ಕಲ್ಪ ಮೀಡಿಯಾ ಹೌಸ್ | ಭಟ್ಕಳ |
ಅಪಘಾತದಿಂದಾಗಿ ಭಯಪಟ್ಟ 14ರ ಹರೆಯದವನೊಬ್ಬ ಹೃದಯಸ್ತಂಭನದಿಂದ ಸಾವನ್ನಪ್ಪಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.
ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಬಾಲಕನೋರ್ವ ಬೇರೊಬ್ಬರ ಬೈಕ್ ಗೆ ಡಿಕ್ಕಿಯಾಗಿ ಕೆಳಗೆ ಬಿದ್ದಿದ್ದು, ಬೈಕನ್ನು ಎತ್ತಿ ನಿಲ್ಲಿಸುವ ವೇಳೆ ಜನರು ಸೇರಿಕೊಂಡಿದ್ದು, ಘಟನೆಯಿಂದ ಹೆದರಿದ ಬಾಲಕಲ್ಲಿಯೇ ಕುಸಿದು ಬಿದ್ದಿದ್ದಾನೆ. ಕೂಡಲೇ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಬಾಲಕ ಆಗಲೇ ಮೃತಪಟ್ಟಿದ್ದ.
ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ 9 ನೇ ತರಗತಿಯಲ್ಲಿ ಓದುತ್ತಿದ್ದ ಅಬ್ದುಲ್ಲಾ ಆಫ್ರಿಕಾ (14) ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದುಬಂದಿದೆ.
Also read: ಧಾರ್ಮಿಕ ಕೇಂದ್ರಗಳನ್ನು ಸ್ವಚ್ಛಗೊಳಿಸಿ ಜಾಗೃತಿ ಮೂಡಿಸುವುದೇ ನಮ್ಮ ಉದ್ದೇಶ: ವೀಣಾ ಶಶಿಧರ ಹೆಗಡೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post