ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಮಹಾತ್ಮ ಗಾಂಧೀಜಿಯವರಿಗೆ ಅತ್ಯಂತ ಪ್ರಿಯವಾದ ಖಾದಿ ಬಟ್ಟೆಗಳನ್ನು ಖರೀದಿಸುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ . ಶ್ರೀರಾಮುಲು ಮನವಿ ಮಾಡಿದರು.
ರಾಷ್ಟ್ರ ಪಿತ ಮಹಾತ್ಮ ಗಾಂಧಿಜಿ ಅವರ ಜಯಂತಿಯ ಹಿನ್ನೆಲೆಯಲ್ಲಿ ನಗರದ ಪಾರ್ವತಿ ನಗರದಲ್ಲಿರುವ ಖಾದಿ ಬಂಡಾರದಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸಿ ಮಾತನಾಡಿದರು.
ಮಹಾತ್ಮ ಗಾಂಧಿಜಿಯವರ ಆಶಯದಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ನಿಲಯಗಳು, ಆಶ್ರಮ ಶಾಲೆಗಳು ಮತ್ತು ಕಚೇರಿಗಳಲ್ಲಿ ಸ್ವಚ್ಚತಾ ಶ್ರಮದಾನ ಕಾರ್ಯಕ್ರಮವನ್ನು ಆಯೋಜಿಸಿ ನೈರ್ಮಲ್ಯತೆ ಕುರಿತು ಜಾಗೃತಿ ಮೂಡಿಸುವಂತೆ ನಿರ್ದೇಶಿಸಿದ್ದೇನೆ. ಅದರನ್ವಯ ರಾಜ್ಯದಲ್ಲಿರುವ ಇಲಾಖೆಯ ವ್ಯಾಪ್ತಿಯ ಎಲ್ಲ ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಚತಾ ಅಭಿಯಾನ ಹಾಗೂ ಸ್ವಚ್ಚತಾ ಶ್ರಮದಾನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳಿಗೆ ಸ್ವಚ್ಚತೆ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಗಾಂಧಿಜಿಯವರ ವಿಚಾರಧಾರೆಗಳನ್ನು ಮನನ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post