No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Tuesday, May 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳ ಪರಿಹಾರಕ್ಕಾಗಿ ಬಿಬಿಎಂಪಿ ಆಯುಕ್ತರಿಗೆ ನಟ ಅನಿರುದ್ ನೀಡಿದ ಸಲಹೆಗಳೇನು?

ಆಯುಕ್ತ ತುಷಾರ್ ಗಿರಿನಾಥ್ ಅವರ ವಿಶೇಷ ಆಮಂತ್ರಣದೊಂದಿಗೆ ಮಹತ್ವದ ಚರ್ಚೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 6, 2022
in ಬೆಂಗಳೂರು ನಗರ
0
ಬೆಂಗಳೂರಿನ ಸಮಸ್ಯೆಗಳ ಪರಿಹಾರಕ್ಕಾಗಿ ಬಿಬಿಎಂಪಿ ಆಯುಕ್ತರಿಗೆ ನಟ ಅನಿರುದ್ ನೀಡಿದ ಸಲಹೆಗಳೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರು ನಗರ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತಾಗಿ ಹಲವು ಮಹತ್ವದ ಸಲಹೆಗಳನ್ನು ನಟ ಅನಿರುದ್ ಜತ್ಕರ್ ಅವರು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ನೀಡಿದ್ದಾರೆ.

ಸ್ವತಃ ತುಷಾರ್ ಗಿರಿನಾಥ್ ಅವರ ವಿಶೇಷ ಆಮಂತ್ರಣದ ಹಿನ್ನೆಲೆಯಲ್ಲಿ ಅವರು ಹಾಗೂ ಅವರ ತಂಡವನ್ನು ಭೇಟಿಯಾದ ಅನಿರುದ್ ಅವರು, ಹಲವು ಸಮಸ್ಯೆಗಳ ಕುರಿತಾಗಿ ಚರ್ಚಿಸಿ, ಸಲಹೆಗಳನ್ನು ನೀಡಿದರು.

ಪ್ರಮುಖವಾಗಿ ಘನತ್ಯಾಜ್ಯ ನಿರ್ವಹಣೆ, ಸುರಕ್ಷತೆ, ಹಸಿರು ಹೊದಿಕೆಯ ಹೆಚ್ಚಳ ಮತ್ತು ಆರೋಗ್ಯ ಹಾಗೂ ನೈರ್ಮಲ್ಯ ಮುಂತಾದ ವಿಷಯಗಳ ಕುರಿತು ವಿಜ್ಞಾನಿಗಳು, ಇಂಜಿನಿಯರ್’ಗಳು, ನಗರ ಯೋಜಕರು, ವಾಸ್ತುಶಿಲ್ಪಿಗಳು, ಸಾಮಾಜಿಕ ಕಾರ್ಯಕರ್ತರು, ನಿವೃತ್ತ ಅಧಿಕಾರಿಗಳು ಇತ್ಯಾದಿ ಸಮಾನ ಸಂಖ್ಯೆಯ ಮಹಿಳೆಯರನ್ನೊಳಗೊಂಡ ತಜ್ಞರ ಸಮಿತಿಗಳನ್ನು ರಚಿಸಬಹುದು ಎಂದಿದ್ದಾರೆ.ಪ್ರತಿ ವಾರ್ಡಿನಲ್ಲೂ ವಸ್ತುಸ್ಥಿತಿಯ ಮೇಲೆ ಕಣ್ಣಿಡಲು ಹಾಗೂ ಸೂಕ್ತ ಸಲಹೆಗಳನ್ನು ನೀಡಲು ಬಿಬಿಎಂಪಿ ಅಧಿಕಾರಿಗಳು, ಸಾಮಾಜಿಕ ಸೇವಾಸಂಸ್ಥೆಗಳ ಪ್ರತಿನಿಧಿಗಳು ಹಾಗೂ ನಾಗರಿಕರನ್ನೊಳಗೊಂಡ ವಾರ್ಡ್ ಸಮಿತಿಗಳನ್ನು ರಚಿಸುವುದರ ಅಥವಾ ಸಕ್ರಿಯಗೊಳಿಸುವುದರ ಮೂಲಕ ಜನರು ಭಾಗವಹಿಸುವಂತೆ ನೋಡಿಕೊಳ್ಳಬಹುದು ಎಂದು ಸಲಹೆ ನೀಡಿದ್ದಾರೆ.

ಎಲ್ಲಾ ಝೋನಲ್ ಮಾರ್ಷಲ್’ಗಳ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಂಪರ್ಕ ಸಂಖ್ಯೆಗಳನ್ನು ರಸ್ತೆಗಳ ನಾಮಫಲಕಗಳ ಮೇಲೆ ಪ್ರದರ್ಶಿಸಿದರೆ ಅಗತ್ಯ ಬಂದಾಗ ನಾಗರಿಕರು ಅವರನ್ನೇ ನೇರವಾಗಿ ಸಂಪರ್ಕಿಸಬಹುದು ಎಂದಿದ್ದಾರೆ.

ಘನತ್ಯಾಜ್ಯ ನಿರ್ವಹಣೆ ಮತ್ತು ಸ್ವಚ್ಛತೆ:

  • ಯಾವುದೇ ಬಗೆಯ ಪ್ಲಾಸ್ಟಿಕ್ ಬಳಕೆ ಮೇಲಿನ ನಿಷೇಧವನ್ನು ಜಾರಿಗೊಳಿಸುವುದು
  • ವಾರ್ಡುಗಳಲ್ಲಿ ಅಲ್ಲಲ್ಲಿ ಕಂಪೋಸ್ಟರ್ ಗಳನ್ನಿಟ್ಟು ನಿಯಮಿತವಾಗಿ ಜೈವಿಕ ವಿಘಟನೀಯ ತ್ಯಾಜ್ಯ ಸಂಗ್ರಹವಾಗಿ ಕಂಪೋಸ್ಟರ್ ಗಳಿಗೆ ಹೋಗುವಂತೆ ಮಾಡಬೇಕು – ಬೇರ್ಪಡಿಸಿದ ಜೈವಿಕ ವಿಘಟನೀಯ ತ್ಯಾಜ್ಯವನ್ನು ನೀಡಲು ನಾಗರಿಕರಿಗೆ ಪ್ರೋತ್ಸಾಹಕವನ್ನು ಘೋಷಿಸಬಹುದು. ಹಾಗೆಯೇ, ಮರುಬಳಕೆ ಮಾಡಬಹುದಾದ ತ್ಯಾಜ್ಯವನ್ನು ಬೇರ್ಪಡಿಸಲೂ ಜನರಿಗೆ ಪ್ರೋತ್ಸಾಹಕಗಳನ್ನು ಕೊಡಬಹುದು. ಈ ಪ್ರಯತ್ನದಲ್ಲಿ ಇಂತಹ ತ್ಯಾಜ್ಯವನ್ನು ಕೊಂಡುಕೊಂಡು ಅವುಗಳನ್ನು ಮರುಬಳಕೆಗೆ ಉಪಯೋಗಿಸುವ ಏಜೆನ್ಸಿ ಗಳನ್ನು ಸೇರಿಸಿಕೊಳ್ಳುವುದು.
  • ಮೂಲದಲ್ಲೇ ತ್ಯಾಜ್ಯವನ್ನು ಬೇರ್ಪಡಿಸುವುದನ್ನು ಜಾರಿಗೆ ತರಬೇಕು.
  • ವಿವಿಧ ಬಗೆಯ ತ್ಯಾಜ್ಯಗಳನ್ನು ಸಾಗಿಸಲು ನಿರ್ದಿಷ್ಟ ಭಾಗಗಳಿದ್ದು, ಮುಚ್ಚಿರುವ,ಯೋಗ್ಯವಾದ ವಾಹನಗಳ ವ್ಯವಸ್ಥೆ ಮಾಡಿಕೊಳ್ಳಬೇಕು.
  • ನವೀನ ಮಾದರಿಯ ಕಸದತೊಟ್ಟಿಗಳನ್ನು ಛತ್ರ, ಹೋಟೆಲುಗಳು ಇತ್ಯಾದಿ ಹೆಚ್ಚು ಕಸ ಉತ್ಪತ್ತಿಯಾಗುವ ಸ್ಥಳಗಳಲ್ಲಿ ಇರಿಸಬೇಕು.
  • ಘನತ್ಯಾಜ್ಯ ಸಂಗ್ರಹಣೆಯು ಹೆಚ್ಚು ಸಲ ಆಗಬೇಕು. ದಿನಕ್ಕೊಂದು ಬಾರಿ ಮಾತ್ರವಲ್ಲದೆ ವಾಹನಗಳು ಬೇರೆ ಬೇರೆ ಸಮಯದಲ್ಲಿ ಕನಿಷ್ಟ ಮೂರು ಸಲವಾದರೂ ಕಸವನ್ನು ಸಂಗ್ರಹಿಸುವಂತೆ ಮಾಡಬೇಕು.
  • ಇಡೀ ತಿಂಗಳು ವಾರ್ಡನ್ನು ಸ್ವಚ್ಛವಾಗಿರುವಂತೆ ನೋಡಿಕೊಳ್ಳುವ ಪೌರಕಾರ್ಮಿಕರಿಗೆ ಬಹುಮಾನವನ್ನು ಕೊಡಬೇಕು.
  • ಎಲ್ಲ ಏರಿಯಾಗಳಲ್ಲೂ ಸುಲಭ ಶೌಚಾಲಯಗಳನ್ನು ಒದಗಿಸಬೇಕು ಮತ್ತವುಗಳ ನಿರ್ವಹಣೆ ಚೆನ್ನಾಗಿ ಆಗಬೇಕು.
  • ಮಹಾಪೂರ ತಡೆಯಲು ರಾಜಕಾಲುವೆಗಳನ್ನು ಶುಚಿಗೊಳಿಸಿ, ಒತ್ತುವರಿಗಳನ್ನು ತೆರವು ಮಾಡಿ ಅವುಗಳನ್ನು ಸುಲಭವಾಗಿ ತಲುಪುವ ಹಾಗೆ ನೋಡಿಕೊಳ್ಳಬೇಕು.
  • ಹಾಗೆಯೇ ಸಾಧ್ಯವಾದರೆ ಕಾಲುವೆಯುದ್ದಕ್ಕೂ ಗುಜರಾತ್ ಮಾದರಿಯಂತೆ ಸೋಲಾರ್ ಪ್ಯಾನೆಲ್ ಗಳನ್ನು ಒದಗಿಸುವುದು.
  • ಯಲ್ಚೇನಹಳ್ಳಿ, ಕನಕಪುರ ರಸ್ತೆ, ಮೈದಾನವನ್ನು ಶುಚಿಗೊಳಿಸುವುದು.


ಸುರಕ್ಷತೆಗಾಗಿ

  • ರಸ್ತೆಗಳಲ್ಲಿ ಎಲ್ಲೆಂದರಲ್ಲಿ ತೂಗಾಡುವ ತಂತಿ ಮತ್ತು ಕೇಬಲ್ ಗಳನ್ನು ನೆಲದೊಳಗೆ ಸೇರಿಸಬೇಕು. ಅವಶ್ಯವಿದ್ದೆಡೆ, ಈ ಪರಿಸ್ಥಿತಿಗೆ ಕಾರಣರಾದ ಕೇಬಲ್ ಆಪರೇಟರ್ ಗಳು, ಇಂಟರ್ನೆಟ್ ಸೇವೆಗಳನ್ನು ಒದಗಿಸುವವರು ಹಾಗೂ ಇನ್ನಿತರರ ಮೇಲೆ ಭಾರಿ ದಂಡ ವಿಧಿಸುವುದು.
  • ಸುರಕ್ಷತೆಗೆ ಆದ್ಯತೆ ಕೊಟ್ಟು ಟ್ರಾನ್ಸ್ ಫಾರ್ಮರ್ ಗಳನ್ನು ಮಾಡಬೇಕು. ನಾಗರಿಕರು ಮತ್ತು ಅಧಿಕಾರಿಗಳು ನಿಯಮಿತವಾಗಿ ಅವುಗಳ ಮೇಲ್ವಿಚಾರಣೆಯನ್ನು ಮಾಡುವುದನ್ನು ಕಡ್ಡಾಯ ಮಾಡಬೇಕು.
  • ರಸ್ತೆಯಲ್ಲಿ ಅಡ್ಡಾಡುವ ದನಗಳನ್ನು ಹಿಡಿದು ಗೋಶಾಲೆಗಳಿಗೆ ಸಾಗಿಸಲು ವ್ಯವಸ್ಥೆ ಮಾಡಿಕೊಳ್ಳಬೇಕು. ಜಾನುವಾರುಗಳನ್ನು ಹಾಗೆ ರಸ್ತೆಯ ಮೇಲೆ ಅಡ್ಡಾಡಲು ಬಿಟ್ಟವರಿಗೆ ಭಾರೀ ದಂಡ ವಿಧಿಸುವುದು
  • ಪ್ರಾಣಿ ದಯಾ ಸಂಘಗಳನ್ನು ಸೇರಿಸಿಕೊಂಡು ಬೀದಿ ನಾಯಿಗಳ ಸಮಸ್ಯೆಯನ್ನು ನಿವಾರಿಸಲು ವ್ಯವಸ್ಥೆ ಮಾಡಿಕೊಳ್ಳಬೇಕು.
  • ರಸ್ತೆಗಳು, ಅಡಿಗಾಲುವೆಗಳು, ರಸ್ತೆ ಉಬ್ಬುಗಳು, ಪಾದಚಾರಿ ಮಾರ್ಗಗಳು, ಮೋರಿ ಹಾಗೂ ಕೊಚ್ಚೆಗುಂಡಿ ಇತ್ಯಾದಿಗಳನ್ನು ತಜ್ಞರೊಂದಿಗೆ ಸರಿಯಾಗಿ ಸಮಾಲೋಚಿಸಿ, ವೈಜ್ಞಾನಿಕ ವಿನ್ಯಾಸದ ಅನುಸಾರವಾಗಿ ರಚಿಸುವುದು.
  • ಸೂಕ್ಷ್ಮ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸುವುದು
  • ಒತ್ತುವರಿಯಾಗಿರುವ ಪಾದಚಾರಿ ಮಾರ್ಗಗಳನ್ನು ತೆರವುಗೊಳಿಸುವುದು
  • ಒತ್ತುವರಿಯಾದಂತಹ ಪಾದಚಾರಿ ಮಾರ್ಗಗಳು ಯಾವ್ಯಾವ ಅಧಿಕಾರಿಗಳ ವ್ಯಾಪ್ತಿಯಲ್ಲಿ ಬರುವವೋ, ಆ ಅಧಿಕಾರಿಗಳ ಮೇಲೆ ದಂಡ ವಿಧಿಸುವುದು
  • ಎಲ್ಲ ಟೆಂಡರ್ ಶ್ಯೂರ್ ರಸ್ತೆ ಕಾಮಗಾರಿಗಳೂ ಪೂರ್ತಿಗೊಳ್ಳುವಂತೆ ನೋಡಿಕೊಳ್ಳುವುದು


ಸೌಂದರ್ಯೀಕರಣ ಮತ್ತು ಹಸಿರು ಹೊದಿಕೆ

  • ಯಾವುದೇ ವಿನಾಯಿತಿ ಇಲ್ಲದೆ ಪೋಸ್ಟರ್ ಗಳನ್ನು ಅಂಟಿಸುವುದು ಮತ್ತು ಜಾಹೀರಾತು ಫಲಕಗಳನ್ನು ಸಂಪೂರ್ಣವಾಗಿ ನಿಷೇಧಿಸುವುದು. ಬದಲಿಗೆ ನಿರ್ದಿಷ್ಟ ಶುಲ್ಕಕ್ಕೆ ಡಿಜಿಟಲ್ ಫಲಕಗಳನ್ನು ಒದಗಿಸುವುದು. ಇದರಿಂದ, ಬಿಬಿಎಂಪಿಗೆ ಬೇರೆ ಕೆಲಸಗಳಿಗೆ ಬಳಸಿಕೊಳ್ಳಲು ಆದಾಯ ಉತ್ಪತ್ತಿಗೆ ಸಹಾಯವಾಗುತ್ತದೆ. ಅಲ್ಲದೆ, ಮಧ್ಯೆಮಧ್ಯೆ ಕರ್ನಾಟಕ ಪ್ರವಾಸೋದ್ಯಮ ಹಾಗೂ ಇನ್ನಿತರ ಸರ್ಕಾರಿ ಯೋಜನೆಗಳ ಮಾಹಿತಿಯನ್ನು ಸಹ ಪ್ರದರ್ಶಿಸಬಹುದು
  • ಮರಗಳಿಗೆ ಸುತ್ತಿ, ಹೊಡೆದು, ಚುಚ್ಚಿರುವ ತಂತಿ, ಕಂಬಿ, ಮೊಳೆ, ಸ್ಟೆಪಲ್ಸ್ ಮತ್ತು ಪೋಸ್ಟರ್ ಗಳನ್ನು ಕಿತ್ತುಹಾಕಿ, ಈ ಕೆಲಸ ಮುಂದುವರೆಸುವವರಿಗೆ ದಂಡ ವಿಧಿಸಬೇಕು
  • ರಸ್ತೆ ವಿಭಜಕಗಳ ಮೇಲೆ ಮರ/ಪೊದೆಗಳನ್ನು ನೆಟ್ಟು, ನೆಲದಡಿಯ ಕೊಳವೆಗಳಿಂದ ಸದಾ ನೀರಿನ ಸೌಲಭ್ಯ ಇರುವಂತೆ ನೋಡಿಕೊಳ್ಳುವುದು ಮತ್ತವುಗಳ ನಿರ್ವಹಣೆ ಚೆನ್ನಾಗಿ ಮಾಡುವುದು. ಮುರಿದು ಹೋಗಿರುವ ಗ್ರಿಲ್ ಗಳನ್ನು ತೆಗೆದು ಅವುಗಳ ರಿಪೇರಿ ಹಾಗೂ ನಿರ್ವಹಣೆ ಆಗಾಗ್ಗೆ ನಡೆಯುವಂತೆ ನೋಡಿಕೊಳ್ಳಬೇಕು
  • ಖಾಲಿ ಇರುವ ಜಾಹೀರಾತು ಫಲಕಗಳ ಚೌಕಟ್ಟು, ಫಲಕಗಳು ಇತ್ಯಾದಿಗಳನ್ನು ತೆಗೆಯುವುದು
  • ಲಾಲ್ ಬಾಗಿನ ಕಾಂಪೌಂಡ್ ಗೋಡೆಯನ್ನು ತೆಗೆದು ಹಾಕಿ ಎಂಎಸ್ ಗ್ರಿಲ್ ಗಳನ್ನು ಅಳವಡಿಸಿ, ಜನರಿಗೆ ಚೆನ್ನಾಗಿ ಕಾಣುವಂತೆ ಮಾಡಿ ಉತ್ತೇಜನ ನೀಡುವುದು


ಕೆರೆಗಳ ಪುನರುಜ್ಜೀವನ

  • ಕೆರೆಗಳು ತ್ಯಾಜ್ಯಮುಕ್ತವಾಗಿರುವಂತೆ ನೋಡಿಕೊಳ್ಳಬೇಕು ಹಾಗೂ ಕಳೆಗಳು ಮತ್ತು ಕೈಗಾರಿಕಾ ತ್ಯಾಜ್ಯವನ್ನು ತೆಗೆದು ಹಾಕಿ ಕೆರೆಗಳು ಸಾಯದಂತೆ ಸಂರಕ್ಷಿಸಬೇಕು
  • ಕೆರೆಗಳ ಸುತ್ತ ಗ್ರಿಲ್ ಅಳವಡಿಸಿ ಅವುಗಳನ್ನು ನೋಡಿಕೊಳ್ಳಬೇಕು
  • ಕೆರೆಗಳನ್ನು ಸ್ವಚ್ಛಗೊಳಿಸಿ, ಸುಂದರವನ್ನಾಗಿ ಮಾಡಿದ ಮೇಲೆ ಅವುಗಳ ನಿರ್ವಹಣಾ ವೆಚ್ಚಕ್ಕೆ ಆದಾಯ ಗಳಿಸಲು ಸಾಮಾಜಿಕ ಮತ್ತು ಮನರಂಜನಾ ಚಟುವಟಿಕೆಗಳಾದ ಬೋಟಿಂಗ್, ಪಾದಚಾರಿ ಪಥ, ಪಾರ್ಕು ಮತ್ತು ಉಪಾಹಾರ ಗೃಹಗಳನ್ನು ತೆರೆಯುವುದು

ಈ ಸಂದರ್ಭದಲ್ಲಿ ಆಯುಕ್ತರ ಸಾಮಾಜಿಕ ಜಾಲತಾಣ ಖಾತೆಗಳ ನಿರ್ವಾಹಕ ರವಿ ನಾರಾಯಣ್, ಆಯುಕ್ತರ ಮಾಧ್ಯಮ ಸಂಯೋಜಕ ಶಂಕರ್ ಉಪಸ್ಥಿತರಿದ್ದರು.ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor AnirudhBangaloreBBMPBENGALURUgreen envelopeKannada News WebsiteLatest News KannadaSafetySolid Waste ManagementTushar GirinathZonal Marshallಕಸದತೊಟ್ಟಿಘನತ್ಯಾಜ್ಯ ನಿರ್ವಹಣೆಝೋನಲ್ ಮಾರ್ಷಲ್ತುಷಾರ್ ಗಿರಿನಾಥ್ನಟ ಅನಿರುದ್ನಟ ಅನಿರುದ್ ಜತ್ಕರ್ಬಿಬಿಎಂಪಿಬೆಂಗಳೂರುಸುರಕ್ಷತೆಹಸಿರು ಹೊದಿಕೆ
Share220Tweet123Send
Previous Post

ಗಮನಿಸಿ! ಜೂ.8ರಂದು ಶಿವಮೊಗ್ಗದ ವಿನೋಬನಗರ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

Next Post

ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆ ಹಿನ್ನೆಲೆ ಪೊಲೀಸ್ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಗೃಹ ಸಚಿವರ ವಾರ್ನಿಂಗ್

ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆ ಹಿನ್ನೆಲೆ ಪೊಲೀಸ್ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಶಿವಮೊಗ್ಗ-ಚೆನ್ನೈ, ಬೆಂಗಳೂರು-ಕನ್ಯಾಕುಮಾರಿ ಸೇರಿ 12 ಎಕ್ಸ್’ಪ್ರೆಸ್ ರೈಲು ಮಹತ್ವದ ಮಾಹಿತಿ

May 11, 2026
ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

May 11, 2026
`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

May 11, 2026
ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

May 11, 2026
ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

May 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL