Saturday, September 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ದೀನ ದಯಾಳ ಉಪಾಧ್ಯಾಯರು ಆದರ್ಶದ ದೀಪಸ್ತಂಭ: ದತ್ತಾತ್ರೇಯ ಹೊಸಬಾಳೆ ಅಭಿಮತ

ಸಂಘ ಯಾರನ್ನೂ ನಿರ್ಮಾಣ ಮಾಡುವುದಿಲ್ಲ, ಬದಲಾಗಿ ಇರುವವರನ್ನು ಸೇರಿಸಿ ಸಂಘಟನೆ ರೂಪುಗೊಳ್ಳುತ್ತದೆ

September 26, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸಾವಿರಾರು ಜನರನ್ನು ಪ್ರೇರೇಪಿಸಿದ ರಾಷ್ಟ್ರಪುರುಷ ದೀನದಯಾಳ ಉಪಾಧ್ಯಾಯರು. ತಮ್ಮ ವ್ಯಕ್ತಿತ್ವ, ಕರ್ತೃತ್ವ, ಸಾಧನೆ, ಚಿಂತನೆಯ ಮೂಲಕ ದೀನ ದಯಾಳ ಉಪಾಧ್ಯಾಯರು ಆಧಾರ ದೀಪಸ್ತಂಭವಾಗಿದ್ದಾರೆ. ಅವರ ಬದುಕು ಗಂಗಾಪ್ರವಾಹವಿದ್ದಂತೆ. ಅದರಲ್ಲಿ ನಮ್ಮ ಪಾತ್ರ ಎಷ್ಟು ಎನ್ನುವುದು ಮುಖ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಂಗಳೂರು ಮಹಾನಗರ ವತಿಯಿಂದ ಜೆಪಿನಗರದ ಆರ್ ವಿ ಡೆಂಟಲ್ ಕಾಲೇಜಿನಲ್ಲಿ ನಡೆದ ಪಂಡಿತ್ ದೀನದಯಾಳ ಉಪಾಧ್ಯಾಯ ಅವರ 109ನೇ ವರ್ಷದ ಜಯಂತಿಯ ನಿಮಿತ್ತ ಸಂಸ್ಮರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ವಯಂಸೇವಕ ಎಂಬ ವಿಶೇಷವಾದ ಕಲ್ಪನೆ ಇಂದು ಸಹಜವಾಗಿದೆ. ಯಾವ ಸಂಘವೂ ಯಾರನ್ನೂ ನಿರ್ಮಾಣ ಮಾಡುವುದಿಲ್ಲ, ಬದಲಾಗಿ ಇರುವವರನ್ನು ಸೇರಿಸಿ ಸಂಘಟನೆ ರೂಪುಗೊಳ್ಳುತ್ತದೆ. ಆದರೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಸ್ವಯಂಸೇವಕರ ನಿರ್ಮಾಣ ಮಾಡುವ ಸಂಘಟನೆ. ಅಂತಹ ಶ್ರೇಷ್ಠ, ಆದರ್ಶ, ಪ್ರೇರಣಾದಾಯಿ ಸ್ವಯಂಸೇವಕ ದೀನ ದಯಾಳ ಉಪಾಧ್ಯಾಯ. ಅವರನ್ನು ಚಿಂತಕರಾಗಿ, ದ್ರಷ್ಟಾರರಾಗಿ, ಆದರ್ಶ ರಾಜಕಾರಣಿಯಾಗಿ ನೋಡುವ ವಿವಿಧ ಆಯಾಮಗಳು ರೂಪುಗೊಂಡಿರುವುದು ಸ್ವಯಂಸೇವಕತ್ವದ ಆಧಾರದಲ್ಲಿಯೇ ಎನ್ನುವುದು ವಿಶೇಷ ಎಂದು ಹೇಳಿದರು.
ನಿಸ್ವಾರ್ಥ ಭಾವದಿಂದ, ತನುಮನಧನದಿಂದ ಸಮಯವನ್ನು ಸಂಘಕಾರ್ಯಕ್ಕಾಗಿ ತೆಗೆದಿಟ್ಟು ಈ ರಾಷ್ಟ್ರಕ್ಕಾಗಿ ಕೆಲಸ ಮಾಡುವವನು ಸ್ವಯಂಸೇವಕ. ದೀನ ದಯಾಳರು ಸ್ವಯಂಸೇವಕನಾಗಿ ತಮಗೆ ಸಾಧ್ಯವಾದಷ್ಟು ಕೆಲಸ ಮಾಡಿದ್ದಲ್ಲ, ಸಂಘ ಹೇಳಿದ ಪ್ರತಿಯೊಂದು ಕೆಲಸವನ್ನೂ ಪರಿಶ್ರಮದಿಂದ ಮಾಡಿದವರು. ದೇಶದ ಬಗ್ಗೆ ಅವರಿಗಿದ್ದ ಕಳಕಳಿ, ಸಂವೇದನೆಯ ಮೂಲಕ ಭಾರತದೊಂದಿಗೆ ತಾದಾತ್ಮ್ಯರಾಗಿದ್ದವರು ಎಂದು ನುಡಿದರು.

ಭಾರತದ ಉನ್ನತಿಗೆ ಇವತ್ತಿನ ಯುವಪೀಳಿಗೆ ಕೆಲಸ ಮಾಡದೇ ಇನ್ಯಾರು ಮಾಡಿಯಾರು? ಎನ್ನುವುದು ದೀನ ದಯಾಳರ ನಿಲುವಾಗಿತ್ತು. ತಮ್ಮ ಯೌವನದಲ್ಲಿ ಅವರು ಮನಸ್ಸು ಮಾಡಿದ್ದರೆ ಅಂತರಾಷ್ಟ್ರೀಯ ಸ್ತರದ ವಿದ್ವತ್ತಿನ ಮೂರ್ತಿ ಆಗಬಹುದಿತ್ತು. ಆದರೆ ದೇಶದ ಅಗತ್ಯತೆಯ ಕಾರಣ ತಮ್ಮ ಬದುಕನ್ನು ದೇಶಕ್ಕಾಗಿಯೇ ಮುಡಿಪಾಗಿಟ್ಟರು. ಭಾರತದ ಏಳಿಗೆ ಒಂದೇ ತಮ್ಮ ಜೀವನದ ಗುರಿಯಾಗಿತ್ತು ಎಂದರು.

ಜನಸಂಘಕ್ಕೆ ವೈಚಾರಿಕ ಆಧಾರವನ್ನು ಗಟ್ಟಿಗೊಳಿಸಿದವರು ದೀನದಯಾಳ ಉಪಾಧ್ಯಾಯರು. ಇತಿಹಾಸವನ್ನು ಹೇಗೆ ನೋಡಬೇಕು ಎನ್ನುವುದನ್ನು ತಿಳಿಸಿದವರು. ಅನೇಕ ಸಂದರ್ಭಗಳಲ್ಲಿ ಚುನಾವಣೆಗಳನ್ನು ಸೋತರೂ ರಾಜಕೀಯ ಕ್ಷೇತ್ರದಲ್ಲಿ ಧ್ಯೇಯನಿಷ್ಠೆಗೆ ರಾಜಿಯಾಗಲಿಲ್ಲ. ಆ ಕಾರಣಕ್ಕಾಗಿ ಸೈದ್ಧಾಂತಿಕ ವಿರೋಧಿಗಳನ್ನೂ ಪ್ರಭಾವಿಸುವ ವ್ಯಕ್ತಿತ್ವ ಅವರದ್ದಾಗಿತ್ತು. ಭಾರತದ ಮಣ್ಣಿನ ವಿಚಾರದ ಆಧಾರಿತವಾಗಿ ರಾಜಕಿಯ ಕ್ಷೇತ್ರದಲ್ಲಿ ಭಾರತದ ಏಳಿಗೆಗಾಗಿ ಬೇಕಾದಂತಹ ಏಕಾತ್ಮ ಮಾನವ ದರ್ಶನವೆಂಬ ಹೊಸದೊಂದು ಚಿಂತನೆಯನ್ನು ಕೊಟ್ಟವರು ಅವರು ಎಂದರು.
ಕಾರ್ಯಕರ್ತನಾದವನು ಸಾತ್ವಿಕ, ಮುಕ್ತ ಸಂಘ, ನಿರಹಂಕಾರಿ, ಜಯಪರಾಜಯಗಳಲ್ಲಿ ಸ್ಥಿತ ಪ್ರಜ್ಞೆಯನ್ನು ಉಳ್ಳವನಾಗಿರಬೇಕು ಎಂದು ಭಗವದ್ಗೀತೆಯಲ್ಲಿ ತಿಳಿಸಲಾಗಿದೆ. ಅದಕ್ಕೆ ಅನ್ವರ್ಥವಾಗಿ ಬದುಕಿದವರು ದೀನ ದಯಾಳ ಉಪಾಧ್ಯಾಯರು. ಸ್ವಯಂಸೇವಕನ ದೃಷ್ಟಿ ಎಲ್ಲರನ್ನೂ ಜೋಡಿಸುವಂತಹದ್ದು. ಸಮಾಜದ ಎಲ್ಲರೂ ನಮ್ಮವರೇ, ಯಾರೂ ದ್ವೇಷಿಗಳಲ್ಲ, ವಿರೋಧಿಗಳಲ್ಲ ಎನ್ನುವುದನ್ನು ದೀನದಯಾಳರು ತಮ್ಮ ವಿನೀತ, ವಿಶುದ್ಧ ಜೀವನದ ಮೂಲಕ ತಿಳಿಸಿಕೊಟ್ಟರು.

ವೇದಿಕೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೆಂಗಳೂರು ಮಹಾನಗರ ಸಂಘಚಾಲಕ ಮಿಲಿಂದ ಗೋಖಲೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಸರಕಾರ್ಯವಾಹ ಮುಕುಂದ ಸಿ ಆರ್, ಅಖಿಲ ಭಾರತೀಯ ಸಹ ಬೌದ್ಧಿಕ್ ಪ್ರಮುಖ್ ಸುಧೀರ್ ಮತ್ತಿತರರು ಭಾಗವಹಿಸಿದ್ದರು.

ಖ್ಯಾತ ಸಾಹಿತಿ ಸರಸ್ವತಿ ಸಮ್ಮಾನ್, ಪದ್ಮಭೂಷಣ ಡಾ.ಎಸ್.ಎಲ್. ಭೈರಪ್ಪ ಅವರಿಗೆ ಕಾರ್ಯಕ್ರಮದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BENGALURUDattatreya HosabaleKannada News WebsiteLatest News KannadaRashtriya swayam seva sanghaRSSದತ್ತಾತ್ರೇಯ ಹೊಸಬಾಳೆದೀನದಯಾಳ ಉಪಾಧ್ಯಾಯರುಬೆಂಗಳೂರುರಾಷ್ಟ್ರೀಯ ಸ್ವಯಂಸೇವಕ ಸಂಘಸ್ವಯಂಸೇವಕ
Previous Post

ಸೆ.28 ಜ್ಞಾನದಸರಾ | ತಾಳಗುಂದದ ಮಯೂರ ಶರ್ಮ ಕುರಿತು ವಿಚಾರ ಸಂಕಿರಣ | ನಟರಾಜ್ ಭಾಗವತ್

Next Post

ಸೆ.27, 28 | ಐಎಂಎ ಶಿವಮೊಗ್ಗ ಶಾಖೆ ಅಮೃತ ಮಹೋತ್ಸವ ಸಮಾರೋಪ ಸಮಾರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೆ.27, 28 | ಐಎಂಎ ಶಿವಮೊಗ್ಗ ಶಾಖೆ ಅಮೃತ ಮಹೋತ್ಸವ ಸಮಾರೋಪ ಸಮಾರಂಭ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸೆ.28ರಂದು ಗಮಕ ದಸರಾ | ರಾಜ್ಯಮಟ್ಟದ ಗಮಕವಾಚನ ಸ್ಪರ್ಧೆ

September 26, 2025

ಹುಬ್ಬಳ್ಳಿ | ಕೆಳಸೇತುವೆಯಲ್ಲಿ ಕಲಾತ್ಮಕ ಅಲಂಕಾರ ಮಾಡಿ ಮಾದರಿಯಾದ ರೈಲ್ವೆ ಅಧಿಕಾರಿಗಳು

September 26, 2025

ಎನ್‌ಸಿಸಿ ಯುವಕರಲ್ಲಿ ಸಾಮಾಜಿಕ ಸೇವಾ ಮೌಲ್ಯ ಬೆಳಸಲು ಸಹಕಾರಿ: ಪ್ರಾಚಾರ್ಯ ರವೀಂದ್ರ

September 26, 2025
Image Courtesy: Internet

ಬೆಂಗಳೂರು – ಹೊಸಪೇಟೆ ನಡುವೆ ವಿಶೇಷ ರೈಲು | ಯಾವತ್ತು? ಎಲ್ಲೆಲ್ಲಿ ನಿಲುಗಡೆ?

September 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸೆ.28ರಂದು ಗಮಕ ದಸರಾ | ರಾಜ್ಯಮಟ್ಟದ ಗಮಕವಾಚನ ಸ್ಪರ್ಧೆ

September 26, 2025

ಹುಬ್ಬಳ್ಳಿ | ಕೆಳಸೇತುವೆಯಲ್ಲಿ ಕಲಾತ್ಮಕ ಅಲಂಕಾರ ಮಾಡಿ ಮಾದರಿಯಾದ ರೈಲ್ವೆ ಅಧಿಕಾರಿಗಳು

September 26, 2025

ಎನ್‌ಸಿಸಿ ಯುವಕರಲ್ಲಿ ಸಾಮಾಜಿಕ ಸೇವಾ ಮೌಲ್ಯ ಬೆಳಸಲು ಸಹಕಾರಿ: ಪ್ರಾಚಾರ್ಯ ರವೀಂದ್ರ

September 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!