ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸ್ನೇಹಾಲಯ ಈ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ‘ಚಂದ್ರಗಿರಿ’ಯ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ.
‘ಚಂದ್ರಗಿರಿ’ ಎಂಬ ಊರಿನಲ್ಲಿ ಪ್ರತಿ ಅಮಾವಾಸ್ಯೆ ನಡೆಯುವ ಆತ್ಮಹತ್ಯೆಗಳ ಸುತ್ತ ಕಥೆ ಹೆಣೆದಿದ್ದು, ಈ ರಹಸ್ಯವನ್ನು ಭೇದಿಸಲು ಬರುತ್ತಾದ ನಾಲ್ವರಿಗೆ ಎದುರಾಗುವ ಸವಾಲುಗಳು ಮತ್ತು ಅದರಿಂದ ಪಾರಾಗುವ ರೋಚಕ ಘಟನೆಗಳನ್ನು ಚಿತ್ರ ಒಳಗೊಂಡಿದೆ. ಈ ಸಿನಿಮಾಗೆ ರಾಜೀವ್ ಕೃಷ್ಣ ಗಾಂಧಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಹೊಸಕೋಟೆ, ವೈಟ್ಫೀಲ್ಡ್ ಹಾಗೂ ಬೆಳ್ಳಿಕೆರೆ ಸುತ್ತಮುತ್ತ ಮೊದಲ ಹಂತದ ಚಿತ್ರೀಕರಣ ನಡೆಸಲಾಗಿದೆ. ಚಿತ್ರದಲ್ಲಿ ಉಗ್ರಂ ರವಿ, ಶೋಭರಾಜ್, ಶಂಖನಾದ ಆಂಜಿನಪ್ಪ, ಅನ್ನಪೂರ್ಣ, ಬೆಂಗಳೂರು ಮನೋ, ಮರಿಸ್ವಾಮಿ, ಪಂಚಾಕ್ಷರಯ್ಯ, ವೀರಧನುಷ್, ಕಿಶೋರ್ ಕಾಸರಗೋಡು, ವೈಭವಿ ನಾಗರಾಜ್, ಬಲರಾಮ್ ಪಾಚಾಳ್, ರಂಜನ್ ಶೆಟ್ಟಿ, ಭಕ್ತರಹಳ್ಳಿ ರವಿ, ಸ್ವಸ್ತಿಕ್ ಶಂಕರ್, ಸೆವನ್ ರಾಜ್, ಯಶಸ್, ರೂಪಶ್ರೀ, ಕಿರಣ್ ಕುಮಾರ್ ಗಟ್ಟಿಗನಬ್ಬೆ ಸೇರಿದಂತೆ ಅನೇಕರು ನಟಿಸಿದ್ದಾರೆ.
Also read: ಕೃಷಿ ವಿಶ್ವವಿದ್ಯಾನಿಲಯ ಕುಲಪತಿ ಆಯ್ಕೆ ವಿವಾದ: ಪಾರದರ್ಶಕತೆಗೆ ಒತ್ತಾಯ
ಚಿತ್ರಕ್ಕೆ ಎಂ.ಎಲ್. ರಾಜ್ ಹಿನ್ನೆಲೆ ಸಂಗೀತ, ಗುರುದತ್ ಮುಸರಿ ಛಾಯಾಗ್ರಹಣ, ಡಿ. ಮಲ್ಲಿ ಸಂಕಲನ, ವೈಲೆಂಟ್ ವೇಲು ಸಾಹಸ ನಿರ್ದೇಶನ ಮಾಡಿದ್ದಾರೆ. ಮೋಹನ್ ಕುಮಾರ್ ಪ್ರಸಾಧನ, ಇಂದ್ರಕುಮಾರ್ ಸ್ಥಿರಚಿತ್ರಣ, ಮಲ್ಲಿಕಾರ್ಜುನ ಮತ್ತು ಎಂ.ಜಿ. ಕಲ್ಲೇಶ್ ಕಲಾ ನಿರ್ದೇಶನ ಮಾಡಿದ್ದಾರೆ. ವಿ.ಎಂ.ಎಸ್. ಗೋಪಿ ಪತ್ರಿಕಾ ಸಂಪರ್ಕ ವಹಿಸಿದ್ದಾರೆ.
ಇದೀಗ ಚಿತ್ರತಂಡ ಎರಡನೇ ಹಂತದ ಚಿತ್ರೀಕರಣಕ್ಕಾಗಿ ಸಕಲೇಶಪುರ ಹಾಗೂ ಚಿಕ್ಕಮಗಳೂರು ಸುತ್ತಮುತ್ತ ಶೂಟಿಂಗ್ ನಡೆಸಲು ಸಿದ್ಧತೆ ಮಾಡಿಕೊಂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









