ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಗೃಹಲಕ್ಷ್ಮಿ ಯೋಜನೆ #Gruhalakshmi Scheme ಹಣದ ವಿಚಾರವಾಗಿ ವಿಧಾನಸಭೆ ಅಧಿವೇಶನದಲ್ಲಿ ತಪ್ಪು ಮಾಹಿತಿ ನೀಡಿ ವಿಪಕ್ಷಗಳ ತೀವ್ರ ಟೀಕೆ, ವಿರೋಧಕ್ಕೆ ಗುರಿಯಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ #Minister Lakshmi Hebbalkar ಬುಧವಾರ ಸದನದಲ್ಲಿ ಸ್ಪಷ್ಟನೆ ನೀಡಿದರು.
ಸದನದಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಪಾವತಿಯಲ್ಲಿ ವಿಳಂಬವಾಗಿರುವುದನ್ನು ಒಪ್ಪಿಕೊಂಡರು.
ಈ ಕುರಿತು ಮಾತನಾಡಿದ ಅವರು, ತನಗೆ ಜವಾಬ್ದಾರಿಯ ಅರಿವಿದ್ದು, ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.
ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ವಿಚಾರವನ್ನು ವಿಪಕ್ಷ ನಾಯಕ ಆರ್. ಅಶೋಕ್ #R Ashok ಪ್ರಸ್ತಾಪಿಸಿದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಬಗ್ಗೆ ಸ್ಪಷ್ಟನೆ ಕೊಡಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಮಾತನಾಡಿ, 2 ತಿಂಗಳ ಹಣ ಬಾಕಿ ಇದೆ ಎಂದು ಒಪ್ಪಿಕೊಂಡರು.
ಎರಡು ತಿಂಗಳ ಕಂತು ಬಿಡುಗಡೆ ಬಗ್ಗೆ ಸಚಿವರು ತಪ್ಪು ಉತ್ತರ ಕೊಟ್ಟಿದ್ದಾರೆ. ಅವರು ಕ್ಷಮೆ ಕೇಳಬೇಕು ಎಂದು ಅಶೋಕ್ ಸದನದಲ್ಲಿ ಆಗ್ರಹಿಸಿದರು. ಪ್ರತಿಪಕ್ಷದವರ ಮನವೊಲಿಸಲು ಸ್ಪೀಕರ್ ಪ್ರಯತ್ನಿಸಿದರು. ಆದರೆ, ಕ್ಷಮೆಯಾಚನೆಗೆ ಬಿಜೆಪಿ ನಾಯಕರು ಪಟ್ಟು ಹಿಡಿದರು.
ಈ ವೇಳೆ ಪ್ರತಿಕ್ರಿಯಿಸಿದ ಲಕ್ಷ್ಮಿ ಹೆಬ್ಬಾಳ್ಕರ್, 54 ಸಾವಿರ ರೂ. ಪ್ರತಿ ಮಹಿಳೆಯರಿಗೆ ಹಾಕಿದ್ದಾವೆ. ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದ್ದೇನೆ. ಆ ಪದ ಸುರೇಶ್ ಕುಮಾರ್ ಅವರಿಗೆ ಇಷ್ಟ ಆಗದಿದ್ದರೆ ಕ್ಷಮೆ ಕೇಳುತ್ತೇನೆ. ಆದರೆ, ನಾನು ಒಬ್ಬ ಮಹಿಳೆ ಅಂತ ಈ ಮಟ್ಟಕ್ಕೆ ನೀವು ಮಾತಾಡ್ತಿರೋದು ಸರಿಯಲ್ಲ ಎಂದು ಹೆಬ್ಬಾಳ್ಕರ್ ಹೇಳಿದರು. ಇದಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.
ಇನ್ನು, ಮುಖ್ಯಮಂತ್ರಿಗಳು ಈಗಾಗಲೇ ಸದನದಲ್ಲಿ ಈ ವಿಷಯವನ್ನು ಆದಷ್ಟು ಶೀಘ್ರದಲ್ಲಿ ಪರಿಹರಿಸುವುದಾಗಿ ಹೇಳಿದ್ದಾರೆ. ಹಣವನ್ನು ಬೇರೆ ಕಡೆಗೆ ವರ್ಗಾಯಿಸಲಾಗಿಲ್ಲ ಅಥವಾ ಯಾವುದೇ ದುರುಪಯೋಗವಾಗಿಲ್ಲ ಎಂದು ಸಚಿವೆ ಸ್ಪಷ್ಟಪಡಿಸಿದರು.
ಎರಡು ತಿಂಗಳ ಹಣ ಪಾವತಿಯಲ್ಲಿ ವ್ಯತ್ಯಯವಾಗಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದ್ದು, ಮುಂದಿನ ದಿನಗಳಲ್ಲಿ ಅದನ್ನು ಸರಿಪಡಿಸುವುದಾಗಿ ಅವರು ತಿಳಿಸಿದರು. ತಮ್ಮ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಲಕ್ಷ್ಮಿ ಹೇಳಿದರು.
ಅಷ್ಟರಲ್ಲಿ ಅರವಿಂದ ಬೆಲ್ಲದ್ ಸೇರಿದಂತೆ ಪ್ರತಿಪಕ್ಷದ ನಾಯಕರು ಕ್ಷಮೆಗೆ ಆಗ್ರಹಿಸಿದರು. ಇದೇ ವೇಳೆ ಸದನದಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















