No Result
View All Result
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8
English Articles

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

by ಕಲ್ಪ ನ್ಯೂಸ್
June 5, 2026
0

Kalpa Media House  |  Special Article  | On June 8, Indian fans will be amongst the first in the world...

Read moreDetails
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬೆಂಗಳೂರಿನ ಮಿಂಟೋ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಹನುಮನ ಜಯಂತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 5, 2021
in Small Bytes, ಬೆಂಗಳೂರು ನಗರ
0
ಬೆಂಗಳೂರಿನ ಮಿಂಟೋ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಹನುಮನ ಜಯಂತಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಬೆಂಗಳೂರು ನಗರದ ಚಾಮರಾಜಪೇಟೆಯ ಆಲೂರು ವೆಂಕಟರಾವ್ ರಸ್ತೆಯಲ್ಲಿರುವ ಮಿಂಟೋ ಕಣ್ಣಿನ ಆಸ್ಪತ್ರೆ ಎದುರಿಗೆ ಇರುವ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಹನುಮನ ಜಯಂತಿ ಆಚರಿಸಲಾಯಿತು.

ಕೋವಿಡ್19 ನಿಯಾಮಾನುಸಾರ ದೇವಾಲಯಕ್ಕೆ ಹನುಮನ ದರ್ಶನಕ್ಕೆ ಬರುತ್ತಿದ್ದ ಭಕ್ತರು ಮಾಸ್ಕ್‌ ಧರಿಸಿ ಹನುಮ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡಿದ್ದರು.

ಇದು ಮುಜರಾಯಿ ಇಲಾಖೆಗೆ ಸೇರಿದ ದೇವಾಲಯವಾಗಿದ್ದು ಇಲಾಖೆಯ ಆದೇಶದಂತೆ ಈ ಬಾರಿ ಸರಳವಾಗಿ ಆಚರಣೆ ಮಾಡಲಾಗಿದೆ ಎಂದು ದೇವಾಲಯದ ಅರ್ಚಕರಾದ ಹರಿದಾಸ ಉಪಾಧ್ಯ ಹೇಳಿದರು.ದೇವಾಲಯದ ಆವರಣದಲ್ಲಿ ಹನುಮನ ನಾಮಸ್ಮರಣೆಯೊಂದಿಗೆ ಬಂದ ಭಕ್ತರು ಹನುಮನ ದರ್ಶನ ಪಡೆದು ಪಾವನರಾದರು.

ಉತ್ಸವ ಮೂರ್ತಿಗೆ ವಿಶೇಷ ಪೂಜೆ
ಶ್ರೀರಾಮ-ಸೀತಾ-ಲಕ್ಷ್ಮಣ ಸಹಿತ ಇರುವ ಶ್ರೀಮುಖ್ಯಪ್ರಾಣ ದೇವರಿಗೆ ಹಾಗೂ ಮೂಲ ವಿಗ್ರಹಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.

ದೇವಾಲಯದ ಇತಿಹಾಸ
ಚಾಮರಾಜಪೇಟೆಯ ಆಲೂರು ವೆಂಕಟರಾವ್ ರಸ್ತೆಯಲ್ಲಿರುವ ಈ ದೇವಾಲಯಕ್ಕೆ ಸುಮಾರು 400 ವರ್ಷಗಳಷ್ಟು ಇತಿಹಾಸವಿದೆ. ಸನ್ಯಾಸಿಯಾಗಿದ್ದುಕೊಂಡು ವಿಜಯನಗರ ಸಾಮ್ರಾಜ್ಯವನ್ನೂ ಆಳಿದ ಯತಿ ಶ್ರೀ ವ್ಯಾಸರಾಜರು ಲೋಕ ಕಲ್ಯಾಣಾರ್ಥ ಭಾರತದಾದ್ಯಂತ 734 ಸ್ಥಳಗಳಲ್ಲಿ ಆಂಜನೇಯ ಮೂರ್ತಿ ಪ್ರತಿಷ್ಠಾಪಿಸಿದ್ದರು.


ಮಿಂಟೋ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ವಿಗ್ರಹದ ಬಗ್ಗೆ
ಬಲ ಹಸ್ತ ಅಭಯ, ಎಡ ಹಸ್ತದಲ್ಲಿ ಗಧೆ, ಬಾಲದಲ್ಲಿ ಗಂಟೆ, ಹೃದಯ ಬಾಹುಗಳಲ್ಲಿ ದ್ವಾದಶ ನಾಮ ಮತ್ತು ಮುದ್ರೆ ಈ ಸ್ವಾಮಿಯ ವಿಶೇಷವಾಗಿದೆ ಎನ್ನುತ್ತಾರೆ ಮಿಂಟೋ ಶ್ರೀಆಂಜನೇಯ ಸ್ವಾಮಿ ದೇವಳದ ಪ್ರಧಾನ ಅರ್ಚಕರಾದ ನಾರಾಯಣಮೂರ್ತಿ.

ಶ್ರೀ ಮುಖ್ಯಪ್ರಾಣ ದೇವರಿಗೆ-ಶತಮಾನೋತ್ಸವದ ಸಂಭ್ರಮ
ಮಿಂಟೋ ಆಂಜನೇಯ 1922ರಿಂದ ಪೂಜೆ ಮಾಡಿಸಿಕೊಳ್ಳುತ್ತಿದ್ದು, ಇನ್ನು ಎರಡು ವರ್ಷದಲ್ಲಿ ಆಂಜನೇಯನಿಗೆ ಶತಮಾನೋತ್ಸವದ ಸಂಭ್ರಮ!
ಮಿಂಟೋ ಕಣ್ಣಿನ ಆಸ್ಪತ್ರೆ ಎದುರಿಗೆ ಇರುವುದರಿಂದ ದೇವಾಲಯ ಈ ಹೆಸರು ಬಂದಿದೆ. ಬೆಂಗಳೂರು ನಗರದಲ್ಲಿ-ಪಂಚಮುಖಿ, ವೀರಪ್ರತಾಪ, ರಾಮಭಕ್ತ ಇತ್ಯಾದಿ ವಿಶೇಷಣದೊಂದಿಗಿನ ಹನುಮ ದೇವಾಲಯ ಹಲವೆಡೆ ಇದೆ. ಆದರೆ ಆಂಗ್ಲ ಹೆಸರಿನ ವಿಶೇಷಣ ಇರುವುದು ಮಿಂಟೋ ಶ್ರೀಪ್ರಸನ್ನಾಂಜನೇಯ ಸ್ವಾಮಿಗೆ ಮಾತ್ರ.

ಶತಮಾನದ ಹಿಂದೆ ಸಿಕ್ಕ ವಿಗ್ರಹ
ವಿಕ್ಟೋರಿಯಾ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ನಿರ್ಮಾಣಗಾರ ಸೋಮಪ್ಪ ಎಂಬುವರಿಗೆ ಮಣ್ಣಿನಡಿ ಆಂಜನೇಯ ಸ್ವಾಮಿಯ ವಿಗ್ರಹ ದೊರೆತಿತ್ತು. ಅದನ್ನು ಮಿಂಟೋ ಆಸ್ಪತ್ರೆ ಎದುರು ಚಿಕ್ಕ ಗುಡಿ ನಿರ್ಮಿಸಿ ಪ್ರತಿಷ್ಠಾಪಿಸಿದ್ದರು. ಆದರೆ ಅದರ ನಿರ್ವಹಣೆ ಇಲ್ಲದೆ ದೇವಾಲಯ ಶಿಥಿಲಗೊಂಡಿತ್ತು.

ಸ್ವಪ್ನದಲ್ಲಿ ಬಂದ ಗುರುರಾಯರು
ಮಂತ್ರಾಲಯದಲ್ಲಿ ಸೇವೆ ಮಾಡುತ್ತಿದ್ದ ಉಡುಪಿ ವಿಠಲದಾಸಾಚಾರ್ಯರಿಗೆ ಗುರುರಾಯರು ಕನಸಿನಲ್ಲಿ ಬಂದು ಕೋಟೆ ಸಮೀಪ ಮಣ್ಣಿನಲ್ಲಿ ದೊರೆತ ಹನುಮನಿಗೆ ಪೂಜೆ ಸಲ್ಲಿಸು ಎಂದು ಸೂಚಿಸಿದರಂತೆ. ಅದರಂತೆ ನಗರಕ್ಕೆ ಆಗಮಿಸಿದ ಅವರು, 1922ರಿಂದ ಆಂಜನೇಯ ಸೇವೆಯಲ್ಲಿ ನಿರತರಾದರು ಎಂಬ ಐತಿಹ್ಯವಿದೆ, ಅವರ ವಂಶದ 3ನೆಯ ತಲೆಮಾರಿನ ನಾರಾಯಣಮೂರ್ತಿ ಈಗ ದೇಗುಲದ ಪ್ರಧಾನ ಅರ್ಚಕರಾಗಿದ್ದಾರೆ.

ಜೀರ್ಣೋದ್ಧಾರ-ಇತಿಹಾಸ
ಶಿಥಿಲಾವಸ್ಥೆಯಲ್ಲಿದ್ದ ಮಿಂಟೋ ಶ್ರೀಆಂಜನೇಯ ಸ್ವಾಮಿ ದೇವಾಲಯವನ್ನು ದಿವಾನ್ ಮಿರ್ಜಾ ಇಸ್ಮಾಯಿಲ್ ಅವರು ಜೀರ್ಣೋದ್ಧಾರಗೊಳಿಸಿ ಸುಂದರ ಆಲಯ ನಿರ್ಮಿಸಿದರು. ನಂತರ ತರಗುಪೇಟೆ ವರ್ತಕರು ಗೋಪುರ ಕಟ್ಟಿಸಿದರು. ದಿವಾನ್ ಮಾಧವರಾಯರು ದೇವಾಲಯದ ಅಭಿವೃದ್ಧಿಗೆ ಮುಂದಾದರು ಎಂದು ಇತಿಹಾಸ ಹೇಳುತ್ತಿದೆ.

ಗಣ್ಯರ ಭೇಟಿ
ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಸೇರಿ ಹಲವು ಗಣ್ಯರು ದೇವಾಲಯಕ್ಕೆ ಭೇಟಿ ಕೊಟ್ಟಿದ್ದರು. ಪಂಡಿತ್ ಜವಹರಲಾಲ್ನೆಹರು, ಡಾ. ಬಾಬು ರಾಜೇಂದ್ರ ಪ್ರಸಾದ್, ಬ್ರಿಟಿಷ್ ವೈಸ್ರಾಯ್ ಲಾರ್ಡ್ ವೆಲ್ಲಿಂಗ್ಟನ್, ಲಾರ್ಡ್ ಮೌಂಟ್ ಬ್ಯಾಟನ್ ಸೇರಿದಂತೆ ಹಲವು ಗಣ್ಯರು ಈ ಗುಡಿಗೆ ಭೇಟಿ ನೀಡಿದ್ದಾರೆ ಎಂಬುದು ಮತ್ತೊಂದು ವಿಶೇಷ.

ಉತ್ಸವಗಳು
ಹನುಮ ಜಯಂತಿ, ರಾಮ ನವಮಿ ಉತ್ಸವ, ಕಾರ್ತಿಕ ಮಾಸದಲ್ಲಿ ಪೂರ್ಣ ದೀಪೋತ್ಸವ, ಚಿತ್ತ ಪೂರ್ಣಿಮಾ ಪೂಜೆ ಮತ್ತು ಧನುರ್ಮಾಸ ಪೂಜೆ ಇಲ್ಲಿ ವಿಶೇಷವಾಗಿ ನಡೆಯುತ್ತದೆ.ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದರೂ ತರಗುಪೇಟೆ ವರ್ತಕರ ಮಂಡಳಿ ವತಿಯಿಂದ ವಿಶೇಷ ಉತ್ಸವಗಳ ಸಂದರ್ಭದಲ್ಲಿ ವಿವಿಧ ಸೇವೆ ಕೈಗೊಳ್ಳಲಾಗುತ್ತಿದೆ. ಆಂಜನೇಯ ಮೂಲ ವಿಗ್ರಹದೊಂದಿಗೆ ಪಂಚಲೋಹದ ಶ್ರೀರಾಮ, ಸೀತೆ, ಲಕ್ಷ್ಮಣರ ಮೂರ್ತಿಗಳೂ ಇವೆ.

ಮಾಧ್ವ ಸಂಪ್ರದಾಯದ ಪೂಜೆ
ದೇವಾಲಯಲ್ಲಿ ಇಂದಿಗೂ ಮಾಧ್ವ ಸಂಪ್ರದಾಯದ ಪ್ರಕಾರ ಪೂಜೆ ಮಾಡಲಾಗುತ್ತದೆ. ಪ್ರಾಣದೇವರಿಗೆ ಹರಿವಾಯುಸ್ತುತಿ ಪಾರಾಯಣ ಹಾಗೂ ಜೇನುತುಪ್ಪದ ಅಭಿಷೇಕ, ಪಂಚಾಮೃತ ಅಭಿಷೇಕ ಹಾಗೂ ಅನ್ನ ನೈವೇದ್ಯ ಸೇವೆ ಮೂಲಕ ಪೂಜೆ ಸಲ್ಲಿಸಲಾಗುತ್ತದೆ.

ಇನ್ನು, 98 ವರ್ಷಗಳಿಂದ ನಮ್ಮ ವಂಶಸ್ಥರೇ ಪ್ರಸನ್ನಾಂಜನೇಯನಿಗೆ ಪೂಜೆ ಮಾಡುತ್ತಿದ್ದಾರೆ. ಬೇಡಿದ್ದನ್ನು ನೀಡುವ ದೇವರು ಎಂದು ಈ ಸ್ವಾಮಿ ಹೆಸರಾಗಿದ್ದಾರೆ ಎನ್ನುತ್ತಾರೆ ಮಿಂಟೋ ಶ್ರೀ ಆಂಜನೇಯ ಸ್ವಾಮಿ ದೇವಳದ ಪ್ರಧಾನ ಅರ್ಚಕ ನಾರಾಯಣಮೂರ್ತಿ ದೇವಾಲಯದ ಸಮೀಪದಲ್ಲಿರುವ ಮಿಂಟೋ ಆಸ್ಪತ್ರೆಗೆ ಆಗಮಿಸುವ ರೋಗಿಗಳು, ಅವರ ಕುಟುಂಬಸ್ಥರು, ಕಾಲೇಜು ವಿದ್ಯಾರ್ಥಿಗಳು ಹಾಗೂ ನಗರದ ಅನೇಕ ಭಾಗಗಳಿಂದ ಭಕ್ತರು ಇಲ್ಲಿಗೆ ಬರುತ್ತಾರೆ.

ನಾಲ್ಕನೆಯ ತಲೆಮಾರು ಪ್ರವೇಶ
ಮೂರು ತಲೆಮಾರುಗಳಿಂದ ಪೂಜೆ ಸಲಿಸುತ್ತಿದ್ದು ನಾಲ್ಕನೆಯ ತಲೆಮಾರಿನ ಅಮೋಘ್ ಉಪಾಧ್ಯಾಯ ಶ್ರೀಸ್ವಾಮಿಗೆ ಹನುಮ ಜಯಂತಿ ಇಂದು ಸ್ವಾಮಿಗೆ ಮಂಗಳಾರತಿ ಮಾಡಿ ಶ್ರೀಸ್ವಾಮಿಯ ಸೇವೆಯಲ್ಲಿ ಇಂದಿನಿಂದ ಆರಂಭ ಮಾಡಿದ್ದಾರೆ.

ನಾರಾಯಣ ಮೂರ್ತಿ ಉಪಾಧ್ಯಾಯ ಅವರ ತಮ್ಮನಾದ ಹರಿದಾಸ ಉಪಾಧ್ಯ ಅವರ ಮೊಮ್ಮೊಗ ಎರಡನೇ ತರಗತಿಯಲ್ಲಿ ಓದುತ್ತಿರುವ ಅಮೋಘ್ ಉಪಾಧ್ಯಾಯ (ಅಮೋಘ್ ಉಪಾಧ್ಯಾಯ ಅವರಿಗೆ ವೇದಾಭ್ಯಾಸ ಮಾಡಿಸಿ ಹನುಮನ ಸೇವೆಯನ್ನು ವಂಶ ಪರಂಪರ್ಯಾವಾಗಿ ಮುಂದುವರೆಸುವ ಬಗ್ಗೆ ಪ್ರಸುತ್ತ ದೇವಾಲಯದ ಪ್ರಧಾನ ಪುರೋಹಿತರು ನಾರಾಯಣ ಮೂರ್ತಿ ಉಪಾಧ್ಯಾಯ ಹೇಳುತ್ತಾರೆ.

ಮಿಂಟೋ ಹನುಮನ ಪರಮಭಕ್ತ ಡಾ.ಕೆ.ವಿ. ರಾಮಚಂದ್ರ
ನಮ್ಮ ಕುಟುಂಬದಿಂದ ನಾಲ್ಕು ತಲೆಮಾರುಗಳಿಂದ ಪೂಜೆ ಸಲ್ಲಿಸಿಕೊಂಡು ಬರುತ್ತಿದ್ದು, ತಾತ ಶಾನಭೋಗ ರಾಮಚಂದ್ರಪ್ಪ, ತಂದೆ ಶಾನ ಭೋಗ ಕೆ.ಆರ್. ವೆಂಕಟೇಶ್ ಮೂರ್ತಿ ಹಾಗೂ ಡಾ.ಕೆ.ವಿ. ರಾಮಚಂದ್ರ ಮತ್ತು ಅವರ ಮಗ ಶಶಾಂಕ್ ಭಗವಂತನ ಸನ್ನಿಧಿಯಲ್ಲಿ ಪೂಜೆ ಸಲ್ಲಿಸುತ್ತ ಬಂದಿದ್ದೇವೆ ಎಂದು ಇಂದು ಹನುಮ ಜಯಂತಿ ಆಚರಣೆ ಮಾಡಿ ಹನುಮನ ದರ್ಶನ ಪಡೆಯಲು ಮಿಂಟೋ ಆಂಜನೇಯ ಸ್ವಾಮಿ ದೇಗುಲಕ್ಕೆ ಬಂದಿದ್ದ ಕನ್ನಡ ತಿಂಡಿಯ ಡಾ.ಕೆ.ವಿ. ರಾಮಚಂದ್ರ ಹೇಳಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BENGALURUChamarajapetHanuma JayanthiKannada News WebsiteLatest News KannadaMantralayamMinto Anjaneya Swamy Templeಚಾಮರಾಜಪೇಟೆಬೆಂಗಳೂರುಮಂತ್ರಾಲಯಮಿಂಟೋ ಆಂಜನೇಯ ಸ್ವಾಮಿಮುಜರಾಯಿ ಇಲಾಖೆಹನುಮನ ಜಯಂತಿ
Share197Tweet123Send
Previous Post

ಸಂಗೀತ ರಸಧಾರೆಯ ಒಡತಿ ಉಡುಪಿಯ ಶರಧಿ ಪಾಟೀಲ್

Next Post

ಜ.7ರಂದು ಡಾ.ಬನ್ನಂಜೆ ಗೋವಿಂದಚಾರ್ಯರಿಗೊಂದು ಭಾವ ನಮನ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಿರಿಯ ವಿದ್ವಾಂಸ ಡಾ. ಬನ್ನಂಜೆ ಗೋವಿಂದಾಚಾರ್ಯ ವಿಧಿವಶ

ಜ.7ರಂದು ಡಾ.ಬನ್ನಂಜೆ ಗೋವಿಂದಚಾರ್ಯರಿಗೊಂದು ಭಾವ ನಮನ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

June 5, 2026
SWR to run special trains for Good Friday, Easter rush

ಮೈಸೂರು – ಬೆಂಗಳೂರು ವಿಶೇಷ ರೈಲು ಸೇವೆ ಕಾಯಂ

June 5, 2026
ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

June 5, 2026
ಭಾರತ-ಅಫ್ಘಾನಿಸ್ತಾನ ಟೆಸ್ಟ್ | ರಿಷಭ್ ಪಂತ್‌ಗೆ 50ನೇ ಟೆಸ್ಟ್ ಮೈಲಿಗಲ್ಲು | ಎಂಎಸ್ ಧೋನಿ ಎಲೈಟ್ ಪಟ್ಟಿಗೆ

ಭಾರತ-ಅಫ್ಘಾನಿಸ್ತಾನ ಟೆಸ್ಟ್ | ರಿಷಭ್ ಪಂತ್‌ಗೆ 50ನೇ ಟೆಸ್ಟ್ ಮೈಲಿಗಲ್ಲು | ಎಂಎಸ್ ಧೋನಿ ಎಲೈಟ್ ಪಟ್ಟಿಗೆ

June 5, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL