Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಸಾತ್ವಿಕರ ಸಹಕಾರದಲ್ಲಿ ಧರ್ಮದ ಉಳಿವಿಗೆ ಮಠಗಳು ಮುಂದಾಗಲಿ: ಭಂಡಾರಕೇರಿ ಶ್ರೀ ಕರೆ

ಶ್ರೀ ವಿದ್ಯೇಶ ಸಪ್ತತಿ ವಿಚಾರ ವಿನೋದ ವೈಭವ ಸಂಪನ್ನ | ಭಂಡಾರಕೇರಿ ಶ್ರೀಗಳ 70ನೇ ವರ್ಧಂತಿ | 70 ಪಂಡಿತರಿಗೆ ವಿಶೇಷ ಸನ್ಮಾನ

June 18, 2024
in ಬೆಂಗಳೂರು ನಗರ
0 0
0
ಬೆಂಗಳೂರಿನ ಗಿರಿನಗರದ ಭಾಗವತ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಸಮಾರಂಭದಲ್ಲಿ 70 ವಸಂತಗಳನ್ನು ಪೂರ್ಣಗೊಳಿಸಿದ ಭಂಡಾರ ಕೇರಿ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಅವರಿಗೆ ತೀರ್ಥಹಳ್ಳಿ ತಾಲೂಕು ಭೀಮನಕಟ್ಟೆ ಮಠದ ಶ್ರೀ ರಘುವರೇಂದ್ರ ತೀರ್ಥ ಸ್ವಾಮೀಜಿ ಅವರು ಮಲ್ಲಿಗೆ ಪುಷ್ಪದ ವಿಶೇಷ ಕಿರೀಟ ಸಮರ್ಪಣೆ ಮಾಡಿದರು.

ಬೆಂಗಳೂರಿನ ಗಿರಿನಗರದ ಭಾಗವತ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಸಮಾರಂಭದಲ್ಲಿ 70 ವಸಂತಗಳನ್ನು ಪೂರ್ಣಗೊಳಿಸಿದ ಭಂಡಾರ ಕೇರಿ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಅವರಿಗೆ ತೀರ್ಥಹಳ್ಳಿ ತಾಲೂಕು ಭೀಮನಕಟ್ಟೆ ಮಠದ ಶ್ರೀ ರಘುವರೇಂದ್ರ ತೀರ್ಥ ಸ್ವಾಮೀಜಿ ಅವರು ಮಲ್ಲಿಗೆ ಪುಷ್ಪದ ವಿಶೇಷ ಕಿರೀಟ ಸಮರ್ಪಣೆ ಮಾಡಿದರು.

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸಮಾಜದ ಸಾತ್ವಿಕರ ಸಹಕಾರದೊಂದಿಗೆ ಮಠಾಧೀಶರುಗಳು ಧರ್ಮ ಮತ್ತು ಸಂಸ್ಕೃತಿಯ ಉಳಿವಿಗೆ ಮುಂದಾಗಬೇಕು ಎಂದು ಉಡುಪಿ ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಕರೆ ನೀಡಿದರು.

ಶ್ರೀ ಅಚ್ಚುತಪ್ರಜ್ಞ, ಜಗದ್ಗುರು ಶ್ರೀ ಪೂರ್ಣಪಜ್ಞ, ಸತ್ಯ ತೀರ್ಥ ಮಹಾಸಂಸ್ಥಾನ ಶ್ರೀ ಭಂಡಾರ ಕೇರಿ ಮಠ, ಭಾಗವತಾಶ್ರಮ ಪ್ರತಿಷ್ಠಾನ ಹಾಗೂ ಲೋಕ ಸಂಸ್ಕೃತಿ ಕಲಾ ವಿದ್ಯಾ ವಿಕಾಸ ಪ್ರತಿಷ್ಠಾನಗಳು ಸಂಯುಕ್ತವಾಗಿ ಬೆಂಗಳೂರಿನ ಗಿರಿನಗರದಲ್ಲಿರುವ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ವಿದ್ಯೇಶ ತೀರ್ಥರ 70 ನೇ ವರ್ಧಂತಿ ಉತ್ಸವದಲ್ಲಿ ಅವರು ಆಶೀರ್ವಚನ ನೀಡಿದರು.
ಧರ್ಮ ಮತ್ತು ಸಂಸ್ಕೃತಿಯನ್ನು ಉಳಿಸಲು ಮಠಪೀಠಗಳು ಮುಂದಾಗಬೇಕು ಇದಕ್ಕೆ ಸಾತ್ವಿಕರು ಸಹಕಾರವನ್ನು ನೀಡಬೇಕು. ಆಗ ಮಾತ್ರ ನಮ್ಮ ಪರಂಪರೆ ಮುಂದಿನ ಪೀಳಿಗೆಗೆ ಉಳಿಯಲು ಸಾಧ್ಯ ಎಂದು ಸ್ವಾಮೀಜಿ ನುಡಿದರು.

ಯಾವ ಮಠಪೀಠಗಳಲ್ಲಿ ವಿದ್ವಾಂಸರಿಗೆ ಕಲಾವಿದರಿಗೆ ಶಾಸ್ತ್ರಕಾರರಿಗೆ ಮತ್ತು ಸನಾತನ ಪರಂಪರೆಯನ್ನು ಚಾಚು ತಪ್ಪದೆ ಪಾಲಿಸುವವರಿಗೆ ಮನ್ನಣೆ ಸಿಗುತ್ತದೆಯೋ ಅಲ್ಲಿ ಸಾಕ್ಷಾತ್ ಭಗವಂತನ ಆರಾಧನೆ ನಡೆಯುತ್ತದೆ. ಈ ನಿಟ್ಟಿನಲ್ಲಿ ಭಂಡಾರ ಕೇರಿ ಮಠ 70 ಜನ ವಿದ್ವಾಂಸರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಅವರಿಂದ ವಿವಿಧ ವಿಚಾರಗಳ ಮಂಡನೆ ಮತ್ತು ಶಾಸ್ತ್ರ ಮಹಾಭಾರತ ರಾಮಾಯಣಗಳ ಸಾರ ಸಂಗ್ರಹಗಳ ಬೋಧನೆ ನಡೆದಿದೆ. ಈ ಸಂದರ್ಭದಲ್ಲಿ ಮಾಗ ಈ ಸಂದರ್ಭದಲ್ಲಿ ಮಾಗಡಿ ಸಮೀಪ ಇರುವ ಆನಂದವನ ಗುರುಕುಲದ ಸಮಗ್ರ ಪ್ರಗತಿಗೆ ಶ್ರೀಮಠವು ನಿಧಿ ಸಮರ್ಪಣೆಯನ್ನು ಮಾಡಿ ಧನ್ಯತೆ ಮೆರೆದಿದೆ ಎಂದು ಅವರು ಹೇಳಿದರು.

ಭಂಡಾರ ಕೇರಿ ಗುರುಗಳ 70ನೇ ವರ್ಧಂತಿ ಮಹೋತ್ಸವದ ಸಂದರ್ಭದಲ್ಲಿ 70 ಜನ ವಿದ್ವಾಂಸರಿಗೆ ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ರಜತ ಪಾತ್ರೆ ಸಹಿತ ಸನ್ಮಾನಿಸಿ ಗೌರವಿಸಲಾಯಿತು ಭೀಮನ ಕಟ್ಟೆ ಮಠದ ಶ್ರೀ ರಘುವರೇಂದ್ರ ತೀರ್ಥ ಸ್ವಾಮೀಜಿ ಮತ್ತು ಬಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ತೀರ್ಥಹಳ್ಳಿ ತಾಲೂಕು ಭೀಮನಕಟ್ಟೆ ಮಠದ ಶ್ರೀ ರಘುವರೇಂದ್ರ ತೀರ್ಥ ಸ್ವಾಮೀಜಿ ಸಾನಿಧ್ಯ ವಹಿಸಿ ಆಶೀರ್ವಚನವನ್ನು ನೀಡಿ, ಭಂಡಾರಕೇರಿ ಗುರುಗಳ ಶತಮಾನೋತ್ಸವವನ್ನು ನಾವೆಲ್ಲರೂ ಸಂಭ್ರಮದಿಂದ ಆಚರಿಸಲು ಸಂಕಲ್ಪಿಸೋಣ ಎಂದರು.
ಶ್ರೀ ಮಠವು ವಿದ್ವಜನರಿಗೆ ಅಪಾರವಾದ ಮನ್ನಣೆಯನ್ನು ಮತ್ತು ವೇದಿಕೆಯನ್ನು ನೀಡುತ್ತಿದೆ. ಸ್ವತಃ ಶ್ರೀಗಳೆ ರಚನೆ ಮಾಡಿರುವ ವಿದೇಶ ವಿಠಲ ಅಂಕಿತ ಕೃತಿಗಳ ಪ್ರಕಟಣೆಯು ಈಗ ನಡೆದಿದೆ. ಈ ಸಂದರ್ಭದಲ್ಲಿ ಬಿಡುಗಡೆಯಾದಂತಹ ಎರಡು ಮಹತ್ತರವಾದ ಕೃತಿಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಗೆ ಸಾಕ್ಷಿಯಾಗಿವೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಶ್ರೀ ವಿದ್ಯೇಶ ಸಪ್ತತಿ ವಿಚಾರ ವಿನೋದ ಉತ್ಸವ-ಶೀರ್ಷಿಕೆ ಅಡಿಯಲ್ಲಿ 70 ಜನ ಸಾರಂಗ ವಿದ್ವಾಂಸರಿಂದ ಚುಟುಕು ವೈವಿಧ್ಯ ಭರಿತ ಚೇತೋಹಾರಿ ವಿಚಾರ ಮಂಡನೆ ನಡೆಯಿತು.

ಮಹಾಭಾರತದ 18 ಪರ್ವಗಳು, ಭಾಗವತ ದ್ವಾದಶ ಸ್ಕಂದಗಳು ಮತ್ತು ಆರು ಉಪನಿಷತ್ತುಗಳ ಬಗ್ಗೆ 70 ಜನ ವಿದ್ವಾಂಸರಿAದ ವಿಚಾರ ವಿಮರ್ಶೆ ಮತ್ತು ವಿಚಾರ ಮಂಡನೆ ಗಮನ ಸೆಳೆಯಿತು.

ಭಂಡಾರ ಕೇರಿ ಗುರುಗಳ 70ನೇ ವರ್ಧಂತಿ ಕಾರ್ಯಕ್ರಮದಲ್ಲಿ ಬೆಂಗಳೂರಿನ ಮಾಗಡಿ ಸಮೀಪದ ಆನಂದವನ ಗುರುಕುಲಕ್ಕೆ 5 ಲಕ್ಷ ರೂ. ನಿಧಿ ಸಮರ್ಪಿಸಲಾಯಿತು. ಗುರುಕುಲದ ಟ್ರಸ್ಟಿ, ಶ್ರೀನಿವಾಸ ಗುತ್ತಲ ನಿಧಿ ಸ್ವೀಕಾರ ಮಾಡಿದರು.

ಬೆಂಗಳೂರಿನ ಶ್ರೀಜಯತೀರ್ಥ ವಿದ್ಯಾಪೀಠ, ಶ್ರೀ ಪೂರ್ಣ ಪ್ರಜ್ಞ ವಿದ್ಯಾಪೀಠ, ಮೈಸೂರಿನ ವ್ಯಾಸತೀರ್ಥ ವಿದ್ಯಾಪೀಠವೂ ಸೇರಿದಂತೆ ಮಂತ್ರಾಲಯ, ಸೋದೆ, ಪಲಿಮಾರು, ತಿರುಪತಿ, ಪುತ್ತಿಗೆ ಮತ್ತಿತರ ಮಹಾ ಸಂಸ್ಥಾನಗಳ ಗುರುಕುಲ ಮತ್ತು ವಿದ್ಯಾಪೀಠದ ವಿದ್ವಾಂಸರು ಭಾಗವಹಿಸಿದ್ದರು.

ಗ್ರಂಥ ಲೋಕಾರ್ಪಣೆ
ಶ್ರೀಮಠದ ಅಂಗಸಂಸ್ಥೆಯಾದ ಐತರೇಯ ಶೋಧ ಪ್ರಕಾಶನದ ವತಿಯಿಂದ ಪ್ರಣತಿ ದರ್ಪಣ ಎಂಬ ಗ್ರಂಥ (ಸಂಗ್ರಹ, ಅನುವಾದ- ಪಂಡಿತ ರಘೋತ್ತಮ ನಾಗಸಂಪಿಗೆ, ಪರಿಶೋಧನೆ ಹಾಗೂ ಪರಿಷ್ಕರಣೆ ಡಾ.ಎಚ್. ಸತ್ಯನಾರಾಯಣ ಆಚಾರ್ಯ) ಮತ್ತು ವಿದ್ಯೇಶ ವಿಚಾರ ಸಪ್ತತಿ, (ವಿವಿಧೆಡೆ ಶ್ರೀ ಭಂಡಾರ ಕೇರಿ ಗುರುಗಳು ಮಾಡಿದ ಉಪನ್ಯಾಸ, ಪ್ರವಚನ ಮತ್ತು ಅಮೃತೋಪದೇಶಗಳ ಸಾರ ಸಂಗ್ರಹ-ಉಡುಪಿಯ ಪಂಡಿತ ಸಗ್ರಿ ರಾಘವೇಂದ್ರ ಉಪಾಧ್ಯಾಯರಿಂದ ಸಂಪಾದಿತ ಕೃತಿ) ಇವುಗಳ ಲೋಕಾರ್ಪಣೆ ನೆರವೇರಿತು.

ಪೇಜಾವರ ವಿದ್ಯಾ ಪೀಠದ ಪ್ರಾಚಾರ್ಯ ಸತ್ಯನಾರಾಯಣ ಡಾ. ಶ್ರೀನಿಧಿ, ವಿದುಷಿ ಶುಭಾ ಸಂತೋಷ, ಜಯರಾಂ ಇತರರು ಹಾಜರಿದ್ದರು.
70 ಜನ ಪಂಡಿತರಿಗೆ ರಜತ ಪಾತ್ರಾ ಸಹಿತ ಸನ್ಮಾನ ಮಾಡಿದ್ದು ವೈದಿಕ ವಿದ್ವತ್ ಪ್ರಪಂಚದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿತು.
ಗೌರವ ಸಮರ್ಪಣೆ
ಇದೇ ಸಂದರ್ಭದಲ್ಲಿ ಭೀಮನ ಕಟ್ಟೆ ಮಠದ ಶ್ರೀ ರಘುವರೇಂದ್ರ ತೀರ್ಥ ಸ್ವಾಮೀಜಿ ಅವರು ಪರಮಪೂಜ್ಯ ಭಂಡಾರಕೇರಿ ಶ್ರೀಗಳಿಗೆ ಮಲ್ಲಿಗೆ ಪುಷ್ಪದ ವಿಶೇಷ ಕಿರೀಟ ಸಮರ್ಪಣೆ ಮಾಡಿ ಗೌರವಿಸಿದರು.

ಗುರುಕುಲಕ್ಕೆ ನಿಧಿ ಸಮರ್ಪಣೆ
ಬೆಂಗಳೂರಿನ ಮಾಗಡಿ ಸಮೀಪದ ಅಡಕಮಾರನಹಳ್ಳಿಯಲ್ಲಿರುವ ಆನಂದವನ ಗುರುಕುಲಕ್ಕೆ ಭಂಡಾರ ಕೇರಿ ಮಠದ ವತಿಯಿಂದ 5 ಲಕ್ಷ ರೂಪಾಯಿ ವಿಶೇಷ ಅನುದಾನ ಪೂರ್ವಕ ಅನುಗ್ರಹ ನಿಧಿ ಸಮರ್ಪಣೆ ಮಾಡಲಾಯಿತು.

(ಆನಂದವನ ಗುರುಕುಲಕ್ಕೆ ದತ್ತಿ ದೇಣಿಗೆ ಮತ್ತು ದಾನ ನೀಡುವ ಆಸಕ್ತರು 7259040610 ಸಂಖ್ಯೆಗೆ ಸಂಪರ್ಕಿಸಬಹುದು).

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
Tags: Bandarakeri MuttBandarakeri Vidyeshatheertha ShriBENGALURUGurukulaKannada News WebsiteLatest News Kannadaಉಡುಪಿಗುರುಕುಲಬೆಂಗಳೂರುಭಂಡಾರಕೇರಿ ಮಠಭಾಗವತಾಶ್ರಮಭೀಮನಕಟ್ಟೆ ಮಠಶ್ರೀ ವಿದ್ಯೇಶ ತೀರ್ಥಸಂಸ್ಕೃತಿ
Previous Post

ಯಾದವರು, ಮುಸ್ಲೀಮರು ನನ್ನಿಂದ ಯಾವ ಸಹಾಯ ನಿರೀಕ್ಷಿಸಬೇಡಿ: ಹೀಗೆ ಹೇಳಿದ ರಾಜಕಾರಣಿ ಯಾರು?

Next Post

ಸಾಗರ: ಗಾಂಜಾ ಮಾರುತ್ತಿದ್ದ ಮೂವರ ಮಾಲು ಸಹಿತ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಸಾಗರ: ಗಾಂಜಾ ಮಾರುತ್ತಿದ್ದ ಮೂವರ ಮಾಲು ಸಹಿತ ಬಂಧನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!