No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 3, 2026
in ಬೆಂಗಳೂರು ನಗರ
0
“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರಸ್ತುತ ನಗರದಲ್ಲಿ ಕಾಮಗಾರಿ ಅರ್ಧಕ್ಕೇ ಸ್ಥಗಿತಗೊಳಿಸಿರುವ ರಾಜರಾಜೇಶ್ವರಿ ನಗರ ಮತ್ತು ದೊಮ್ಮಸಂದ್ರದ ಫ್ಲೈಓವರ್ ಯೋಜನೆಗಳನ್ನು ಸೇರಿದಂತೆ, ನಗರಾಭಿವೃದ್ಧಿ ಪ್ರಾಧಿಕಾರವು ಕೈಗೊಳ್ಳಲು  ಉದ್ದೇಶಿಸಿರುವ ಅನೇಕ ಯೋಜನೆಗಳನ್ನು ಅಸಂಬದ್ಧ/ಅರ್ಥಹೀನ ಎಂದು ವಿರೋಧಿಸಿ, ಗ್ರೀನ್‌ಪೀಸ್ ಇಂಡಿಯಾ Greenpeace India ಮತ್ತು ಬೆಂಗಳೂರು ರೈಸಿಂಗ್ ಅಭಿಯಾನದ Bengaluru Rising Campaign ಭಾಗವಾಗಿರುವ ಹಲವು ನಾಗರಿಕ ಸಂಘಟನೆಗಳು ನಗರದ ವಿವಿಧ ಭಾಗಗಳಲ್ಲಿ ಇಂದು ಪ್ರತಿಭಟನೆ ನಡೆಸಿದವು.

ಪ್ರತಿಭಟನಾಕಾರರು ಈ ಯೋಜನೆಗಳನ್ನು “ಮೂರ್ಖ ಯೋಜನೆಗಳು” Stupid Projects ಎಂದು ಘೋಷಿಸುತ್ತ, ಯೋಜನಾಸ್ಥಳಗಳ ಸಮೀಪ ಪ್ರತಿಭಟಿಸಿ ಈ ಕುರಿತು ಸಾರ್ವಜನಿಕರ ಗಮನ ಸೆಳೆದರು. ನಾಲ್ಕು ವರ್ಷಕ್ಕೂ ಹೆಚ್ಚುಕಾಲದಿಂದ ಸ್ಥಗಿತಗೊಂಡಿರುವ ರಾಜರಾಜೇಶ್ವರಿ ನಗರದ ಕಮಾನಿನ ಬಳಿಯ ಫ್ಲೈಓವರ್ ಮತ್ತು ಸುಮಾರು ಆರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ದೊಮ್ಮಸಂದ್ರ ಫ್ಲೈಓವರ್ ಯೋಜನೆಗಳು ಬೃಹತ್‌ಯೋಜನೆಗಳು ಪೂರ್ಣವಾಗದೆ ನಗರದ ದೈನಂದಿನ ಜೀವನಕ್ಕೆ ಹೇಗೆ ಅಡ್ಡಿಯಾಗಿವೆ ಎಂಬುದರ ಕುರಿತು ಪ್ರತಿಭಟನೆಯಲ್ಲಿ ವಿವರಿಸಲಾಯಿತು. ಮೈಸೂರು ಲ್ಯಾಂಪ್ಸ್ ಪ್ರದೇಶದಲ್ಲಿ ಕನ್‌ವೆನ್‌ಷನ್‌ಸೆಂಟರ್ ನಿರ್ಮಾಣಕ್ಕಾಗಿ ನಗರ ತನ್ನ ಪ್ರಮುಖ ಅರಣ್ಯಪ್ರದೇಶವನ್ನೇ ಕಳೆದುಕೊಳ್ಳುವ ಸಾಧ್ಯತೆಯ ಕುರಿತು ಪ್ರತಿಭಟನೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರೀನ್‌ಪೀಸ್ ಇಂಡಿಯಾದ ಹವಾಮಾನ ಮತ್ತು ಇಂಧನ ವಿಭಾಗದ ಕ್ಯಾಂಪೇನರ್‌ಅಮೃತಾ ಎಸ್‌.ಎನ್‌., ‘ಮೂರ್ಖʼ ಯೋಜನೆಗಳು ಎಂದರೆ, ದೈನಂದಿನ ಜನಜೀವನಕ್ಕೆ ಅಡ್ಡಿ ಉಂಟುಮಾಡುವ, ವಿಳಂಬಗತಿಯಲ್ಲಿ ಸಾಗುವ, ಭರಿಸಲಾಗದ ವೆಚ್ಚಗಳ ಹೊರೆಯಿಂದ ಕೂಡಿರುವ, ಇನ್ನೂ ಪೂರ್ಣಗೊಳ್ಳದ ಅಥವಾ ಉದ್ಧೇಶಿತ ಸಮಸ್ಯೆಗಳನ್ನೇ ಪರಿಹರಿಸಲು ವಿಫಲವಾಗುವ ಯೋಜನೆಗಳಾಗಿವೆ. ಗ್ರೇಟರ್‌ಬೆಂಗಳೂರು ಪ್ರಾಧಿಕಾರ (ಜಿಬಿಎ)ದ ಚುನಾವಣೆಗೆ ಉಮೇದುವಾರ ಅಭ್ಯರ್ಥಿಗಳು, ನಾಗರಿಕರು ವಿರೋಧಿಸುತ್ತಿರುವ ಈ ಸಮಸ್ಯೆಗಳನ್ನು ಚುನಾವಣೆಗೆ ಮುನ್ನವೇ ಬಗೆಹರಿಸಬೇಕು. ಬೆಂಗಳೂರು ಜಾಗತಿಕ ಮಟ್ಟದಲ್ಲಿ ನಗೆಪಾಟಲಾಗವುದನ್ನು ತಡೆಯಬೇಕು” ಎಂದು ಹೇಳಿದರು.

