ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ರಾಂಚಿ: ಒಂದೆಡೆ ಜಾರ್ಖಂಡ್ ವಿಧಾನಸಭೆಗೆ ಮತದಾನ ಆರಂಭವಾಗಿದ್ದರೆ ಇನ್ನೊಂದೆಡೆ ನಕ್ಸಲರು ಇಲ್ಲಿನ ಸೇತುವೆಯೊಂದನ್ನು ಸ್ಪೋಟಿಸಿದ್ದಾರೆ.
ಸೇತುವೆ ಸ್ಫೋಟಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಪೊಲೀಸ್ ಅಧಿಕಾರಿ ಶಶಿ ರಂಜನ್, ಗುಮ್ಲಾ ಜಿಲ್ಲೆಯ ಬಿಷ್ಣುಪುರ್ ನಲ್ಲಿ ಸೇತುವೆಯನ್ನು ನಕ್ಸಲೀಯರು ಸ್ಫೋಟಿಸಿದ್ದಾರೆ. ಅದೃಷ್ಠವಷಾತ್ ಘಟನೆಯಲ್ಲಿ ಯಾವುದೇ ಸಾವು ನೋವು, ಸಂಭವಿಸಿಲ್ಲ ಎಂದಿದ್ದಾರೆ.
ಇನ್ನು, ಮೊದಲ ಹಂತದಲ್ಲಿ ರಾಜ್ಯದ ಆರು ಜಿಲ್ಲೆಯ 13 ಕ್ಷೇತ್ರಗಳಿಗೆ ಇಂದು ಬೆಳಗ್ಗೆ ಮತದಾನ ನಡೆಯುತ್ತಿದೆ. ಎಲ್ಲೆಡೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
Get in Touch With Us info@kalpa.news Whatsapp: 9481252093







Discussion about this post