ಕಲ್ಪ ಮೀಡಿಯಾ ಹೌಸ್ | ಪಾಟ್ನಾ |
ಭಯೋತ್ಪಾದನೆ ಮತ್ತೆ ತಲೆ ಎತ್ತಿದರೆ ಹುತ್ತದಿಂದ ಹೊರಕ್ಕೆ ಎಳೆದು ತುಳಿದು ಹಾಕುತ್ತೇವೆ ಎಂದು ಪಾಕಿಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
Also Read>> ಮಹಿಷಿಯಲ್ಲಿ ಶ್ರೀ ಸತ್ಯಸಂದ ಗುರುಗಳ ಆರಾಧನಾ ಮಹೋತ್ಸವ ಸಂಪನ್ನ
ಈ ಕುರಿತಂತೆ ಮಾತನಾಡಿರುವ ಅವರು, ಭಯೋತ್ಪಾದನೆ ವಿರುದ್ಧದ ಭಾರತದ ಯುದ್ಧ ಇನ್ನೂ ನಿಂತಿಲ್ಲ ಎಂದು ಪಾಕಿಸ್ಥಾನವನ್ನು ಹಾವಿಗೆ ಹೋಲಿಸಿ ನೇರ ಎಚ್ಚರಿಕೆ ನೀಡಿದ್ದಾರೆ.
ಶತ್ರುಗಳು ಆಪರೇಷನ್ ಸಿಂಧೂರ ಶಕ್ತಿಯನ್ನು ನೋಡಿದ್ದಾರೆ. ಆಪರೇಷನ್ ಸಿಂಧೂರ ಭಾರತದ ಬತ್ತಳಿಕೆಯಿಂದ ಬಿಟ್ಟ ಕೇವಲ ಒಂದು ಬಾಣ ಅಷ್ಟೇ. ಭಯೋತ್ಪಾದನೆ ವಿರುದ್ಧದ ಯುದ್ಧ ಇನ್ನೂ ಮುಗಿದಿಲ್ಲ ಎಂದು ಮೋದಿ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post