ನಗರದಾದ್ಯಂತ ನಡೆಸಲಾದ ಈ ಪ್ರತಿಭಟನೆಗಳು ಕಳೆದ ದಶಕದ ಅಭಿವೃದ್ಧಿ ಮಾದರಿಯ ವಿರುದ್ಧದ ಪ್ರತಿರೋಧವಾಗಿದ್ದು, ಈ ಮಾದರಿಗಳು ಪಾದಚಾರಿ ಮಾರ್ಗ, ಉಸಿರಾಡಲು ಶುದ್ಧ ಗಾಳಿ ಮತ್ತು ನಗರದ ಕಡಿಮೆಯಾಗುತ್ತಿರುವ “ಹಸಿರು-ನೀಲಿ” (ಕೆರೆಗಳು ಮತ್ತು ಉದ್ಯಾನಗಳು) ಪ್ರದೇಶಗಳಿಗಿಂತ ಫ್ಲೈಓವರ್‌ಗಳು ಮತ್ತು ರಸ್ತೆ ವಿಸ್ತರಣೆಗಳಿಗೆ ಆದ್ಯತೆ ನೀಡಿದ್ದನ್ನು ಪ್ರಶ್ನಿಸಿದವು.
ಮಲ್ಲೇಶ್ವರಂ ಪ್ರದೇಶದಲ್ಲಿ ಯೋಜಿಸಲಾಗಿರುವ ಅವಿವೇಕದ ಯೋಜನೆಯ ಕುರಿತು ಮಾತನಾಡುತ್ತ ಮಲ್ಲೇಶ್ವರಂ ಸೋಶಿಯಲ್ ಸದಸ್ಯರಾದ ಕೌಸ್ತುಭ್ ರಾವ್, “ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಪರಿಸರ ಮತ್ತು ಜೀವ ವೈವಿಧ್ಯತೆಗೆ ಪ್ರಾಧಾನ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ನಗರದಲ್ಲಿ ಈಗಿರುವ ಹಸಿರು ಆವರಣವನ್ನು ರಕ್ಷಿಸುವುದು ಮೊದಲ ಹೆಜ್ಜೆಯಾಗಬೇಕು. ನಿಷ್ಕ್ರಿಯಗೊಂಡಿರುವ ಮೈಸೂರು ಲ್ಯಾಂಪ್ಸ್ ಕಾರ್ಖಾನೆಯ ಸಮೀಪದ ದಟ್ಟ ಅರಣ್ಯ ಪರಿಸರವು ಎಲ್ಲ ವರ್ಗದ ಜನರಿಗೆ ಉಪಯುಕ್ತವಾಗುವ ಸಾರ್ವಜನಿಕ ಬಳಕೆಯ ಸ್ಥಳವಾಗಬಹುದು. ಇದನ್ನು ಕನ್‌ವೆನ್‌ಷನ್‌ಸೆಂಟರ್ ಆಗಿ ಪರಿವರ್ತಿಸುವುದು ಕೇವಲ ಕೆಲವೇ ವರ್ಗಗಳಿಗೆ ಉಪಯುಕ್ತವಾಗುತ್ತದೆ. ಇದು ಟ್ರಾಫಿಕ್, ಮಾಲಿನ್ಯ ಮತ್ತು ನಗರದ ತಾಪಮಾನವನ್ನು ಹೆಚ್ಚಿಸುತ್ತದೆಯೇ ಹೊರತು, ಜನರಿಗೆ ಬೇಕಾದ ಸಾರ್ವಜನಿಕ ಹಸಿರು ಸ್ಥಳಗಳ ಕೊರತೆಯನ್ನು ಬಗೆಹರಿಸುವುದಿಲ್ಲ” ಎಂದು ತಮ್ಮ ಕಳಕಳಿಯನ್ನು ವ್ಯಕ್ತಪಡಿಸಿದರು.

ಈ ಅಭಿಯಾನವು ಕಳೆದ ಕೆಲವು ತಿಂಗಳಿನಿಂದ ನಗರದಲ್ಲಿ ಹಲವು ನಾಗರಿಕ ಸಂಘಟನೆಗಳು ಮತ್ತು ವಿದ್ಯಾರ್ಥಿಗಳು, ಉದ್ಯೋಗಿಗಳು, ಹಳೆಯ ನಿವಾಸಿಗಳು ಮತ್ತು ಹೊಸ ನಿವಾಸಿಗಳನ್ನು ಒಳಗೊಂಡಂತೆ ನಡೆಸಲಾದ “ಇಮ್ಯಾಜಿನೇರಿಯಂ”ಗಳ ಮುಂದುವರಿದ ಭಾಗವಾಗಿದೆ—ಈ ಕಾರ್ಯಾಗಾರಗಳಲ್ಲಿ ಸರ್ಕಾರದ ದೃಷ್ಟಿಕೋನ (ಸಂಪನ್ಮೂಲ ಹೆಚ್ಚು ಬಳಸುವ ಬೃಹತ್‌ಕಾಂಕ್ರೀಟ್ ನಿರ್ಮಾಣಗಳು ಮತ್ತು ಆ ಮೂಲಕ ಟ್ರಾಫಿಕ್ ಸಮಸ್ಯೆಯನ್ನು ಕಡಿಮೆ ಮಾಡುವ ಭರವಸೆ) ಹಾಗು ನಾಗರಿಕರ ದೃಷ್ಟಿಕೋನ (ನೆರಳು ತುಂಬಿದ, ಪರಸ್ಪರ ಸಂಪರ್ಕ ಹೊಂದಿದ ನಗರ— “ಕೊನೆಯ ನಿಲ್ದಾಣ”ದಿಂದ ಮನೆಗೆ ನಡೆದು ಸಾಗುವ ಕಷ್ಟಕರವಲ್ಲದ ಹಾದಿ) ಇವುಗಳಿಗಿರುವ ವ್ಯತ್ಯಾಸವನ್ನು ತಿಳಿಸಲಾಯಿತು.
ಏಪ್ರಿಲ್ 1ನೇ ತಾರೀಕನ್ನು ಪ್ರತಿಭಟನೆಗೆ ಆಯ್ಕೆಮಾಡುವ ಮೂಲಕ, “ಪೂರ್ವದ ಸಿಲಿಕಾನ್ ವ್ಯಾಲಿ” ಎಂದೇ ಪ್ರಸಿದ್ಧವಾಗಿರುವ ನಗರವು ಇನ್ನೂ ಹಳೆಯ, 20ನೇ ಶತಮಾನದ ನಗರ ಯೋಜನೆಗಳ ಮೇಲೆ ಅವಲಂಬಿತವಾಗಿದೆ ಎನ್ನುತ್ತಾ ಅಸಂಬದ್ಧ ನಗರ ಯೋಜನೆಗಳನ್ನು ಅಣಕ ಮಾಡಲಾಯಿತು.

ಈ ಪ್ರತಿಭಟನೆ ಕೇವಲ ಆಕ್ರೋಶವಾಗಿರದೆ, ಈ ಮೂಲಕ ಬೆಂಗಳೂರು ನಗರಾಡಳಿತ ಮತ್ತು ರಾಜ್ಯ ಸರ್ಕಾರಕ್ಕೆ “ಇಮ್ಯಾಜಿನೇರಿಯಂ” ಮಾದರಿಯನ್ನು ಅಳವಡಿಸಿಕೊಂಡು, ನಗರ ಯೋಜನೆ, ಬಜೆಟ್ ಮತ್ತು ನೀತಿ ರೂಪಿಸುವ ಪ್ರಕ್ರಿಯೆಗಳಲ್ಲಿ ನಾಗರಿಕರನ್ನು ಒಳಗೊಳ್ಳಬೇಕು ಎಂದು ಗ್ರೀನ್‌ಪೀಸ್‌ಮತ್ತು ನಗರದ ನಾಗರಿಕ ಸಂಘಟನೆಗಳು ಕರೆ ನೀಡಿದವು. ಜನರು ನಗರ ರೂಪುಗೊಳಿಸುವಲ್ಲಿ ಪಾಲ್ಗೊಳ್ಳಬೇಕೇ ಹೊರತು ಮೂರ್ಖ ಯೋಜನೆಗಳಿಗೆ ಬೆಲೆ ತೆರುವವರಾಗಬಾರದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUBengaluru Rising CampaignGreenpeace IndiaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaStupid Projectsಗ್ರೀನ್‌ಪೀಸ್ ಇಂಡಿಯಾಬೆಂಗಳೂರುಬೆಂಗಳೂರು ರೈಸಿಂಗ್ ಅಭಿಯಾನಮೂರ್ಖ ಯೋಜನೆಗಳು
Share197Tweet123Send
Previous Post

ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ದಾಖಲೆಯ ಆದಾಯ, ಹಲವು ಮೈಲಿಗಲ್ಲು

Next Post

ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸಂಪೂರ್ಣ ನಿರ್ನಾಮ: ಶಾಸಕ ಚನ್ನಬಸಪ್ಪ ಗುಡುಗು

April 23, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮೈಸೂರು-ತಾಳಗುಪ್ಪ, ಶಿವಮೊಗ್ಗ ಸೇರಿ 4 ರೈಲುಗಳು ಸಂಚಾರದಲ್ಲಿ ವ್ಯತ್ಯಯ

April 23, 2026
ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

April 23, 2026
ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

April 23, 2026
ಡಿ.17ರಂದು ಗಾಮ ಗ್ರಾಮದ ಶ್ರೀವೀರಭದ್ರೇಶ್ವರ ಸ್ವಾಮಿ ರಥೋತ್ಸವ

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಮುರಿತ | ಇಬ್ಬರಿಗೆ ಗಂಭೀರ ಗಾಯ

April 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL