ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಂಬೈ-ಬೆಂಗಳೂರು ಸಂಪರ್ಕವನ್ನು ಇನ್ನಷ್ಟು ಬಲಪಡಿಸಲು, ಎರಡು ಹೊಸ ಸೇವೆಗಳ ಪರಿಚಯಿಸಲಾಗುವುದು ಎಂದು ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಬೆಂಗಳೂರಿನ ಬಿಇಎಂಎಲ್ ತಿಪ್ಪಸಂದ್ರ ಕ್ಯಾಂಪಸ್’ಗೆ ಭೇಟಿ ನೀಡಿ, ಹೈಸ್ಪೀಡ್ ರೈಲು #HighSpeedTrain ತಯಾರಿಕೆಗೆ ಮೀಸಲಾಗಿರುವ ವಿಶೇಷ ಸಂಕೀರ್ಣ ಆದಿತ್ಯ’ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.
Also Read>> ಮಹಿಳಾ ಮೀಸಲಾತಿ ಮಸೂದೆ ಸೋಲಿಸಿದ್ದೇ ಬಿಜೆಪಿ: ಭವ್ಯನರಸಿಂಹಮೂರ್ತಿ ತಿರುಗೇಟು
#Mumbai ಮುಂಬೈ-ಬೆಂಗಳೂರು ಸಂಪರ್ಕವನ್ನು ಇನ್ನಷ್ಟು ಬಲಪಡಿಸಲು, ಎರಡು ಹೊಸ ಸೇವೆಗಳ ಪರಿಚಯದ ಬಗ್ಗೆ ಸಚಿವರು ಮಾಹಿತಿ ನೀಡಿದರು.
ಹುಬ್ಬಳ್ಳಿ ಮಾರ್ಗವಾಗಿ ಎಲ್ಎಚ್ಬಿ ಕೋಚ್’ಗಳನ್ನು ಒಳಗೊಂಡ ಹೊಸ ಮೇಲ್/ಎಕ್ಸ್’ಪ್ರೆಸ್ ರೈಲು ಪರಿಚಯಿಸಲಾಗುವುದು. ಜೊತೆಗೆ, ವಂದೇ ಭಾರತ್ ಸ್ಲೀಪರ್ ಎಕ್ಸ್’ಪ್ರೆಸ್ #VandeBharatExpress ಶೀಘ್ರದಲ್ಲೇ ಕಾರ್ಯಾಚರಣೆಗೆ ಬರಲಿದೆ ಎಂದು ಹೇಳಿದರು.
ಪ್ರಾದೇಶಿಕ ಸಂಪರ್ಕವನ್ನು ವಿಸ್ತರಿಸುವ ಉದ್ದೇಶದಿಂದ, ಮಂಗಳೂರು-ಬೆಂಗಳೂರು ನಡುವಿನ ವಂದೇ ಭಾರತ್ ಸೇವೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಸಚಿವರು ದೃಢಪಡಿಸಿದರು.
ಈ ಸೇವೆಯನ್ನು ಅನುಷ್ಠಾನಗೊಳಿಸುವ ಮೊದಲು ಮಡಗಾಂವ್ ಹಾಗೂ ಕರ್ನಾಟಕದ ಇತರ ಕರಾವಳಿ #Coastal ನಗರಗಳನ್ನು ಸಂಪರ್ಕಿಸುವ ಬಗ್ಗೆ ಪರಿಗಣಿಸಲಾಗುತ್ತಿದೆ ಎಂದು ಹೇಳಿದರು.
ಹಾಸನ-ಮಂಗಳೂರು #Mangalore ವಿಭಾಗದಲ್ಲಿ ವಿದ್ಯುದೀಕರಣ ಪೂರ್ಣಗೊಂಡಿರುವುದು ಹಾಗೂ ಕಡಿದಾದ ಕರಾವಳಿ ಪ್ರದೇಶಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಸ್ವಯಂಚಾಲಿತ ತುರ್ತು ಬ್ರೇಕಿಂಗ್ ವ್ಯವಸ್ಥೆಗಳನ್ನು ಅಳವಡಿಸಿರುವುದರಿಂದ ತಾಂತ್ರಿಕ ಅಡಚಣೆಗಳು ನಿವಾರಣೆಯಾಗಿವೆ ಎಂದವರು ವಿವರಿಸಿದರು.
ಹೈ ಸ್ಪೀಡ್ ರೈಲು ತಂತ್ರಜ್ಞಾನವು ಅತ್ಯಂತ ಸಂಕೀರ್ಣ ಮತ್ತು ಉನ್ನತ ಮಟ್ಟದ ತಾಂತ್ರಿಕತೆಯನ್ನು ಒಳಗೊಂಡಿದ್ದು, ಅದರ ಸ್ವದೇಶೀ ಅಭಿವೃದ್ಧಿ ಭಾರತದ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದು ಹೇಳಿದರು.
ಹೊಸದಾಗಿ ಉದ್ಘಾಟಿಸಲಾದ ಆದಿತ್ಯ’ ಸಂಕೀರ್ಣವು ಪ್ರಸ್ತುತ ಬಿ-28 ಕೋಚ್’ಗಳ ಅಭಿವೃದ್ಧಿಗೆ ವಿನ್ಯಾಸಗೊಳಿಸಲಾಗಿದೆ ಎಂದರು.
ಹೈ ಸ್ಪೀಡ್ ರೈಲುಗಳ ಪರಿವರ್ತಕ ಶಕ್ತಿಯನ್ನು ಉಲ್ಲೇಖಿಸಿದ ಸಚಿವರು, ಇವು ಪ್ರಮುಖ ನಗರಗಳ ನಡುವಿನ ದೂರವನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡುವುದರ ಮೂಲಕ ಅವುಗಳನ್ನು ಒಂದೇ ವಿಸ್ತೃತ ನಗರ ವ್ಯವಸ್ಥೆಯಾಗಿ ರೂಪಿಸುವುದಕ್ಕೆ ಸಹಾಯ ಮಾಡುತ್ತವೆ ಎಂದು ಹೇಳಿದರು. ಉದಾಹರಣೆಗೆ, ಚೆನ್ನೈ ಮತ್ತು ಬೆಂಗಳೂರು ನಡುವಿನ ಪ್ರಯಾಣದ ಅವಧಿ ಕೇವಲ 73 ನಿಮಿಷಗಳಿಗೆ ಇಳಿಯುವ ಸಾಧ್ಯತೆ ಇದೆ ಎಂದು ತಿಳಿಸಿದರು.
Also Read>> ಏ.27ರಂದು ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಸಾವಯವ ಕೃಷಿಕರ ಟ್ರಸ್ಟ್ ಉದ್ಘಾಟನೆ
ಇನ್ನು, ತಿಪ್ಪಸಂದ್ರ ಘಟಕದ ಎಂಜಿನಿಯರಿಂಗ್ ಸಾಮರ್ಥ್ಯವನ್ನು ಶ್ಲಾಘಿಸಿದ ಸಚಿವರು, ಮುಂದಿನ ಪೀಳಿಗೆಯ ರೋಲಿಂಗ್ ಸ್ಟಾಕ್ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದರು.
ದೊಡ್ಡ ಮೂಲಸೌಕರ್ಯ ಅಭಿವೃದ್ಧಿಯೊಂದಿಗೆ ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಜಾಗೃತಿ ನಡುವಿನ ಸಮತೋಲನವನ್ನು ಕಾಪಾಡುವಲ್ಲಿ ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















