No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೋಕಾ-ಕೋಲಾ ವಿನೂತನ ಯೋಜನೆ: ಪಲ್ಸ್ ಆಪ್ ಮೂಲಕ ಪ್ರಯಾಣಿಕರಿಗೆ ತಂಪು ಪಾನೀಯ ವಿತರಣೆ

kalpa News by kalpa News
April 24, 2026
in Special Articles
0
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೋಕಾ-ಕೋಲಾ ವಿನೂತನ ಯೋಜನೆ: ಪಲ್ಸ್ ಆಪ್ ಮೂಲಕ ಪ್ರಯಾಣಿಕರಿಗೆ ತಂಪು ಪಾನೀಯ ವಿತರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ Kempegowda International Airport ಪಯಣಿಸುವ ಪ್ರಯಾಣಿಕರಿಗೆ ಹೊಸ ಮಾದರಿಯ ಅನುಭವ ನೀಡಲು ಕೋಕಾ-ಕೋಲಾ ಇಂಡಿಯಾ Coca-Cola India ಮತ್ತು ಬೆಂಗಳೂರು ಇಂಟರ್ ನ್ಯಾಷನಲ್ ಏರ್‌ ಪೋರ್ಟ್ ಲಿಮಿಟೆಡ್ (ಬಿಐಎಎಲ್) ಮೊದಲ ಬಾರಿಗೆ ಕೈಜೋಡಿಸಿವೆ. ಡಿಜಿಟಲ್ ತಂತ್ರಜ್ಞಾನ ಮತ್ತು ಗ್ರಾಹಕ ಸೇವೆಯನ್ನು ಬೆಸೆಯುವ ಈ ವಿಶಿಷ್ಟ ಯೋಜನೆಯ ಮೂಲಕ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಉಚಿತವಾಗಿ ಪಾನೀಯವನ್ನು ವಿತರಿಸಲಾಗುತ್ತಿದೆ.

ಭಾರತದ ಪ್ರಮುಖ ಪಾನೀಯ ಕಂಪನಿ ಕೋಕಾ-ಕೋಲಾ ಮತ್ತು ದೇಶದ ವೇಗವಾಗಿ ಬೆಳೆಯುತ್ತಿರುವ ವಿಮಾನ ನಿಲ್ದಾಣಗಳಲ್ಲಿ ಒಂದಾದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಪ್ರಯಾಣವನ್ನು ಕೇವಲ ಸಂಚಾರವಾಗಿಸದೆ ಒಂದು ಸಂಭ್ರಮವನ್ನಾಗಿಸುವ ಉದ್ದೇಶದಿಂದ ಕೋಕಾಕೋಲಾ ಸಹಯೋಗ ಮಾಡಿಕೊಂಡಿದ್ದು, ಸರಿಯಾದ ಸಮಯದಲ್ಲಿ ಸಿಗುವ ಒಂದು ಕ್ಷಣದ ವಿಶ್ರಾಂತಿ ಮತ್ತು ತಂಪು ಪಾನೀಯವು ಪ್ರಯಾಣಿಕರ ಆಯಾಸವನ್ನು ಕಡಿಮೆ ಮಾಡುತ್ತದೆ ಎಂಬ ಆಲೋಚನೆ ಈ ಯೋಜನೆಯ ಹಿಂದಿದೆ.
ವಿಮಾನ ನಿಲ್ದಾಣದ ಎರಡೂ ಟರ್ಮಿನಲ್‌ಗಳ ಮೂಲಕ ಪ್ರಯಾಣಿಸುವವರು, ಬೆಂಗಳೂರು ವಿಮಾನ ನಿಲ್ದಾಣದ ಅಧಿಕೃತ ಆಲ್- ಇನ್- ಒನ್ ಡಿಜಿಟಲ್ ಪ್ಲಾಟ್‌ ಫಾರ್ಮ್ ಆದ ‘ಪಲ್ಸ್’ ಆಪ್ ಅನ್ನು ಸೇರಿದರೆ, ಅವರಿಗೆ ಉಚಿತವಾಗಿ ತಂಪಾದ ಕೋಕಾ-ಕೋಲಾ ನೀಡಲಾಗುತ್ತದೆ. ಇದನ್ನು ಇದಕ್ಕಾಗಿಯೇ ಮೀಸಲಾದ ‘ಕೋಕ್ ಜೋನ್’ ನಲ್ಲಿ ಪಡೆದುಕೊಳ್ಳಬಹುದು. ಈ ಪ್ರಕ್ರಿಯೆಯು ಬಹಳ ಸರಳವಾಗಿದ್ದು, ಟರ್ಮಿನಲ್‌ ನಲ್ಲಿರುವ ಡಿಜಿಟಲ್ ಪರದೆಗಳ ಮೇಲೆ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿ, ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ ಮತ್ತು ತಂಪಾದ ಪಾನೀಯದೊಂದಿಗೆ ನಿಮ್ಮ ಪ್ರಯಾಣ ಮುಂದುವರಿಸಿ.

ಈ ಯೋಜನೆಯು ಪ್ರಯಾಣಿಕರು ತಮ್ಮ ಮೊಬೈಲ್ ಮೂಲಕ ವಿಮಾನ ನಿಂತಿರುವ ಸ್ಥಳದ ಹಾದಿಯನ್ನು ಕಂಡುಕೊಳ್ಳುತ್ತಿರುವಾಗಲೇ ಅವರಿಗೆ ಅತ್ಯಂತ ಆಕರ್ಷಕ ಅನುಭವವನ್ನು ನೀಡಲಿದೆ. ಟರ್ಮಿನಲ್‌ ಗಳಲ್ಲಿ ಸುಲಭವಾಗಿ ಕಣ್ಣಿಗೆ ಬೀಳುವಂತೆ ಮಾಡಲು, ಕೋಕ್ ಜೋನ್‌ ನಲ್ಲಿ ಬೃಹತ್ ‘ಕ್ಯಾನ್’ ಆಕಾರದ ಕಲಾಕೃತಿಯನ್ನು ಸ್ಥಾಪಿಸಲಾಗಿದೆ. ವಿಮಾನ ನಿಲ್ದಾಣದಾದ್ಯಂತ ಇರುವ ಡಿಜಿಟಲ್ ಪರದೆಗಳು ಮತ್ತು ಇತರ ಮಾಧ್ಯಮಗಳ ಮೂಲಕ ಈ ಅಭಿಯಾನದ ಬಗ್ಗೆ ಮಾಹಿತಿ ನೀಡಲಾಗುತ್ತಿದ್ದು, ಪ್ರತಿಯೊಬ್ಬ ಪ್ರಯಾಣಿಕರಿಗೂ ಇದರ ಲಾಭ ಸಿಗುವಂತೆ ನೋಡಿಕೊಳ್ಳಲಾಗುತ್ತಿದೆ.
ಈ ಸಹಯೋಗದ ಕುರಿತು ಕೋಕಾ-ಕೋಲಾ ಇಂಡಿಯಾ ಮತ್ತು ನೈರುತ್ಯ ಏಷ್ಯಾದ ಗ್ರಾಹಕ ಅಭಿವೃದ್ಧಿ ವಿಭಾಗದ ಉಪಾಧ್ಯಕ್ಷ ಅಭಿಷೇಕ್ ಗುಪ್ತಾ ಅವರು ಮಾತನಾಡಿ, “ಇಂದಿನ ದಿನಗಳಲ್ಲಿ ವಿಮಾನ ನಿಲ್ದಾಣಗಳು ಗ್ರಾಹಕರನ್ನು ತಲುಪಲು ಅತ್ಯುತ್ತಮ ವೇದಿಕೆಗಳಾಗಿವೆ. ಪ್ರಯಾಣದ ವಿವಿಧ ಹಂತಗಳಲ್ಲಿ ಪ್ರಯಾಣಿಕರು ಹಲವು ಡಿಜಿಟಲ್ ಮಾಧ್ಯಮಗಳೊಂದಿಗೆ ನಿರತರಾಗಿರುತ್ತಾರೆ. ಬಿಐಎಎಲ್ ನಿರ್ಮಿಸಿರುವ ಸುಧಾರಿತ ಡಿಜಿಟಲ್ ಮೂಲಸೌಕರ್ಯ ಮತ್ತು ನಮ್ಮ ಬ್ರ್ಯಾಂಡ್ ಮೇಲಿರುವ ವಿಶ್ವಾಸವನ್ನು ಒಗ್ಗೂಡಿಸಿ, ಪ್ರಯಾಣಿಕರಿಗೆ ನಿಜವಾಗಿಯೂ ಉಪಯುಕ್ತವಾಗುವಂತಹ ಅನುಭವವನ್ನು ನೀಡಲು ನಾವು ಈ ಹೆಜ್ಜೆ ಇಟ್ಟಿದ್ದೇವೆ,” ಎಂದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪರ್ಫಾರ್ಮೆನ್ಸ್ ಮಾರ್ಕೆಟಿಂಗ್ ಮತ್ತು ಅಡ್ವರ್ಟೈಸಿಂಗ್ ವಿಭಾಗದ ಸಹಾಯಕ ಉಪಾಧ್ಯಕ್ಷರಾದ ದೇವಯಾನಿ ಡಿ.ವಿ. ಅವರು ಮಾತನಾಡಿ, “ಬಿಎಲ್‌ಆರ್ ವಿಮಾನ ನಿಲ್ದಾಣದಲ್ಲಿ, ಪ್ರಯಾಣಿಕರಿಗೆ ಪ್ರಯಾಣ ಸೌಕರ್ಯದ ಜೊತೆ ವಿಶಿಷ್ಟ ಅನುಭವಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ. ಸಣ್ಣ ಸಣ್ಣ ಸಂತೋಷದ ಕ್ಷಣಗಳು ಸಹ ಪ್ರಯಾಣವನ್ನು ಹೆಚ್ಚು ಆನಂದದಾಯಕವಾಗಿಸಬಲ್ಲವು ಎಂಬ ನಮ್ಮ ನಂಬಿಕೆಯನ್ನು ಈ ಪಾಲುದಾರಿಕೆಯು ಪ್ರತಿಬಿಂಬಿಸುತ್ತದೆ. ಈ ಯೋಜನೆಯನ್ನು ನಮ್ಮ ‘ಪಲ್ಸ್’ ಆಪ್‌ ನೊಂದಿಗೆ ಸಂಯೋಜಿಸುವ ಮೂಲಕ, ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಸಂಚರಿಸುವಾಗ ಅವರಿಗೆ ಅರ್ಥಪೂರ್ಣ, ಸಮಯೋಚಿತ ಮತ್ತು ಹಿತವಾದ ಅನುಭವವನ್ನು ನೀಡಲು ನಾವು ಡಿಜಿಟಲ್ ಸೌಲಭ್ಯವನ್ನು ಬಳಸಿಕೊಳ್ಳುತ್ತಿದ್ದೇವೆ,” ಎಂದು ತಿಳಿಸಿದರು.

ಬಿಎಲ್‌ಆರ್ ವಿಮಾನ ನಿಲ್ದಾಣದಲ್ಲಿ ವಾರ್ಷಿಕವಾಗಿ ಕೋಟ್ಯಂತರ ಪ್ರಯಾಣಿಕರು ಪಯಣಿಸುತ್ತಿದ್ದು, ಈ ಸಹಯೋಗವು ಕೋಕಾ-ಕೋಲಾ ಇಂಡಿಯಾದ ‘ಟ್ರಾವೆಲ್ ರಿಟೇಲ್’ ಕಾರ್ಯತಂತ್ರದಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ದೇಶದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವಿಮಾನಯಾನ ಕೇಂದ್ರವೊಂದರಲ್ಲಿ ಗ್ರಾಹಕರಿಗೆ ಬ್ರ್ಯಾಂಡ್ ಅನ್ನು ಇನ್ನಷ್ಟು ಹತ್ತಿರವಾಗಿಸಲು ಇದು ಸಹಕಾರಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

  

Tags: BENGALURUKannada NewsKannada News LiveKannada News OnlineKannada News WebsiteKannada WebsiteKempegowda International airportLatest News KannadaNews in KannadaNews Kannadaಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಬೆಂಗಳೂರು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಏ.25ರಂದು ಅಂಬೇಡ್ಕರ್ ಕುರಿತು ರಾಜ್ಯಮಟ್ಟದ ಕವಿಗೋಷ್ಠಿ

Next Post

ಅಕ್ಷಯ ತೃತೀಯ ಅಭಿಯಾನದಿಂದ ಆರಂಭಿಸಿ ಕೃತಿ ಶೆಟ್ಟಿ ಜೊತೆ ದೀರ್ಘಾವಧಿಯ ಪಾಲುದಾರಿಕೆಯನ್ನು ಘೋಷಿಸಿದ ಆದಿತ್ಯ ಬಿರ್ಲಾ ಪ್ರಾಯೋಜಿತ ಇಂದ್ರಿಯ ಜ್ಯುವೆಲ್ಲರಿ

kalpa News

kalpa News

Next Post
ಅಕ್ಷಯ ತೃತೀಯ ಅಭಿಯಾನದಿಂದ ಆರಂಭಿಸಿ ಕೃತಿ ಶೆಟ್ಟಿ ಜೊತೆ ದೀರ್ಘಾವಧಿಯ ಪಾಲುದಾರಿಕೆಯನ್ನು ಘೋಷಿಸಿದ ಆದಿತ್ಯ ಬಿರ್ಲಾ ಪ್ರಾಯೋಜಿತ ಇಂದ್ರಿಯ ಜ್ಯುವೆಲ್ಲರಿ

ಅಕ್ಷಯ ತೃತೀಯ ಅಭಿಯಾನದಿಂದ ಆರಂಭಿಸಿ ಕೃತಿ ಶೆಟ್ಟಿ ಜೊತೆ ದೀರ್ಘಾವಧಿಯ ಪಾಲುದಾರಿಕೆಯನ್ನು ಘೋಷಿಸಿದ ಆದಿತ್ಯ ಬಿರ್ಲಾ ಪ್ರಾಯೋಜಿತ ಇಂದ್ರಿಯ ಜ್ಯುವೆಲ್ಲರಿ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL