ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಾ, ಸಮಾಜದ ಒಳಿತಿಗಾಗಿ ಹುತಾತ್ಮರಾದ ಪೊಲೀಸ್ ಸಿಬ್ಬಂದಿಯನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಹೇಳಿದರು.
ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರಿಗೆ ಗೌರವ ವಂದನೆ ಸಲ್ಲಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಯಾವುದೇ ಸಂಘರ್ಷಗಳು ನಡೆದಾಗ ಪೊಲೀಸರು ಮೊದಲು ನೆನಪಾಗುತ್ತಾರೆ, ಸಂದಿಗ್ಧ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ನೆರವಾಗುವ ಕೆಲಸ ಪೊಲೀಸರು ಮಾಡುತ್ತಿದ್ದಾರೆ. ಪ್ರಾಮಾಣಿಕತೆ, ದಕ್ಷತೆಯಿಂದ ಕರ್ತವ್ಯ ನಿರ್ವಹಿಸುತ್ತಾ, ಪ್ರಾಣ ಕಳೆದುಕೊಂಡ ಅಧಿಕಾರಿಗಳ ಸ್ಪೂರ್ತಿಯನ್ನು ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದರು.

ಇಲಾಖೆಯು ಜನಸ್ನೇಹಿ ಪೊಲೀಸ್, ನಿಮ್ಮೊಂದಿಗೆ ಪೊಲೀಸ್ ಸೇರಿದಂತೆ ಹತ್ತು ಹಲವು ವಿಶಿಷ್ಟವಾದ ಕೆಲಸಗಳ ಮೂಲಕ ಜನಪರ ಸೇವೆ ಒದಗಿಸುವಲ್ಲಿ ನಿರತವಾಗಿದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ಕುಮಾರ್ ಬಂಡಾರು ಅವರು ಮಾತನಾಡಿ, 1959 ರ ಚೀನಾ ಯುದ್ದದಲ್ಲಿ ವೀರಮರಣ ಹೊಂದಿದ 10 ಜನ ಸಿಆರ್ಪಿಎಫ್ ಯೋಧರ ಸ್ಮರಣಾರ್ಥ ಪ್ರತಿ ವರ್ಷ ಅ.21ರಂದು ಪೊಲೀಸ್ ಹುತಾತ್ಮರ ದಿನ ಎಂದು ಆಚರಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಟರಾಜ, ಲೋಕಾಯುಕ್ತ ಎಸ್ಪಿ ಶ್ರೀಹರಿ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿ ಮತ್ತು ಇತರರು ಇದ್ದರು.










Discussion about this post