ಕಲ್ಪ ಮೀಡಿಯಾ ಹೌಸ್
ಬೆಳಗಾವಿ: 6ನೆಯ ವೇತನ ಆಯೋಗದ ಶಿಫಾರಸುಗಳ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ತಾಲೂಕಿನ ಮುತ್ನಾಳದಲ್ಲಿ ಸಾರಿಗೆ ನೌಕರರ ಅನಿರ್ದಿಷ್ಠಾವದಿ ಮುಷ್ಕಾರದ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ಒಂಬತ್ತು ಬೇಡಿಕೆಯಲ್ಲಿ ಎಂಟು ಬೇಡಿಕೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಲಾಕ್ಡೌನ್ ಸಮಯದಲ್ಲಿಯೂ ಸಾರಿಗೆ ನೌಕರರಿಗೆ ಸಂಪೂರ್ಣ ಸಂಬಳ ನೀಡಿದ್ದೇವೆ, ಆರ್ಥಿಕ ಸಂಕಷ್ಟದ ನಡುವೆಯೂ ಸರ್ಕಾರದಿಂದಲೇ 1,200ಕೋಟಿ ರೂ. ಸಂಬಳವನ್ನು ಸಾರಿಗೆ ಇಲಾಖೆಗೆ ಈಗಾಗಲೇ ಕೊಟ್ಟಿದ್ದೇವೆ. ಇಲಾಖೆ ನಷ್ಟದಲ್ಲಿದ್ದರೂ ನೌಕರರಿಗೆ ತೊಂದರೆಯಾಗುವುದು ಬೇಡವೆಂದು ಪೂರ್ಣ ವೇತನ ಕೊಟ್ಟಿದ್ದೇವೆ, ಸರಕಾರದ ಪ್ರಾಮಾಣಿಕ ಪ್ರಯತ್ನವನ್ನು ಸಾರಿಗೆ ನೌಕರರು ಕೂಡಾ ಪರಿಗಣಿಸಬೇಕು ಎಂದು ಹೇಳಿದರು.
ಈಗಾಗಲೇ ಎಂಟು ಬೇಡಿಕೆ ಈಡೇರಿಸಿದ ಮೇಲೂ ಸಾರಿಗೆ ನೌಕರರು ಹಠ ಮಾಡುವುದು ಸರಿಯಲ್ಲ, ಯಾರದ್ದೋ ಪ್ರೇರಣೆ, ಒತ್ತಡದ ಮೇಲೆ ಮುಷ್ಕರ ಮಾಡುತ್ತಿದ್ದಾರೆ ಎನಿಸುತ್ತಿದೆ. ದಯಮಾಡಿ ಹಠವನ್ನು ಬಿಡಿ ಸಾರ್ವಜನಿಕರಿಗೆ ತುಂಬಾ ತೊಂದರೆ ಆಗುತ್ತದೆ. ಸರ್ಕಾರ ಸಾರಿಗೆ ಇಲಾಖೆ ನೌಕರರ ಪರವಾಗಿದೆ. ಕೊರೋನಾದಿಂದ ಇಲಾಖೆ ನಷ್ಟದಲ್ಲಿದೆ, ಸರ್ಕಾರಕ್ಕೆ ಸಹಕಾರ ನೀಡಿ, ಮುಷ್ಕರ ಬಿಟ್ಟು ಮಾತುಕತೆಗೆ ಬನ್ನಿ, ಕುಳಿತು ಚರ್ಚೆ ನಡೆಸೋಣ, ಜನಸಾಮಾನ್ಯರಿಗೆ ತೊಂದರೆ ಕೊಡಬೇಡಿ ಎಂದು ಮುಷ್ಕರ ನಿರತರಿಗೆ ಸಿಎಂ ಮನವಿ ಮಾಡಿಕೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post