ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಮುಂಜಾನೆ, ಬೆಳಗಾವಿ ನಗರ ಅನಾಗೊಳದಲ್ಲಿ ಪುನರ್ ಪ್ರತಿಷ್ಠಾಪನ ಗಳಿಸಿದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ನಂತರ ಮಾಧ್ಯಮದ ಮಿತ್ರರೊಂದಿಗೆ ಮಾತನಾಡಿದ ಸಚಿವರು, ರಾಯಣ್ಣ ರವರ ಪ್ರತಿಮೆಗೆ ಅವಮಾನ ಮಾಡಿದ ದುಷ್ಕರ್ಮಿಗಳು ದೇಶ ದ್ರೋಹಿಗಳು, ಅವರಿಗೆ ತಕ್ಕ ಶಾಸ್ತಿ ವಿಧಿಸುತ್ತೇವೆ. ಇದರ ಹಿಂದಿನ ಇರಬಹುದಾದ ಸಂಚನ್ನು ಪೊಲೀಸರು ಬಯಲುಗೊಳಿಸುತ್ತಾರೆ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








