ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ನಮ್ಮ ಗುರಿ ಸಧೃಡ ಭಾರತ, ಸದೃಢ ಕರ್ನಾಟಕ ನಿರ್ಮಾಣ. ನಾವು ಮಕ್ಕಳ ಜೀವ ಮತ್ತು ಜೀವನದ ಜೊತೆ ಕೆಲಸ ಮಾಡುತ್ತಿದ್ದೇವೆ. ಹಾಗಾಗಿ ಎಲ್ಲರೂ ಸೂಕ್ತ ರೀತಿಯಿಂದ, ಇಲಾಖೆಗೆ ಕೆಟ್ಟ ಹೆಸರು ಬರದಂತೆ ಕೆಲಸ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Minister Lakshmi Hebbalkar ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಬೆಳಗಾವಿಯಲ್ಲಿ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರ ಸಭೆ ನಡೆಸಿ ಅವರು ಮಾತನಾಡುತ್ತಿದ್ದರು.
ಪ್ರತಿಯೊಬ್ಬರೂ ಆಯಾ ಜಿಲ್ಲೆಯ, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇಲಾಖೆಯ ಕಾರ್ಯವೈಖರಿಯ ಕುರಿತು ಸ್ಪಷ್ಟವಾದ ಮಾಹಿತಿ ನೀಡಬೇಕು. ಜನಪ್ರತಿನಿಧಿಗಳಿಗೆ ಗೌರವ ಕೊಟ್ಟು ಕೆಲಸ ನಿರ್ವಹಿಸಬೇಕು. ಆಹಾರದ ಗುಣಮಟ್ಟದ ಬಗ್ಗೆ ಗಮನಕೊಡಬೇಕು. ಯಾವುದೇ ಒಂದು ಮಗುವಿಗೂ ಕೂಡ ಕಳಪೆ ಆಹಾರ ಹೋಗಕೂಡದು. ಎಲ್ಲೂ ಸಮಸ್ಯೆಯಾಗಬಾರದು ಎಂದು ಸ್ಪಷ್ಟವಾಗಿ ಸೂಚಿಸಿದರು.
Also read: ಬಸವೇಶ್ವರ ಏತ ನೀರಾವರಿ ಯೋಜನೆ: 2024ರ ಸೆಪ್ಟೆಂಬರ್ ಒಳಗೆ ಪೂರ್ಣಗೊಳಿಸಿ: ಸಿದ್ದರಾಮಯ್ಯ ಸೂಚನೆ
ನಾವು ಮಂತ್ರಿಗಳು ಇಂದು ಇರಬಹುದು, 5 ವರ್ಷದ ಬಳಿಕ ಬದಲಾಗಬಹುದು. ಆದರೆ ಅಧಿಕಾರಿಗಳು ನಿರಂತರವಾಗಿ ಇರುವವರು. ಯಾವುದೇ ಗೊಂದಲ ಸೃಷ್ಟಿಯಾಗದಂತೆ ಕೆಲಸ ನಿರ್ವಹಿಸಬೇಕು. ಏನೇ ಸಮಸ್ಯೆಗಳಿದ್ದರೂ ತಕ್ಷಣ ನನ್ನ ಗಮನಕ್ಕೆ ತರಬೇಕು ಹಗೂ ಸರಿಪಡಿಸಿಕೊಳ್ಳಬೇಕು. ಆಹಾರದ ಗುಣಮಟ್ಟ ತೃಪ್ತಿಕರವಾಗಿಲ್ಲ ಎಂದರೆ ಅಂತಹ ಪೂರೈಕೆದಾರರನ್ನು ರದ್ದುಪಡಿಸೋಣ. ಆಹಾರದ ಪ್ರಮಾಣ ಮತ್ತು ಗುಣಮಟ್ಟ ಎರಡೂ ಸರಿಯಾಗಿರಬೇಕು. ಗ್ಯಾಸ್, ತರಕಾರಿಯ ಹಣ ಮತ್ತು ಸಂಬಳ ಎಲ್ಲವೂ ಸರಿಯಾಗಿ ಹೋಗಬೇಕು. ನಿರಂತರವಾಗಿ ಅಂಗನವಾಡಿ ಕಾರ್ಯಕರ್ತರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಬೇಕು ಎಂದು ಸಚಿವರು ಸೂಚಿಸಿದರು.
ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್ ಎಲ್ಲರಿಗೂ ಕಡ್ಡಾಯವಾಗಿ ತಲುಪಬೇಕು. ವಾಹನಗಳ ಬಾಕಿ ಬಾಡಿಗೆ ಹಣವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಒಟ್ಟಾರೆ ಇಲಾಖೆಗೆ ಒಳ್ಳೆಯ ರೀತಿಯ ಹೆಸರು ಬರುವಂತೆ ಎಲ್ಲರೂ ಸೇರಿ ಕೆಲಸ ಮಾಡಿ ಎಂದು ಲಕ್ಷಿö್ಮÃ ಹೆಬ್ಬಾಳ್ಕರ್ ತಿಳಿಸಿದರು.
ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ. ಪ್ರಕಾಶ್, ನಿರ್ದೇಶಕಿ ಅರ್ಚನ, ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ ಉಪಸ್ಥಿತರಿದ್ದರು.
(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post