No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಏಷ್ಯಾದಲ್ಲಿ ಅಮೆಜಾನ್‌ ನ ಎರಡನೇ ಅತಿ ದೊಡ್ಡ ಕಚೇರಿ ಬೆಂಗಳೂರಿನಲ್ಲಿ ಉದ್ಘಾಟನೆ

ವಿವಿಧ ವಿಭಾಗಗಳ 7,000ಕ್ಕೂ ಹೆಚ್ಚು ಉದ್ಯೋಗಿಗಳು ಕಾರ್ಯನಿರ್ವಹಿಸುವ ಸ್ಥಳಾವಕಾಶ

kalpa News by kalpa News
February 24, 2026
in ಬೆಂಗಳೂರು ನಗರ
0
ಏಷ್ಯಾದಲ್ಲಿ ಅಮೆಜಾನ್‌ ನ ಎರಡನೇ ಅತಿ ದೊಡ್ಡ ಕಚೇರಿ ಬೆಂಗಳೂರಿನಲ್ಲಿ ಉದ್ಘಾಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಅಮೆಜಾನ್ #Amazon ಇಂದು ಏಷ್ಯಾದಲ್ಲಿ ತನ್ನ ಎರಡನೇ ಅತಿ ದೊಡ್ಡ ಕಚೇರಿಯನ್ನು ಬೆಂಗಳೂರಿನಲ್ಲಿ ಉದ್ಘಾಟಿಸಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ #Kempegowda International Airport ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಐದು ಎಕರೆ ಪ್ರದೇಶದಲ್ಲಿ ನಿರ್ಮಿಸಲಾದ ಈ ಕಟ್ಟಡವನ್ನು ಕರ್ನಾಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ. ಪಾಟೀಲ್ ಅವರು ಅಧಿಕೃತವಾಗಿ ಉದ್ಘಾಟಿಸಿದರು.

1.1 ಮಿಲಿಯನ್ ಚದರ ಅಡಿ ವಿಸ್ತೀರ್ಣದ, 12 ಅಂತಸ್ತುಗಳ ಈ ಕ್ಯಾಂಪಸ್ ಭಾರತದಲ್ಲಿ ಇ-ಕಾಮರ್ಸ್, ಕಾರ್ಯಾಚರಣೆ, ಪಾವತಿಗಳು, ತಂತ್ರಜ್ಞಾನ ಮತ್ತು ಮಾರಾಟಗಾರರ ಸೇವೆಗಳಲ್ಲಿ ತೊಡಗಿರುವ 7,000 ಕ್ಕೂ ಹೆಚ್ಚು ಉದ್ಯೋಗಿಗಳು ಕಾರ್ಯನಿರ್ವಹಿಸುವ ಸ್ಥಳಾವಕಾಶ ಹೊಂದಿದೆ. ತಂಡಗಳನ್ನು ಒಗ್ಗೂಡಿಸಲು ಮತ್ತು ಸಹಯೋಗ ಮಾಡಿಕೊಳ್ಳಲು ಹಾಗೂ ಉದ್ಯೋಗಿಗಳ ಯೋಗಕ್ಷೇಮಕ್ಕೆ ಪೂರಕವಾಗುವಂತೆ ಈ ಹೊಸ ಕಟ್ಟಡವನ್ನು ವಿನ್ಯಾಸಗೊಳಿಸಲಾಗಿದೆ. ಭಾರತದಲ್ಲಿ ಅಮೆಜಾನ್‌ ನ ನಿರಂತರ ಹೂಡಿಕೆಯ ಭಾಗವಾಗಿ ಈ ಹೊಸ ಕ್ಯಾಂಪಸ್‌ ನ ಉದ್ಘಾಟನೆಗೊಂಡಿದೆ. ಕಂಪನಿಯು ಈಗಾಗಲೇ ಭಾರತದಲ್ಲಿ 40 ಶತಕೋಟಿ ಡಾಲರ್‌ ಗಿಂತಲೂ ಹೆಚ್ಚು ಹೂಡಿಕೆ ಮಾಡಿದ್ದು, 2030ರ ವೇಳೆಗೆ ಹೆಚ್ಚುವರಿಯಾಗಿ 35 ಶತಕೋಟಿ ಡಾಲರ್‌ ಹೂಡಿಕೆ ಮಾಡಲು ಬದ್ಧವಾಗಿದೆ.
ಸಚಿವ ಡಾ. ಎಂ.ಬಿ. ಪಾಟೀಲ್ #Minister M B Patil ಮಾತನಾಡಿ, “ಬೆಂಗಳೂರಿನಲ್ಲಿ ಅಮೆಜಾನ್‌ ನಿರಂತರ ಹೂಡಿಕೆ ಮಾಡುತ್ತಿದ್ದು, ಈ ಹೂಡಿಕೆಗಳು ಜಾಗತಿಕ ತಂತ್ರಜ್ಞಾನ ಮತ್ತು ಆವಿಷ್ಕಾರ ಕೇಂದ್ರವಾಗಿ ಭಾರತದ ಬೆಳೆಯುತ್ತಿರುವ ಪಾತ್ರವನ್ನು ತೋರಿಸುತ್ತದೆ. ಅಮೆಜಾನ್‌ ನಂತಹ ಬೃಹತ್ ಕ್ಯಾಂಪಸ್‌ ಗಳು ಉತ್ತಮ ಗುಣಮಟ್ಟದ ಉದ್ಯೋಗಗಳನ್ನು ಸೃಷ್ಟಿಸುತ್ತವೆ ಮತ್ತು ಭಾರತದ ಡಿಜಿಟಲ್ ಆರ್ಥಿಕತೆಯನ್ನು ಬಲಪಡಿಸುತ್ತವೆ. ನಾವು ಉದ್ಯೋಗಾವಕಾಶ ಹೆಚ್ಚಿಸುವ ಮತ್ತು ದೀರ್ಘಕಾಲೀನ ಸಂಬಂಧ ಬೆಳೆಸುವ ಹೂಡಿಕೆಗಳಿಗೆ ಮುಕ್ತವಾಗಿ ಸ್ವಾಗತಿಸುತ್ತೇವೆ” ಎಂದರು.

ಅಮೆಜಾನ್ ಇಂಡಿಯಾದ ಕಂಟ್ರಿ ಮ್ಯಾನೇಜರ್ ಸಮೀರ್ ಕುಮಾರ್ ಮಾತನಾಡಿ, “ಅಮೆಜಾನ್‌ ಗೆ ಭಾರತವು ಆದ್ಯತೆಯ ಕೇಂದ್ರವಾಗಿದ್ದು, ಬೆಂಗಳೂರು ನಮ್ಮ ಪ್ರಯಾಣದಲ್ಲಿ ಕೇಂದ್ರ ಪಾತ್ರ ವಹಿಸಿದೆ. ಕಳೆದ ಕೆಲವು ವರ್ಷಗಳಲ್ಲಿ ಇಲ್ಲಿ ನಮ್ಮ ಕೆಲವು ಹೊಸ ತಂತ್ರಜ್ಞಾನಗಳು ಮತ್ತು ಬಿಸಿನೆಸ್ ತಂಡಗಳು ಇಲ್ಲೇ ರೂಪುಗೊಂಡಿವೆ ಮತ್ತು ಇದು ಆವಿಷ್ಕಾರ ಮತ್ತು ಪ್ರತಿಭಾ ಸಂಪನ್ಮೂಲಗಳ ವಿಚಾರದಲ್ಲಿ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಿದೆ. ಈ ಕೇಂದ್ರ ಉದ್ಘಾಟನೆಗೆ ಆಗಮಿಸಿರುವ ಎಂ.ಬಿ. ಪಾಟೀಲ್ ಅವರಿಗೆ ಮತ್ತು ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕ ಸರ್ಕಾರಕ್ಕೆ ನಾವು ಕೃತಜ್ಞರಾಗಿದ್ದೇವೆ. ನಾವು ಭಾರತ ಮತ್ತು ಜಾಗತಿಕ ಮಟ್ಟದಲ್ಲಿ ಹೆಚ್ಚು ಗ್ರಾಹಕರನ್ನು ಹೊಂದುತ್ತಿರುವಂತೆ, ಇಲ್ಲಿ ಮೂಲಸೌಕರ್ಯ, ತಂತ್ರಜ್ಞಾನ ಮತ್ತು ಪ್ರತಿಭೆಗಳಲ್ಲಿ ಹೂಡಿಕೆ ಮಾಡಲು ನಾವು ಬದ್ಧರಾಗಿದ್ದೇವೆ” ಎಂದು ತಿಳಿಸಿದರು.
ಕ್ಯಾಂಪಸ್‌ ವಿಶಿಷ್ಟವಾಗಿ ಮೂಡಿಬಂದಿದ್ದು, ಈ ಕ್ಯಾಂಪಸ್‌ ನಲ್ಲಿ ಅತ್ಯುತ್ತಮ ವರ್ಕ್ ಪ್ಲೇಸ್ ಗಳು, ಸಹಯೋಗ ಕೊಠಡಿಗಳು ವಿನ್ಯಾಸಗೊಂಡಿವೆ. ಮೀಟಿಂಗ್ ರೂಮ್‌ಗಳು, ಹಡಲ್ ಸ್ಪೇಸ್‌ಗಳು ಮತ್ತು 200ಕ್ಕೂ ಹೆಚ್ಚು ಜನರಿಗೆ ಅವಕಾಶ ನೀಡುವ ಈವೆಂಟ್ ಸ್ಪೇಸ್‌ ಗಳಿವೆ. ಉದ್ಯೋಗಿಗಳಿಗಾಗಿ ಬಾಸ್ಕೆಟ್‌ ಬಾಲ್ ಮತ್ತು ಪಿಕಲ್‌ ಬಾಲ್ ಕೋರ್ಟ್‌ ಗಳು, ಆಂಫಿಥಿಯೇಟರ್ ಮತ್ತು ಹೊರಾಂಗಣ ಸಭಾ ಸ್ಥಳಗಳಿವೆ.

