ಕಲ್ಪ ಮೀಡಿಯಾ ಹೌಸ್ | ಬಂಟ್ವಾಳ |
ಪ್ರಧಾನಿ ನರೇಂದ್ರ ಮೋದಿ PM Narendra Modi ನೇತೃತ್ವದ ಕೇಂದ್ರ ಸರ್ಕಾರ 8 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಮಂಡಳ ಬಿಜೆಪಿ ಎಸ್.ಟಿ ಮೋರ್ಚಾದ ವತಿಯಿಂದ ಬಿಸಿ ರೋಡ್ ಗೀತಾಂಜಲಿ ಸಭಾಭವನದಲ್ಲಿ ಜನಕಲ್ಯಾಣ ಸಮಾವೇಶ ನಡೆಸಲಾಯಿತು.
ಸಮಾವೇಶದಲ್ಲಿ ಪಾಲ್ಗೊಂಡಿದ್ದ ಪಕ್ಷದ ಪ್ರಮುಖರು ಮೋದಿಯವರ ನೇತೃತ್ವದ ಸರ್ಕಾರದ 8 ವರ್ಷದ ಸಾಧನೆಯನ್ನು ವಿವರಿಸಿದರು.
ಇದೇ ಸಂದರ್ಭದಲ್ಲಿ 2021-2022ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 619/625 ಅಂಕ ಪಡೆದ ಗಗನ್ ನಾಯ್ಕ್, ಮಾರ್ನಬೈಲು ಇವರನ್ನು ಸನ್ಮಾನಿಸಲಾಯ್ತು. ಅಲ್ಲದೇ, ಬರಿಮಾರು ಗ್ರಾಮದ ದಿವಂಗತ ನಾರಾಯಣ ನಾಯ್ಕ್ ಮತ್ತು ಸುಮತಿ ದಂಪತಿಗಳ ಸುಪುತ್ರಿ ಕು. ಸುಶ್ಮಿತಾ ಇವರ ಪದವಿ ಪೂರ್ವ ವಿದ್ಯಾಭ್ಯಾಸದ ಅನುಕೂಲತೆಗಾಗಿ ಧನಸಹಾಯ ನೀಡಲಾಯ್ತು. ರಾಜ್ಯ ಸರಕಾರ ಘೋಷಿಸಿದ 75 ಯುನಿಟ್ ರಿಯಾಯಿತಿ ವಿದ್ಯುತ್ ಪಡೆಯಲು 292 ಫಲಾನುಭವಿಗಳು ಈ ಸಂದರ್ಭದಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ರಾಜ್ಯ ಎಸ್.ಟಿ. ಮೋರ್ಚಾ ಉಪಾಧ್ಯಕ್ಷರಾದ ಮಂಜುನಾಥ್ ಎಂ. ಎಸ್., ಜಿಲ್ಲಾ ಕಾರ್ಯದರ್ಶಿಗಳಾದ ಜಯಶ್ರೀ ಕರ್ಕೇರ, ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷರಾದ ಚೆನ್ನಕೇಶವ ಅರಸಮಜಲ್, ಕರ್ನಾಟಕ ನೀರು ಮತ್ತು ಒಳಚರಂಡಿ ನಿಗಮದ ನಿರ್ದೇಶಕರಾದ ಸುಲೋಚನಾ ಜಿ.ಕೆ.ಭಟ್, ಬಂಟ್ವಾಳ ಮಂಡಲದ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕಾರ್ಕಳ, ಉಪಾಧ್ಯಕ್ಷ ಜಯರಾಮ್ ನಾಯ್ಕ್ ಕುಂಟ್ರಕಲ, ಜಿಲ್ಲಾ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎರ್ಮೆನಾಡ್, ಜಿಲ್ಲಾ ಎಸ್ಟಿ ಮೋರ್ಚಾ ಉಪಾಧ್ಯಕ್ಷರಾದ ಸುಮಿತ್ರ ಕರಿಯ, ಬಂಟ್ವಾಳ ಮಂಡಲ ಎಸ್.ಟಿ. ಮೋರ್ಚಾ ಅಧ್ಯಕ್ಷರಾದ ರಾಮ ನಾಯ್ಕ್ ಕುಕ್ಕಿನಾರು, ಪ್ರಧಾನ ಕಾರ್ಯದರ್ಶಿಗಳಾದ ಯಶವಂತ ನಗ್ರಿ. ಸತೀಶ್ ನಾಯ್ಕ್ ಮಂಕುಡೆಕೋಡಿ, ಪ್ರಭಾರಿ ರಮಾನಾಥ ರಾಯಿ ಉಪಸ್ಥಿತರಿದ್ದರು.
Also read: ಕನಸಿನ ಬೆನ್ನೇರಿ ಸಾಧನೆಯ ಶಿಖರವೇರಿದ ಡಾ. ಧನಂಜಯ ಸರ್ಜಿ…
ಜಿಲ್ಲಾ ಎಸ್.ಟಿ. ಮೋರ್ಚಾ ಉಪಾಧ್ಯಕ್ಷ ವಿಠಲ್ ನಾಯ್ಕ್ ಬಾಳ್ತಿಲ ಸ್ವಾಗತಿಸಿದರು. ಮಂಡಲ ಎಸ್.ಟಿ.ಮೋರ್ಚಾ ಪ್ರಧಾನ ಕಾರ್ಯದರ್ಶಿ ಸತೀಶ್ ನಾಯ್ಕ್ ಮಂಕುಡೆಕೋಡಿ ಧನ್ಯವಾದಗೈದರು, ಬರಿಮಾರು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಪುಷ್ಪಲತಾ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post