No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Sunday, March 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮರಣದ ನಂತರ ಮತ್ತೊಬ್ಬರ ಜೀವ ಉಳಿಸಲು ಅಂಗಾಂಗ ದಾನ ಮಾಡಿ: ಸಚಿವ ಸುಧಾಕರ್ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 14, 2022
in ಬೆಂಗಳೂರು ನಗರ
0
ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಆರೋಗ್ಯ ಸಚಿವ ಡಾ. ಸುಧಾಕರ್

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಅಂಗಾಂಗಗಳ ದಾನದಲ್ಲಿ ಅಮೆರಿಕ ಹಾಗೂ ಚೀನಾ ದೇಶಗಳ ಬಳಿಕ, ಭಾರತ ಮೂರನೇ ಸ್ಥಾನದಲ್ಲಿದೆ. 2012-13 ನೇ ಸಾಲಿಗೆ ಹೋಲಿಸಿದರೆ, ಅಂಗಾಂಗ ದಾನದ ಪ್ರಮಾಣವು ನಾಲ್ಕು ಪಟ್ಟು ಹೆಚ್ಚಾಗಿದೆ. ದೇಶದಲ್ಲಿ ವಾರ್ಷಿಕ ಅಂಗಾಂಗ ದಾನಗಳ ಸಂಖ್ಯೆ 2013 ರಲ್ಲಿ 4,990 ಆಗಿದ್ದು, 2019 ರಲ್ಲಿ 12,746 ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು, ಅಂಗಾಂಗ ದಾನದ ಪ್ರಮಾಣದಲ್ಲಿ ನಾಲ್ಕು ಪಟ್ಟು ಏರಿಕೆ ಕಂಡಿದ್ದರೂ, ಅಂಗಾಂಗಗಳ ಬೇಡಿಕೆಯನ್ನು ಪೂರೈಸಲು ಇನ್ನಷ್ಟು ಹಾದಿಯನ್ನು ಸವೆಸಬೇಕಾಗಿದೆ. ದೇಶದಲ್ಲಿ ಕೇವಲ ಶೇ. 3ರಷ್ಟು ಜನರು ಮಾತ್ರ ಅಂಗಾಂಗ ದಾನಕ್ಕೆ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಒಂದು ಅಂದಾಜಿನ ಪ್ರಕಾರ, ದೇಶದಲ್ಲಿ 10 ಲಕ್ಷ ಜನರಲ್ಲಿ, 0.65 ಮಂದಿ ಮಾತ್ರ ಅಂಗಾಂಗ ದಾನ ಮಾಡುತ್ತಿದ್ದಾರೆ. ಸ್ಪೇನ್ ನಲ್ಲಿ ಈ ಪ್ರಮಾಣ 35 ಹಾಗೂ ಅಮೆರಿಕದಲ್ಲಿ 26 ರಷ್ಟಿದೆ. ಕೋವಿಡ್-19 ಸಾಂಕ್ರಾಮಿಕದಿಂದ ಭಾರತ ಸೇರಿದಂತೆ ಜಗತ್ತಿನೆಲ್ಲೆಡೆ ಅಂಗಾಂಗ ದಾನದ ಪ್ರಮಾಣ ಇಳಿಕೆಯಾಗಿದೆ. ಆದರೂ ಸಾಂಕ್ರಾಮಿಕಕ್ಕಿಂತ ಹಿಂದೆಯೂ ಅಂಗಾಂಗ ದಾನ ಹೆಚ್ಚಿನ ಪ್ರಮಾಣದಲ್ಲೇನೂ ನಡೆಯುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.

ಏಮ್ಸ್ ನ 2019 ರ ಅಂಕಿ ಅಂಶದ ಪ್ರಕಾರ, ವಾರ್ಷಿಕವಾಗಿ 1.5 ರಿಂದ 2 ಲಕ್ಷ ಜನರಿಗೆ ಮೂತ್ರಪಿಂಡ ಕಸಿಯ ಅಗತ್ಯವಿದೆ. ಆದರೆ ಈ ಪೈಕಿ 8,000 ಜನರು ಅಂದರೆ ಶೇ.4ರಷ್ಟು ರಷ್ಟು ಮಂದಿ ಮಾತ್ರ ಮೂತ್ರಪಿಂಡ ಪಡೆಯುತ್ತಿದ್ದಾರೆ. ಇದೇ ರೀತಿ ಪ್ರತಿ ವರ್ಷ 80,000 ರೋಗಿಗಳಿಗೆ ಯಕೃತ್ತು (ಲಿವರ್) ಕಸಿ ಅಗತ್ಯವಿದ್ದು, 1,800 ಮಂದಿ ಮಾತ್ರ ಕಸಿ ಮಾಡಿಸಿಕೊಳ್ಳಲು ಸಾಧ್ಯವಾಗುತ್ತಿದೆ. ವಾರ್ಷಿಕ ಸುಮಾರು 1 ಲಕ್ಷ ರೋಗಿಗಳಿಗೆ ಕಾರ್ನಿಯಾ ಅಥವಾ ಕಣ್ಣು ಸಂಬಂಧಿತ ಕಸಿ ಅಗತ್ಯವಿದ್ದು, ಅರ್ಧಕ್ಕಿಂತಲೂ ಕಡಿಮೆ ಮಂದಿಗೆ ಇದು ಲಭ್ಯವಾಗುತ್ತಿದೆ. ಹೃದಯ ಕಸಿ ಅಗತ್ಯವಿರುವ 10,000 ರೋಗಿಗಳಲ್ಲಿ 200 ಮಂದಿಗೆ ಮಾತ್ರ ಸರಿಯಾದ ಹೊಂದಾಣಿಕೆಯಾಗಿ ದಾನ ದೊರೆಯುತ್ತಿದೆ.

ಜನರಲ್ಲಿ ಜಾಗೃತಿಯ ಕೊರತೆಯಿಂದಾಗಿ ಅಂಗಾಂಗ ದಾನ ಕಡಿಮೆಯಾಗಿದೆ. ಅಂಗಾಂಗ ದಾನ ಹೆಚ್ಚಿಸಲು ಇಡೀ ಸಮಾಜ, ಜಾಗೃತ ನಾಗರಿಕರು, ವೈದ್ಯರು ಹಾಗೂ ಮಾಧ್ಯಮಗಳು ತಮ್ಮ ಪಾತ್ರ ವಹಿಸಬೇಕಿದೆ. ಈ ಮೂಲಕ ಅಂಗಾಂಗ ದಾನದ ಪ್ರಮಾಣ ಹೆಚ್ಚಿಸಬೇಕಿದೆ.

ಬೆವರು ಸುರಿಸಿ ಸಂಪಾದಿಸಿದ ಆಸ್ತಿ, ಹಣವನ್ನು ಚಾರಿಟಿಗೆ ದಾನ ಮಾಡುವ ವ್ಯಕ್ತಿಗಳನ್ನು ಗೌರವಿಸುವ ರೀತಿಯಲ್ಲಿ ಅಂಗಾಂಗ ದಾನಿಗಳನ್ನು ಗೌರವಿಸುವ ವಾತಾವರಣವನ್ನು ಸೃಷ್ಟಿಸಬೇಕಾದ ಅಗತ್ಯವಿದೆ. ಅಂಗಾಂಗ ದಾನವನ್ನು ವೈದ್ಯಕೀಯ ಪ್ರಕ್ರಿಯೆಯಂತೆ ನೋಡುವ ಬದಲು, ಅಂಗಾಂಗ ಪಡೆಯುವವರಿಗೆ ದಾನಿಯು ಜೀವದ ಕೊಡುಗೆಯನ್ನು ನೀಡುವ ಮಹತ್ಕಾರ್ಯವಾಗಿ ಪರಿಗಣಿಸಬೇಕಿದೆ.

ಕೋಲಾರ ಜಿಲ್ಲೆಯ 26 ವರ್ಷ ವಯಸ್ಸಿನ ಚೈತ್ರ ಅವರ ಅಂಗಾಂಗಗಳನ್ನು ದಾನ ಮಾಡಿರುವುದು ಬಹಳ ಸ್ಪೂರ್ತಿ ನೀಡುವ ಘಟನೆಯಾಗಿದ್ದು, ಇದು ಇಡೀ ಸಮಾಜಕ್ಕೆ ಉತ್ತಮ ನಿದರ್ಶನ. ಆಕೆಯು ವೈವಾಹಿಕ ಜೀವನದ ಸಂಭ್ರಮದ ಹೊಸ ಹೆಜ್ಜೆಯನ್ನು ಇರಿಸುವ ವೇಳೆಯಲ್ಲೇ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟಿರುವುದು ವಿಧಿಯ ಅನ್ಯಾಯ ಹಾಗೂ ಕ್ರೂರತನ. ಇಂತಹ ಹೃದಯವಿದ್ರಾವಕ ಘಟನೆ ನಡೆದು ಕುಟುಂಬದವರು ಸಹಿಸಲಾರದ ಅಪಾರ ನೋವಿನಲ್ಲಿದ್ದರೂ, ಆಕೆಯ ಅಂಗಾಂಗಗಳನ್ನು ದಾನ ಮಾಡಲು ಮುಂದಾಗಿರುವುದಕ್ಕೆ ಅವರಿಗೆ ಧನ್ಯವಾದ ಸಮರ್ಪಿಸುತ್ತೇನೆ. ಮರಣದ ನಂತರ ಮತ್ತೊಬ್ಬರ ಜೀವ ಉಳಿಸಲು ಸಾಧ್ಯವಾಗುವ ಅಂಗಾಂಗ ದಾನವನ್ನು ಮಾಡಲು ಎಲ್ಲರೂ ಪ್ರತಿಜ್ಞೆ ಮಾಡಬೇಕು ಎಂದು ಇದೇ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಕೋರುತ್ತೇನೆ.

ರಾಜ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ‘ಜೀವಸಾರ್ಥಕತೆ’ ತಂಡವು ಅಂಗಾಂಗ ದಾನಕ್ಕೆ ಉತ್ತೇಜನ ಮತ್ತು ದಾನದ ಪ್ರಕ್ರಿಯೆಯನ್ನು ಉತ್ತಮವಾಗಿ ನಿರ್ವಹಣೆ ಮಾಡುತ್ತಿದೆ. ಇದಕ್ಕಾಗಿ ಇಡೀ ತಂಡಕ್ಕೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: ಬೆಂಗಳೂರು
Share197Tweet123Send
Previous Post

ಯಾವುದೇ ಕಾರಣಕ್ಕೂ ನಮ್ಮ ಜನರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ: ಸಂಸದ ರಾಘವೇಂದ್ರ

Next Post

ಪೊಲೀಸ್ ಭದ್ರತೆಯಲ್ಲಿ ಜಿಲ್ಲೆಯಾದ್ಯಂತ ತರಗತಿಗಳು ಓಪನ್: ಇವಿಷ್ಟು ಶಿವಮೊಗ್ಗದ ಸೂಕ್ಷ್ಮ ಶಾಲೆಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪೊಲೀಸ್ ಭದ್ರತೆಯಲ್ಲಿ ಜಿಲ್ಲೆಯಾದ್ಯಂತ ತರಗತಿಗಳು ಓಪನ್: ಇವಿಷ್ಟು ಶಿವಮೊಗ್ಗದ ಸೂಕ್ಷ್ಮ ಶಾಲೆಗಳು

ಪೊಲೀಸ್ ಭದ್ರತೆಯಲ್ಲಿ ಜಿಲ್ಲೆಯಾದ್ಯಂತ ತರಗತಿಗಳು ಓಪನ್: ಇವಿಷ್ಟು ಶಿವಮೊಗ್ಗದ ಸೂಕ್ಷ್ಮ ಶಾಲೆಗಳು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

March 28, 2026
ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

March 28, 2026
ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

March 28, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

March 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL