No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಒಂದೇ ವರ್ಷದಲ್ಲಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗ ಗಳಿಸಿದ ಆದಾಯವೆಷ್ಟು ಗೊತ್ತಾ?

2025-26ರ ವರ್ಷದಲ್ಲಿ ವಿಭಾಗದ ಸಾಧನೆ | ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 4, 2026
in Rail Dairy (ರೈಲ್ವೆ ಸುದ್ದಿಗಳು)
0
ಒಂದೇ ವರ್ಷದಲ್ಲಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗ ಗಳಿಸಿದ ಆದಾಯವೆಷ್ಟು ಗೊತ್ತಾ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು South Western Railway Bengaluru division 2025-26 ನೇ ಸಾಲಿನಲ್ಲಿ ಟಿಕೆಟ್ ತಪಾಸಣೆಯಿಂದ 39.68 ಕೋಟಿ ರೂಪಾಯಿಗಳ ಆದಾಯವನ್ನು ಗಳಿಸಿದ್ದು, ಒಟ್ಟಾರೆಯಾಗಿ 2025-26ರಲ್ಲಿ 2420.55 ಕೋಟಿ ರೂ. ಆದಾಯ ಗಳಿಸಿದೆ ಎಂದು ನೈಋತ್ಯ ರೈಲ್ವೆ ಬೆಂಗಳೂರು ವಿಭಾಗೀಯ ವ್ಯವಸ್ಥಾಪಕರಾದ ಅಶುತೋಷ್ ಕುಮಾರ್ ಸಿಂಗ್ Ashutosh Kumar Singh ತಿಳಿಸಿದ್ದಾರೆ.

ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪಾರ್ಸೆಲ್ ಆದಾಯವು 140.31 ಕೋಟಿ ರೂಪಾಯಿಗಳಾಗಿದ್ದು ಇದು ಈ ವರೆಗಿನ ಅತ್ಯಧಿಕ ಪಾರ್ಸೆಲ್ ಆದಾಯವಾಗಿದೆ. ಸರಕು ಸಾಗಣೆ ಆದಾಯವು 351.07 ಕೋಟಿ ರೂಪಾಯಿಗಳಾಗಿದ್ದು 2024-25 ರಲ್ಲಿ ಇದು 327.74 ಕೋಟಿ ರೂಪಾಯಿಗಳಾಗಿತ್ತು. ಪ್ರಯಾಣಿಕ ಆದಾಯವು ಸಹಾ ಏರಿಕೆಯನ್ನು ದಾಖಲಿಸಿದ್ದು 2025-26 ರಲ್ಲಿ 2420.55 ಕೋಟಿ ರೂಪಾಯಿಗಳ ಆದಾಯವನ್ನು ಗಳಿಸಿದೆ ಎಂದು ತಿಳಿಸಿದ್ದಾರೆ.
2025-26ರಲ್ಲಿ ಬೆಂಗಳೂರು ವಿಭಾಗವು 2.13 ಮಿಲಿಯನ್ ಟನ್ ಸರಕು ಸಾಗಣೆ ಮಾಡಿದ್ದು ಇದು 2024-25ರಲ್ಲಿ 2.07 ಮಿಲಿಯನ್ ಟನ್ ಆಗಿತ್ತು. 2,681 ರೇಕ್ಗಳ ಲೋಡಿಂಗ್ ಮಾಡಲಾಗಿದ್ದು ಇದು 2024-25ನೇ ಆರ್ಥಿಕ ವರ್ಷಕ್ಕಿಂತ 20.22% ರಷ್ಟು ಹೆಚ್ಚಾಗಿದೆ ಎಂದಿದ್ದಾರೆ.

ಬೆಳಂದೂರು ರೋಡ್- ಕಾರ್ಮೆಲರಾಂ(3.522 ಕಿ.ಮೀ.) ಜೋಡಿಮಾರ್ಗ ಮತ್ತು ವಿದ್ಯುದೀಕರಣ ಹಾಗೂ ಮಕ್ಕಾಜಿಪಲ್ಲಿ – ನಾಗಸಮುದ್ರಂ – ಧರ್ಮಾವರಂ (28.600 ಕಿಮೀ.) ಜೋಡಿಮಾರ್ಗ ಮತ್ತು ವಿದ್ಯುದೀಕರಣವನ್ನು ಕಾರ್ಯಗತಗೊಳಿಸಲಾಗಿದೆ.

ತುಮಕೂರು – ಊರುಕೆರೆ – ತಿಮ್ಮರಾಜನಹಳ್ಳಿ 24 ಕಿಮೀ ನಡುವೆ ಹೊಸ ಮಾರ್ಗವನ್ನು ಪೂರ್ಣಗೊಳಿಸಲಾಗಿದೆ. ಬೆಂಗಳೂರು ಕಂಟೋನ್ಮೆಂಟ್ – ಬೈಯ್ಯಪ್ಪನಹಳ್ಳಿ ಪಶ್ಚಿಮ ಕ್ಯಾಬಿನ್ ನಡುವೆ 4.92 ಕಿಮೀ 3 ಮತ್ತು 4 ನೇ ಮಾರ್ಗವನ್ನು ಕಾರ್ಯನಿಯೋಜನೆಗೊಳಿಸಲಾಗಿದೆ ಎಂದರು.
ಯಲಹಂಕ – ಧರ್ಮಾವರಂ (161 ಕಿ.ಮೀ.) ಭಾಗದಲ್ಲಿ ಸೆಕ್ಷನಲ್ ವೇಗವನ್ನು ಗಂಟೆಗೆ 130 ಕಿ.ಮೀ.ಗೆ ಹೆಚ್ಚಿಸಲಾಗಿದೆ. ಚಿಕ್ಕಬಳ್ಳಾಪುರ – ಚಿಂತಾಮಣಿ ಮತ್ತು ಬೈಯ್ಯಪ್ಪನಹಳ್ಳಿಯಿಂದ ಓಮಲೂರು ನಿಲ್ದಾಣದವರೆಗಿನ (131 ಕಿ.ಮೀ.) ಭಾಗದಲ್ಲಿ ವೇಗವನ್ನು ಗಂಟೆಗೆ 110 ಕಿ.ಮೀ.ಗೆ ಹೆಚ್ಚಿಸಲಾಗಿದೆ. 106 ರೈಲುಗಳ ವೇಗವನ್ನು ಹೆಚ್ಚಿಸಲಾಗಿದೆ. 8 ಲೆವೆಲ್ ಕ್ರಾಸಿಂಗ್ ಗೇಟ್’ಗಳನ್ನು ತೆಗೆದುಹಾಕಲಾಗಿದೆ. 4 ರಸ್ತೆ ಮೇಲ್ಸೇತುವೆ ಮತ್ತು 10 ರಸ್ತೆ ಕೆಳ ಸೇತುವೆಗಳನ್ನು ನಿರ್ಮಿಸಲಾಗಿದೆ. ಬಂಗಾರಪೇಟೆ ನಿಲ್ದಾಣದಲ್ಲಿ ಎಲ್ಲಾ ಪ್ಲಾಟ್’ಫಾರಂಗಳನ್ನು ಸಂಪರ್ಕಿಸುವ 6 ಮೀರ್ಟ ಅಗಲದ ಪಾದಚಾರಿ ಮೇಲ್ಸೇತುವೆ (ಫುಟ್ ಓವರ್ ಬ್ರಿಡ್ಜ್) ಯೊಂದಿಗೆ ನಿಲ್ದಾಣದ 2 ನೇ ಪ್ರವೇಶ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದರು.

ಬೆಂಗಳೂರಿನಿಂದ ಬೆಳಗಾವಿ ಮತ್ತು ಎರ್ನಾಕುಲಂಗೆ ವಂದೇ ಭಾರತ್ ರೈಲುಸೇವೆ, ಎಸ್’ಎಂವಿಟಿ ಬೆಂಗಳೂರು- ಅಲಿಪುರದ್ವಾರ ಅಮೃತ ಭಾರತ್ ರೈಲು ಸೇವೆ, ಎಸ್’ಎಂವಿಟಿ ಬೆಂಗಳೂರಿನಿAದ ಗ್ವಾಲಿಯರ್, ಬಾಲುರ್ಘಾಟ್ ಮತ್ತು ರಾಧಿಕಾಪುರ ಕಡೆಗೆ ರೈಲು ಸೇವೆಗಳನ್ನು ಪ್ರಾರಂಭಿಸಲಾಗಿದೆ.

2025ರ ಅಕ್ಟೋಬರ್ 30ರಂದು ಕೆಎಸ್’ಆರ್ ಬೆಂಗಳೂರು ನಿಲ್ದಾಣದಲ್ಲಿ ಮೊಬೈಲ್ ಯುಟಿಎಸ್ ಸಹಾಯಕ್ ಯೋಜನೆಯನ್ನು ಪ್ರಾರಂಭಿಸಲಾಯಿತು. ಭಾರತೀಯ ರೈಲ್ವೆಯಲ್ಲಿ ಮೊಬೈಲ್ ಯುಟಿಎಸ್ ಸಹಾಯಕ್ ಟಿಕೆಟಿಂಗ್ ಅನ್ನು ಪ್ರಾರಂಭಿಸಿದ ಮೊದಲ ವಿಭಾಗವೆಂಬ ಹೆಗ್ಗಳಿಕೆಯನ್ನು ಬೆಂಗಳೂರು ವಿಭಾಗವು ಪಡೆಯಿತು. ಈ ಉಪಕ್ರಮವು ಪ್ರಯಾಣಿಕರಿಗೆ ಕಾಯ್ದಿರಿಸದ ಟಿಕೆಟ್’ಗಳನ್ನು ಕೊಳ್ಳಲು ಹೆಚ್ಚುವರಿ ಆಯ್ಕೆಯನ್ನು ನೀಡುವುದರ ಮೂಲಕ ಕೌಂಟರ್’ಗಳಲ್ಲಿ ಜನದಟ್ಟಣೆಯನ್ನು ಕಡಿಮೆ ಮಾಡುತ್ತದೆ ಹಾಗೂ ಪ್ರಯಾಣದ ಅನುಕೂಲತೆಯನ್ನು ಹೆಚ್ಚಿಸುತ್ತದೆ ಎಂದರು.
ಕೆಎಸ್’ಆರ್ ಬೆಂಗಳೂರು ನಿಲ್ದಾಣದಲ್ಲಿ ವಿಭಾಗದ ಮೂರನೇ ರೈಲು ಕೋಚ್ ರೆಸ್ಟೋರೆಂಟ್ ಅನ್ನು ಆರಂಭಿಸುವ ಪ್ರಕ್ರಿಯೆ ನಡೆಯುತ್ತಿದೆ. ನಿಲ್ದಾಣದ ಸೌಲಭ್ಯಗಳ ಮಾಹಿತಿ ಮತ್ತು ಸುಗಮ ಪ್ರವೇಶವನ್ನು ಸಾಧ್ಯವಾಗಿಸಲು ವಿಭಾಗದ ಎಲ್ಲಾ 14 ಪ್ರಮುಖ ನಿಲ್ದಾಣಗಳಲ್ಲಿ ನಮ್ಮನಕ್ಷೆ ಅಪ್ಲಿಕೇಶನ್ ಅನ್ನು ಪರಿಚಯಿಸಲಾಗಿದೆ ಎಂದು ತಿಳಿಸಿದರು.

ಹಬ್ಬ ಮತ್ತು ರಜಾದಿನಗಳಲ್ಲಿ ಪ್ರಯಾಣಿಕರ ಹೆಚ್ಚುವರಿ ಜನದಟ್ಟಣೆಯನ್ನು ಪೂರೈಸುವ ಸಲುವಾಗಿ, 2024-25 ರಲ್ಲಿ ಸಂಚರಿಸಲಾದ 4210 ಟ್ರಿಪ್’ಗಳಿಗೆ ಹೋಲಿಸಿದರೆ 2025-26 ರಲ್ಲಿ 4706 ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಾಯಿತು ಮತ್ತು 5220 ಹೆಚ್ಚುವರಿ ಬೋಗಿಗಳನ್ನು ವಿವಿಧ ರೈಲುಗಳಿಗೆ ಅಳವಡಿಸಲಾಯಿತು ಎಂದರು.

ಸಾರ್ವಜನಿಕರ ಪ್ರಯಾಣದ ಅನುಕೂಲಕ್ಕಾಗಿ ನಿಟ್ಟೂರು, ನೆಲಮಂಗಲ, ಹಿಂದೂಪುರ, ಸತ್ಯ ಸಾಯಿ ಪ್ರಶಾಂತಿ ನಿಲಯಂ, ನಾಯಂಡಹಳ್ಳಿ ಮತ್ತು ದೇವನಗೊಂತಿ ನಿಲ್ದಾಣಗಳಲ್ಲಿ ಎಕ್ಸ್’ಪ್ರೆಸ್ ರೈಲುಗಳಿಗೆ ಹೆಚ್ಚುವರಿ ನಿಲುಗಡೆಗಳನ್ನು ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.

2025-26ರಲ್ಲಿ ಟಿಕೆಟ್ ದಲ್ಲಾಳಿಗಳ ವಿರುದ್ಧ 144 ಪ್ರಕರಣಗಳು ದಾಖಲಾಗಿದ್ದು 4,08,752/- ರೂಪಾಯಿ ಮೌಲ್ಯದ 277 ಪ್ರಯಾಣದ ಟಿಕೆಟ್ ಗಳನ್ನು ಮುಟ್ಟುಗೋಲು ಹಾಕಲಾಯಿತು. ಆಪರೇಷನ್ ನನ್ಹೆ ಫರಿಷ್ತೆಯಡಿ 311 ಬಾಲಕರು ಮತ್ತು 96 ಬಾಲಕಿಯರನ್ನು ರಕ್ಷಿಸಲಾಗಿದೆ ಎಂದು ಹೇಳಿದರು.
ಡೀಸೆಲ್ ಇಂಜಿನ್ ನಿಂದ ಚಲಿಸುತ್ತಿದ್ದ 14 ರೈಲುಗಳನ್ನು ವಿದ್ಯುತ್ ಇಂಜಿನ್ ಗೆ ಪರಿವರ್ತಿಸುವ ಮೂಲಕ ವಾರ್ಷಿಕ 43.73 ಕೋಟಿ ರೂಪಾಯಿಗಳ ಉಳಿತಾಯವಾಗುತ್ತಿದೆ. ಬೆಂಗಳೂರು ವಿಭಾಗದ 20 ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆಯುವುದರ ಮೂಲಕ ಬೆಂಗಳೂರು ವಿಭಾಗಕ್ಕೆ ಹೆಮ್ಮೆಯನ್ನು ತಂದಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರುಗಳಾದ ಪರೀಕ್ಷಿತ್ ಮೋಹನ್ಪೂರಿಯ, ಪ್ರವೀಣ್ ಕಾತರಕಿ; ಮುಖ್ಯ ಯೋಜನಾ ವ್ಯವಸ್ಥಾಪಕರಾದ ಗುಲ್ ಅಶ್ಫಾಕ್ ಮೊಹಮ್ಮದ್, ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರಾದ ಕೃಷ್ಣ ಚೈತನ್ಯ, ಹಿರಿಯ ವಿಭಾಗೀಯ ಪರಿಚಾಲನಾ ವ್ಯವಸ್ಥಾಪಕಿ ಪ್ರಿಯಾ, ಹಿರಿಯ ವಿಭಾಗೀಯ ಇಂಜಿನಿಯರ್ ಹರ್ಷಿತ್ ಗುಪ್ತಾ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: Ashutosh Kumar SinghBENGALURUKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSouth Western Railway Bengaluru divisionಅಶುತೋಷ್ ಕುಮಾರ್ ಸಿಂಗ್ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗಬೆಂಗಳೂರು
Share200Tweet125Send
Previous Post

ಗಮನಿಸಿ! ಚಿತ್ರದುರ್ಗ-ಚಿಕ್ಕಜಾಜೂರು ರೈಲುಗಳು ಭಾಗಶಃ ರದ್ದು | ಇಲ್ಲಿದೆ ಡೀಟೇಲ್ಸ್

Next Post

ಚಾಮರಾಜನಗರ | ಸೀತಾಕಲ್ಯಾಣ ಮಹೋತ್ಸವ ಅದ್ದೂರಿ ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಾಮರಾಜನಗರ | ಸೀತಾಕಲ್ಯಾಣ ಮಹೋತ್ಸವ ಅದ್ದೂರಿ ಸಂಪನ್ನ

ಚಾಮರಾಜನಗರ | ಸೀತಾಕಲ್ಯಾಣ ಮಹೋತ್ಸವ ಅದ್ದೂರಿ ಸಂಪನ್ನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಭಾರತವು ವಿಶ್ವಗುರು ಸ್ಥಾನ ಅಲಂಕರಿಸಲು ಮೂಲಶಕ್ತಿ ವೇದವ್ಯಾಸರು | ವಿದ್ಯೇಶತೀರ್ಥ ಶ್ರೀಗಳ ಅಭಿಮತ

ಭಾರತವು ವಿಶ್ವಗುರು ಸ್ಥಾನ ಅಲಂಕರಿಸಲು ಮೂಲಶಕ್ತಿ ವೇದವ್ಯಾಸರು | ವಿದ್ಯೇಶತೀರ್ಥ ಶ್ರೀಗಳ ಅಭಿಮತ

April 28, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಖಂಡನೀಯ: ಕೆ.ಪಿ.ಶ್ರೀಪಾಲ್

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಖಂಡನೀಯ: ಕೆ.ಪಿ.ಶ್ರೀಪಾಲ್

April 28, 2026
ಓಪನ್ ಮೈಂಡ್ಸ್ ಶಾಲೆಯಲ್ಲಿ ಕೆ-12 ಸೂಪರ್ ಇಂಟೆಲಿಜೆನ್ಸ್ ಪಠ್ಯಕ್ರಮ: ಕಿರಣ್‍ಕುಮಾರ್

ಓಪನ್ ಮೈಂಡ್ಸ್ ಶಾಲೆಯಲ್ಲಿ ಕೆ-12 ಸೂಪರ್ ಇಂಟೆಲಿಜೆನ್ಸ್ ಪಠ್ಯಕ್ರಮ: ಕಿರಣ್‍ಕುಮಾರ್

April 28, 2026
ನಿರಂತರ ಪ್ರಯತ್ನವೇ ಯಶಸ್ಸಿನ ಸೂತ್ರ: ಡಾ. ಪಿ. ನಾರಾಯಣ

ನಿರಂತರ ಪ್ರಯತ್ನವೇ ಯಶಸ್ಸಿನ ಸೂತ್ರ: ಡಾ. ಪಿ. ನಾರಾಯಣ

April 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL