಿ ಜರುಗಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಡಿಜಿಟಲ್ ಸೇವಾ ಕೇಂದ್ರ ಕೊಳ್ನಾಡು (CSC) ಇದರ VLE ವಿನಯ ಕೊಳ್ನಾಡು ಇವರು ಕಾರ್ಯಕ್ರಮ ನಡೆಸಿಕೊಟ್ಟರು.
ಇದೇ ಸಂದರ್ಭದಲ್ಲಿ ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡಲು ದಾಖಲೆಗಳನ್ನು ಸಂಗ್ರಹಿಸಲಾಯಿತು. ಹಾಗೂ ಕೇಕ್ ಕತ್ತರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಊರ ಹಿರಿಯರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
Also read: ಭೀಕರ ಅಪಘಾತ: ಸ್ಥಳದಲ್ಲೇ ಓರ್ವ ಸಾವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post