ಅಮೆಜಾನ್ ನ ಈ ಹೊಸ ಕ್ಯಾಂಪಸ್ 2040 ರ ವೇಳೆಗೆ ‘ನೆಟ್-ಝೀರೋ ಕಾರ್ಬನ್’ ತಲುಪುವ ಅಮೆಜಾನ್ ಗುರಿಗೆ ಅನುಗುಣವಾಗಿ, ಮರುಬಳಕೆಯ ವಸ್ತುಗಳು ಮತ್ತು ಪರಿಸರ ಸ್ನೇಹಿ ವ್ಯವಸ್ಥೆಗಳ ಮೂಲಕ ವಿನ್ಯಾಸಗೊಂಡಿದೆ. ಅತ್ಯುತ್ತಮ ಕಾರ್ಯಕ್ಷಮತೆಯ ವಸ್ತುಗಳನ್ನು ಬಳಸಿ ಈ ಕೇಂದ್ರ ರೂಪಿಸಲಾಗಿದೆ.

ಕರ್ನಾಟಕದಲ್ಲಿ ಅಮೆಜಾನ್:

ಕರ್ನಾಟಕದಲ್ಲಿ ಅಮೆಜಾನ್ ಬಲವಾದ ಅಸ್ತಿತ್ವವನ್ನು ಹೊಂದಿದೆ. ರಾಜ್ಯದಲ್ಲಿ 10 ಕಾರ್ಪೊರೇಟ್ ಕಚೇರಿಗಳು, 7 ಫುಲ್‌ ಫಿಲ್‌ಮೆಂಟ್ ಸೆಂಟರ್‌ ಗಳು, 3 ಸಾರ್ಟ್ ಸೆಂಟರ್‌ ಗಳು ಮತ್ತು 130ಕ್ಕೂ ಹೆಚ್ಚು ಡೆಲಿವರಿ ಕೇಂದ್ರಗಳಿವೆ. ಅಲ್ಲದೆ, ಕರ್ನಾಟಕದ 80,000 ಕ್ಕೂ ಹೆಚ್ಚು ಮಾರಾಟಗಾರರು Amazon.in ಮೂಲಕ ತಮ್ಮ ವ್ಯಾಪಾರ ಮಾಡುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: AmazonBENGALURUKannada NewsKannada News LiveKannada News OnlineKannada News WebsiteKannada WebsiteKempegowda International airportLatest News KannadaMinister M B PatilNews in KannadaNews Kannadaಅಮೆಜಾನ್ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಬೆಂಗಳೂರುಸಚಿವ ಡಾ. ಎಂ.ಬಿ. ಪಾಟೀಲ್
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಮೇ ಮಾಹೆಯಲ್ಲಿ ಹಸಿರುಮಕ್ಕಿ ಸೇತುವೆ ಲೋಕಾರ್ಪಣೆಗೆ ಕ್ರಮ : ಸತೀಶ್ ಜಾರಕಿಹೊಳಿ

Next Post

ದಾವಣಗೆರೆ | ಹೃದಯಾಘಾತದಿದ 9ನೇ ತರಗತಿ ವಿದ್ಯಾರ್ಥಿ ಸಾವು

kalpa News

kalpa News

Next Post
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ದಾವಣಗೆರೆ | ಹೃದಯಾಘಾತದಿದ 9ನೇ ತರಗತಿ ವಿದ್ಯಾರ್ಥಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL