ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು #Maternal Serial Death in Ballary ವಿಚಾರ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗುತ್ತಿದೆ, ಈ ಸರಣಿ ಸಾವಿನ ಹಿನ್ನೆಲೆಯಲ್ಲಿ ಯಾವೆಲ್ಲಾ ಕ್ರಮಗಳನ್ನು ಕೈಗೊಂಡಿದ್ದೀರಾ ಹಾಗೂ ರಾಜ್ಯದ ಜನತೆಗೆ ಯಾವ ರೀತಿ ಆತ್ಮ ಸ್ಥೈರ್ಯವನ್ನು ತುಂಬಿದ್ದೀರಾ ಎಂದು ಶಾಸಕ ಡಾ. ಧನಂಜಯ ಸರ್ಜಿ#MLC Dhananjaya Sarji ಅವರು ಸರ್ಕಾರವನ್ನು ಪ್ರಶ್ನಿಸಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ 154ನೇ ವಿಧಾನಪರಿಷತ್ ಕಲಾಪದಲ್ಲಿ ಮಂಗಳವಾರ ಬಳ್ಳಾರಿಯಲ್ಲಿ ಸಂಭವಿಸಿದ ಬಾಣಂತಿಯರ ಸಾವಿನ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಬಳ್ಳಾರಿ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಭಾಣಂತಿಯರ ಸರಣಿ ಸಾವಿನ ಬಳಿಕ ಆಸ್ಪತ್ರೆಗೆ ಹೆರಿಗೆ ಮತ್ತು ಇತರೆ ಚಿಕಿತ್ಸೆಗೆ ಬರುವ ರೋಗಿಗಳ ಸಂಖ್ಯೆ ಕ್ಷೀಣಿಸಿದೆ, ಬಳ್ಳಾರಿ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಸೆಪ್ಟೆಂಬರ್ ನಲ್ಲಿ 580 ಹೆರಿಗೆ, ಅಕ್ಟೋಬರ್ ನಲ್ಲಿ 577 ಹಾಗೂ ಬಾಣಂತಿಯರ ಸಾವಿನ ಪ್ರಕರಣ ನಡೆದ ನಂತರ 289 ಹೆರಿಯಾದರೆ, ಡಿಸೆಂಬರ್ 14 ರ ಅಂಕಿ ಅಂಶದಂತೆ 74 ಹೆರಿಯಾಗಿದೆ, ಗರ್ಭಿಣಿಯರು ಆತಂಕಗೊಂಡು ಬಳ್ಳಾರಿ ಆಸ್ಪತ್ರೆಗೆ ಬರುವುದು ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ, ಆ ಭಾಗದ ಜನ ಮತ್ತು ರಾಜ್ಯದ ಪುನಾ ಆಸ್ಪತ್ರೆಗೆ ಬರಲು ಯಾವ ರೀತಿಯ ಆತ್ಮಸ್ಥೈರ್ಯವನ್ನು ನೀಡಿದ್ದೀರಾ ಎಂದು ಪ್ರಶ್ನಿಸಿದರು.
Also read: ಇದು ನೀವು ಕೇಳಿರದ `ಡಿಂಗಾ ಡಿಂಗಾ’ ಕಾಯಿಲೆ | ಯಾರು ಇದರ ಟಾರ್ಗೆಟ್? ಪತ್ತೆಯಾಗಿದ್ದೆಲ್ಲಿ?

ಐವಿ ಪ್ಲ್ಯೂಡ್ ನ ರಿಯಾಕ್ಸ ನ್ ಆಗುವ ಸಾಧ್ಯತೆ ತೀರಾ ಕಡಿಮೆ. ಐವಿ ಪ್ಲ್ಯೂಡ್ ನ ಬಹು ಅಂಗಾಂಗಳಿಗೆ ತೊಂದರೆಯಾಗಿದೆ ಎಂಬ ವರದಿ ಇದೆ, ಸಮಸ್ಯೆ ಆಗುವುದಾದರೆ ಇತರರಿಗೂ ಆಗಬೇಕಿತ್ತು, ಹಾಗಾಗಿಲ್ಲ, ಹಾಗಿದ್ದರೆ ಐವಿಫ್ಯೂ ಅವಧಿ ಮುಗಿದಿತ್ತಾ ? ಇಲ್ಲವೇ ಫಂಗಸ್ ಬೆಳೆದಿತ್ತಾ? ಯಾಕಾಗಿ ಅದೇ ಕಂಪನಿಯಿಂದ ಖರೀದಿಸಲಾಗುತ್ತಿದೆ, ದರವೆಷ್ಟು? ಬೇರೆ ಕಂಪನಿಗಳಿಗೂ ಇದಕ್ಕೂ ಇರುವ ವ್ಯತ್ಯಾಸವೇನು? ಆ ಕಂಪನಿಯನ್ನೇ ಆಯ್ಕೆ ಮಾಡಿರುವ ಬಗ್ಗೆ ಮಾಹಿತಿ ನೀಡುವಂತೆ ಸರ್ಕಾರವನ್ನು ಡಾ.ಧನಂಜಯ ಸರ್ಜಿ ಆಗ್ರಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post