ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಷ್ಟ ಪ್ರಶಸ್ತಿ ಪುರಸ್ಕೃತ ಶಡ್ ದರ್ಶನ ವಿದ್ವಾಂಸ, ನಗರದ ಪೂರ್ಣಪ್ರಜ್ಞ ವಿದ್ಯಾಪೀಠದ ನಿವೃತ್ತ ಪ್ರಾಂಶುಪಾಲ ವಿದ್ವಾನ್ ಹಯವದನ ಪುರಾಣಿಕ (80) ಸೋಮವಾರ ನಿಧನರಾದರು.
ಅವರಿಗೆ ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ.

ಕನ್ನಡ, ಇಂಗ್ಲಿಷ್, ಸಂಸ್ಕೃತ ಭಾಷಾ ಪ್ರೌಢಿಮೆ ಹೊಂದಿದ್ದ ಅವರು ಶ್ರೀಮನ್ ಮಧ್ವಾಚಾರ್ಯರ ಸರ್ವಮೂಲ ಗ್ರಂಥಗಳನ್ನು ಮೊದಲ ಬಾರಿಗೆ ಕನ್ನಡಕ್ಕೆ ಅನುವಾದಿಸಿದ ಕೀರ್ತಿಗೆ ಭಾಜನರಾಗಿದ್ದರು.
ಜ್ವರ ಕಾಣಿಸಿಕೊಂಡ ಕಾರಣ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲೇ ನಿಧನರಾದರು ಎಂದು ವಿದ್ಯಾಪೀಠದ ವ್ಯವಸ್ಥಾಪಕ ಕೇಶವ ಆಚಾರ್ಯ ತಿಳಿಸಿದ್ದಾರೆ.









Discussion about this post