No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಪ್ರತಿ ನಗರಪಾಲಿಕೆಯಲ್ಲಿ ಡಿಜಿಟಲ್ ಗ್ರಂಥಾಲಯ ಸ್ಥಾಪನೆ: ಮುಖ್ಯಮಂತ್ರಿ ಬೊಮ್ಮಾಯಿ

kalpa News by kalpa News
September 27, 2021
in ಬೆಳಗಾವಿ
0
ಪತ್ರಕರ್ತನ ಚಿಕಿತ್ಸೆಗೆ ಆರ್ಥಿಕ ನೆರವು: ಸಿಎಂ ಬೊಮ್ಮಾಯಿಗೆ ಅಭಿನಂದನೆ

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  |

ಬೆಳಗಾವಿಯ ಇ- ಗ್ರಂಥಾಲಯ ಕಾರ್ಯವೈಖರಿಯನ್ನು ಗಮನಿಸಿ, ಅದು ಯಶಸ್ವಿಯಾದಲ್ಲಿ, ಇದೇ ಮಾದರಿಯಲ್ಲಿ ಪ್ರತಿಯೊಂದು ಮಹಾನಗರ ಪಾಲಿಕೆಯಲ್ಲಿ ಇ- ಗ್ರಂಥಾಲಯ ತೆರೆಯಲು ಸರ್ಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.



ಬೆಳಗಾವಿಯಲ್ಲಿ ದೇಶಭಕ್ತ ರವೀಂದ್ರ ಕೌಶಿಕ್ ಅವರ ಹೆಸರಿನಲ್ಲಿ ಇ- ಗ್ರಂಥಾಲಯವನ್ನು ಉದ್ಘಾಟಿಸಿ ಅವರು ಇಂದು ಮಾತನಾಡುತ್ತಿದ್ದರು.

ಡಿಜಿಟಲ್ ಗ್ರಂಥಾಲಯ ಓದುಗರಿಗೆ, ಬರಹಗಾರರಿಗೆ, ಜ್ಞಾನಪಡೆಯಲು ಬಯಸುವವರಿಗೆ ಜ್ಞಾನದ ರಹದಾರಿಯನ್ನು ತೆರೆದಿದೆ. ಇದರಿಂದ ಡಿಜಿಟಲ್ ಶಕ್ತಿಯನ್ನು ಮನೆ ಮನೆಗೆ ತಲುಪಿಸುವ ಕೆಲಸವಾಗುತ್ತದೆ ಎಂದರು. ಜ್ಞಾನ ನೀಡುವುದು ಮತ್ತು ಪಡೆಯುವುದು ಅತ್ಯಗತ್ಯ. ಜ್ಞಾನ ಮತ್ತು ಧ್ಯಾನ ಇವೆರಡು ಬದುಕಿಗೆ ಸಾರ್ಥಕತೆ ಕೊಡುವ, ಅರ್ಥವನ್ನು ಕೊಡುವ, ಪರೋಪಕಾರ ಮಾಡುವ ಗುಣವನ್ನು ಕೊಡುವ ಪ್ರಮುಖ ಮಾರ್ಗವಾಗಿದೆ. ಜ್ಞಾನ ಮತ್ತು ಧ್ಯಾನಗಳನ್ನು ಪಡೆದು ಅದನ್ನು ಸಮಾಜಕ್ಕೆ ಹಂಚಬೇಕು ಎಂಬ ಕೆಲಸವನ್ನು ಗ್ರಂಥಾಲಯ ಮಾಡುತ್ತದೆ. ಬೆಳಗಾವಿ ಕಾಸ್ಮೋಪಾಲಿಟನ್ ನಗರ.ಇಡೀ ಭಾರತವೇ ಬೆಳಗಾವಿಯಲ್ಲಿದೆ. ಬೆಳಗಾವಿ ಜನತೆ ಕನ್ನಡ ಮತ್ತು ರಾಷ್ಟ್ರದ ಬಗ್ಗೆ ಅಭಿಮಾನವಿರುವವರು. ಸಂಕುಚಿತ ಭಾವನೆ ಮಾತ್ತು ವಿಚಾರಗಳಿಗೆ ಬೆಳಗಾವಿಯಲ್ಲಿ ಜಾಗ ಇಲ್ಲ ಎಂದು ನಿರೂಪಿಸಿದ್ದು, ಹೃದಯ ಶ್ರೀಮಂತಿಕೆ ಇರುವವರು. ಮಹಾನಗರ ಪಾಲಿಕೆಯ ನೂತನ ಸದಸ್ಯರ ಮೇಲೆ ದೊಡ್ಡ ಜವಾಬ್ದಾರಿ ಇದೆ. ಜಾತ್ಯಾತೀತವಾಗಿ, ಭಾಷಾತೀತವಾಗಿ ಜನರು ಆಶೀರ್ವಾದ ಮಾಡಿದ್ದಾರೆ. ಆ ವಿಶ್ವಾಸವನ್ನು ಉಳಿಸಬೇಕು. ಮಹಾನಗರ ಪಾಲಿಕೆ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದರು.


ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯಾಗಲಿದೆ ಎಂದ ಮುಖ್ಯಮಂತ್ರಿಗಳು, ನಮ್ಮ ಸರ್ಕಾರ ಗಡಿ ಜಿಲ್ಲೆಯ ಅಭಿವೃದ್ಧಿಗೆ ಕಂಕಣಬದ್ಧವಾಗಿದೆ. ಬೆಳಗಾವಿ ಕರ್ನಾಟಕದ ಕಿರೀಟಪ್ರಾಯವಾಗಿರುವ ಜಿಲ್ಲೆ. ಹಾಗಾಗಿ ಅದರ ಗೌರವ, ಆತ್ಮಸ್ಥೈರ್ಯ ಹೆಚ್ಚಿಸುವ ಕೆಲಸ ನಮ್ಮ ಸರ್ಕಾರದ ಗಮನದಲ್ಲಿರುತ್ತದೆ. ಪಾಲಿಕೆಯ ಎಲ್ಲ ಕೆಲಸ ನಿಗದಿತ ಅವಧಿಯಲ್ಲಿ ಮುಗಿಯಲಿ ಹಾಗೂ ಗುಣಮಟ್ಟದಿಂದ ಕೂಡಿರಲಿ ಎಂದರು.

ಸ್ಮಾರ್ಟ್ ಸಿಟಿಯಲ್ಲಿ ಬೆಳಗಾವಿ ಮೊದಲ ಸ್ಥಾನ ಪಡೆಯಲಿ:
ಸ್ಮಾರ್ಟ್ ಸಿಟಿಯಲ್ಲಿ ಬೆಳಗಾವಿ ರಾಜ್ಯದಲ್ಲಿ 2 ನೇ ಸ್ಥಾನದಲ್ಲಿದೆ. ಬೆಳಗಾವಿ ಮೊದಲ ಸ್ಥಾನ ಪಡೆಯಬೇಕೆನ್ನುವುದು ನಮ್ಮ ಆಶಯ. ಅದಕ್ಕೆ ಪೂರಕವಾಗಿ ಸರ್ಕಾರ ಎಲ್ಲ ಸಹಕಾರ ನೀಡುವುದಾಗಿ ತಿಳಿಸಿದರು. ಅಭಯ್ ಪಾಟೀಲ್ ಮತ್ತು ಅನಿಲ್ ಬೆಣಕೆ ಅಂತಹ ಶಾಸಕರಿದ್ದಾಗ ಬೆಳಗಾವಿ ಮೊದಲ ಸ್ಥಾನ ಪಡೆಯಬೇಕು. ಅವರ ವೇಗಕ್ಕೆ ತಕ್ಕ ಹಾಗೆ ಕೆಲಸ ಮಾಡಲಾಗುವುದು. ಬೆಳಗಾವಿ ಜಿಲ್ಲೆ ನಾಯಕರಿಂದ ಕೂಡಿರುವ ಜಿಲ್ಲೆ. ಶಿಕ್ಷಣ ತಜ್ಞರು, ಕಾರ್ಖಾನೆಗಳ ಮಾಲೀಕರು ಇದ್ದಾರೆ. ಗೋವಿಂದ ಕಾರಜೋಳರಂಥ ಹಿರಿಯರ ಅನುಭವದ ಮಾರ್ಗದರ್ಶನ ದೊರಕುತ್ತಿದೆ. ಬೆಳಗಾವಿ ನಗರಪಾಲಿಕೆಯ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಯಶಸ್ಸು ಸಿಗಲು ಗೋವಿಂದ ಕಾರಜೋಳ ಅವರ ಪಾತ್ರ ಮಹತ್ವದ್ದು. ಎಲೆಮರೆಯ ಕಾಯಿಯಂತೆ ಕೆಲಸ ಮಾಡುತ್ತಾರೆ.  ಕೆ.ಎಲ್.ಇ ಸೊಸೈಟಿ ಪ್ರಭಾಕರ್ ಕೋರೆ ಅವರ ನೇತೃತ್ವದಲ್ಲಿ ಇಡೀ ಜಿಲ್ಲೆಯಲ್ಲಿ ಶಿಕ್ಷಣ ಕ್ರಾಂತಿ ಆಗಿದೆ. ಬೆಳಗಾವಿ ನಗರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅದರ ಹಿಂದೆ ಕವಟಗಿಮಠ ಅವರಿದ್ದಾರೆ ಎಂದರು.

ದೇಶಭಕ್ತ ರವೀಂದ್ರ ಕೌಶಿಕ್ ಅವರ ಸಾಹಸಮಯ ಜೀವನ, ಅವರ ನೋವು, ಯಾತನೆ, ಸಹನಾ ಶಕ್ತಿ ಅಪಾರ. ಅವರ ನೆನಪಿನಲ್ಲಿ 2.50 ಕೋಟಿ ವೆಚ್ಚದಲ್ಲಿ ಡಿಜಿಟಲ್ ಗ್ರಂಥಾಲಯ ಮಾಡಿರುವುದು ಅತ್ಯಂತ ಯೋಗ್ಯವಾಗಿದೆ ಎಂದರು.

ಅಭಯ್ ಪಾಟೀಲ್ ಅವರೊಡನೆ ಕಳೆದ 15 ವರ್ಷಗಳಿಂದ ಮುಖ್ಯಮಂತ್ರಿಗಳು ತಮ್ಮ ಒಡನಾಟವನ್ನು ಸ್ಮರಿಸಿ, 2004 ರಲ್ಲಿ ಗ್ರಾಮವೊಂದರ ವಿಶೇಷವಾಗಿ ಅಭಿವೃದ್ಧಿ ಮಾಡಿ, ಜನರ ಸಹಭಾಗಿತ್ವದಲ್ಲಿ ಎಲ್ಲ ಸವಲತ್ತುಗಳನ್ನು ಒದಗಿಸಿದ್ದರು ಎಂದರು. ಬೆಳಗಾವಿ ನಗರದಲ್ಲಿ ಗಾಳಿಪಟ ಉತ್ಸವವನ್ನು ಆಯೋಜಿಸಿ, ಹಬ್ಬದ ಆಚರಣೆ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಸಚಿವ ಬಿ.ಎ.ಬಸವರಾಜ, ಗೋವಿಂದ ಕಾರಜೋಳ, ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ ಮೊದಲಾದವರು ಹಾಜರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BelgaviCM BommaiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಬೆಳಗಾವಿಮುಖ್ಯಮಂತ್ರಿ ಬೊಮ್ಮಾಯಿ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉತ್ತಮ ಆರೋಗ್ಯಕ್ಕಾಗಿ ಪೌಷ್ಠಿಕಾಂಶಯುಕ್ತ ಆಹಾರ ಸೇವನೆ ಅಗತ್ಯ: ದಯಾನಂದ ಹೇಳಿಕೆ

Next Post

ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್‌ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

kalpa News

kalpa News

Next Post
ಮುಂದುವರೆಯತ್ತಾ ಲಾಕ್ ಡೌನ್: ಪರಿಸ್ಥಿತಿ, ಮೂಲಗಳು ಏನನ್ನುತ್ತವೆ? ಇಲ್ಲಿದೆ ಸಂಫೂರ್ಣ ಮಾಹಿತಿ

ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್‌ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL