ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಸಾಲವಾಗಿ ಕೊಟ್ಟ ಹಣ ಮರುಪಾವತಿಸದ ಹಿನ್ನೆಲೆ ಸ್ನೇಹಿತನ ಹತ್ಯೆಗೈದು #Murder ಪೊಲೀಸರಿಗೆ ಶರಣಾದ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಿರಿಯಾಲ ಗ್ರಾಮದಲ್ಲಿ ನಡೆದಿದೆ.
ಗಿರಿಯಾಲ ಗ್ರಾಮದ ಮಂಜುನಾಥ ಗೌಡರ (30) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.

ರಾತ್ರಿ ನಡೆದ ಜಗಳದ ಸಿಟ್ಟಿನಲ್ಲೇ ಬೆಳಗಿನ ಜಾವ ಕೊಡ್ಲಿಯಿಂದ ಹೊಡೆದು ಮಂಜುನಾಥನ ಹತ್ಯೆ ಮಾಡಲಾಗಿದೆ. ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮಂಜುನಾಥ ಗೌಡರ ಉಸಿರು ಚಲ್ಲಿದ್ದಾನೆ. ಮಂಜುನಾಥ ಗೌಡರ ಸಾವನಪ್ಪಿರುವ ಸುದ್ದಿ ತಿಳಿದು ಪೊಲೀಸರಿಗೆ ಸ್ವಯಂ ಪ್ರೇರಿತವಾಗಿ ಹೋಗಿ ದಯಾನಂದ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post