ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ನಮ್ಮ ನಾಯಕ ರಾಹುಲ್ ಗಾಂಧಿ #Rahul Gandhi ಅವರು ಡ್ರಗ್ ಅಡಿಕ್ಟ್ #Drug Adict ಎಂದು ಹಲವು ಬಾರಿ ಹೇಳಿದರು. ಇದಕ್ಕೆ ಪ್ರತಿಯಾಗಿ ಯಾಕೆ ಹಾಗೆನ್ನುತ್ತೀರಾ. ಹಾಗಾದರೆ ನೀವೂ ಅಪಘಾತ ಮಾಡಿದ್ದು, ನೀವೂ ಕೊಲೆಗಾರರೇ ಎಂದೆ. ಅದಕ್ಕೆ ನನ್ನ ವಿರುದ್ದ ರವಿ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿದರು ಎಂದು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ #Minister Lakshmi Hebbalkar ಹೇಳಿದರು.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರಿಗೆ ಅವಮಾನವಾಗುವ ರೀತಿ ಕೇಂದ್ರ ಗೃಹ ಸಚಿವ ಅಮಿತ್ ಶಾ #Amith Shah ಅವರು ಮಾತನಾಡಿದ್ದರು. ಅದನ್ನು ನಾವು ನಿನ್ನೆ ಖಂಡಿಸಿ ಪ್ರತಿಭಟನೆ ನಡೆಸಿದೆವು. ಏಕೆಂದರೆ ಅಂಬೇಡ್ಕರ್ ಅವರಿಂದಲೇ ನಾವು ಎಂಎಲ್ಎ, ಮಂತ್ರಿ ಆಗಲಿಕ್ಕೆ ಸಾಧ್ಯವಾಗಿದೆ. ಮಹಿಳೆಯರು ಇಂದು ಈ ಸ್ಥಾನಗಳಲ್ಲಿ ಕುಳಿತುಕೊಳ್ಳಲು ಅಂಬೇಡ್ಕರ್ ಅವರೇ ಕಾರಣ ಎಂದರು.

Also read: ಸಿ.ಟಿ. ರವಿ ಬಂಧನ ಖಂಡಿಸಿ ಚಿಕ್ಕಮಗಳೂರು ಬಂದ್ | ಬಿಜೆಪಿ ಪ್ರತಿಭಟನೆ | ಲಘು ಲಾಠಿ ಪ್ರಹಾರ
ಇಂತಹವುಕ್ಕೆಲ್ಲಾ ನಾನು ಹೆದರುವವಳಲ್ಲ. ನಾನೊಬ್ಬ ಮಹಿಳೆ, ತಾಯಿ, ಸಹೋದರಿ ಹಾಗೂ ಅತ್ತೆ. ಈ ರೀತಿ ನನಗೆ ಅಪಮಾನವಾಗಿದೆ. ಇಲ್ಲಿಯವರೆಗೂ ನಾನು ಒಂದು ಇರುವೆಗೂ ಕಾಟ ಕೊಟ್ಟವಳಲ್ಲ, ಕೆಟ್ಟವರನ್ನು ಕಂಡರೆ ದೂರ ಇರುವವಳು. ಆ ವೇದಿಕೆಯಲ್ಲಿ ಎಲ್ಲರೂ ಧೃತರಾಷ್ಟçರಾದರು. ನಮ್ಮ ಪಕ್ಷದವರು ಮಾತ್ರ ನನ್ನ ಬೆನ್ನಿಗೆ ನಿಂತರು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post