No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನಾಳೆಯಿಂದ ಮೂರು ದಿನ ರಾಜ್ಯದಾದ್ಯಂತ ಸಿಇಟಿ ಪರೀಕ್ಷೋತ್ಸವ: ಗಡಿ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ

ಕೋವಿಡ್ ಪಾಸಿಟಿವ್ ಬಂದಿರುವ 12 ವಿದ್ಯಾರ್ಥಿಗಳಿಗೆ ಅವಕಾಶ || ರಾಜ್ಯದಲ್ಲಿ 530, ಬೆಂಗಳೂರಿನಲ್ಲಿ 86 ಪರೀಕ್ಷಾ ಕೇಂದ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 27, 2021
in ರಾಷ್ಟ್ರೀಯ
0
ಪದವಿ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ಡಿಸಿಎಂ: ಪ್ರವೇಶಕ್ಕೆ ಅಂತಿಮ ಅವಕಾಶ

File photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಾಳೆಯಿಂದ, ಅಂದರೆ; ಅಗಸ್ಟ್ 28- 29 ಮತ್ತು 30ರಂದು ರಾಜ್ಯದಲ್ಲೆಡೆ ನಡೆಯಲಿದ್ದು, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಶುಕ್ರವಾರ ಎಲ್ಲ ಸಿದ್ಧತೆಗಳನ್ನು ಖುದ್ದು ಪರಿಶೀಲಿಸಿದರು.

ಈ ಸಂಬಂಧ ಬೆಂಗಳೂರಿನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಉನ್ನತ ಅಧಿಕಾರಿಗಳ ಸಭೆ ನಡೆಸಿದ ನಂತರ ಅವರು, ಮಲ್ಲೇಶ್ವರದ 18ನೇ ಕ್ರಾಸ್ ನಲ್ಲಿರುವ ಸರಕಾರಿ ಪಿಯು ಕಾಲೇಜಿಗೆ ತೆರಳಿ ಪರೀಕ್ಷಾ ಸಿದ್ಧತೆಗಳನ್ನು ನೇರವಾಗಿ ವೀಕ್ಷಿಸಿದರು.

ಕಳೆದ ವರ್ಷದಂತೆ ಈ ವರ್ಷವೂ ಕೋವಿಡ್ ಸವಾಲಿನ ನಡುವೆಯೇ ಸಿಇಟಿ ನಡೆಯುತ್ತಿದ್ದು, ಸರಕಾರದ ಮಾರ್ಗಸೂಚಿಯಂತೆ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕೆಗಳನ್ನು ಸಚಿವರು ಪರಿಶೀಲನೆ ಮಾಡಿದರು.
ಬಳಿಕ ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಡಾ.ಅಶ್ವತ್ಥನಾರಾಯಣ ಅವರು, ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ನಡೆಯುತ್ತಿದ್ದು, ಕೋವಿಡ್ ಒತ್ತಡವನ್ನು ಮನಸ್ಸಿನಿಂದ ತೆಗೆದು ಹಾಕಿ ವಿದ್ಯಾರ್ಥಿಗಳು ಧೈರ್ಯ, ಸಂತೋಷದಿಂದ ಬರೆಯಬೇಕು. ಇದನ್ನು ನಾನು ʼಸಿಇಟಿ ಪರೀಕ್ಷೋತ್ಸವʼ ಎಂದು ಕರೆಯಲು ಬಯಸುತ್ತೇನೆ ಎಂದರು.

ಮಹತ್ವದ ಅಂಶವೆಂದರೆ, ಕೋವಿಡ್ ಕಾರಣದಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದ್ದು. ಸಿಇಟಿ ಅಂಕದ ಆಧಾರದ ಮೇಲೆಯೇ Rank ನಿರ್ಧಾರ ಮಾಡಲಾಗುವುದು ಎಂದು ಸಚಿವರು ಪ್ರಕಟಿಸಿದರು.

ಸಚಿವರು ಹೇಳಿದ್ದಿಷ್ಟು;
ರಾಜ್ಯದಲ್ಲಿ ಒಟ್ಟು 2,01,816 ಅಭ್ಯರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದು, ಈ ಪೈಕಿ ಕೋವಿಡ್ ಪಾಸಿಟಿವ್ ಇರುವ 12 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
12 ಸೋಂಕಿತ ವಿದ್ಯಾರ್ಥಿಗಳ ಪೈಕಿ 10 ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಹಾಗೂ ಕೋಲಾರ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ತಲಾ ಒಬ್ಬ ವಿದ್ಯಾರ್ಥಿ ಸಿಇಟಿ ಬರೆಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ರಾಜ್ಯಾದ್ಯಂತ 530 ಪರೀಕ್ಷಾ ಕೇಂದ್ರಗಳ ಪೈಕಿ 86 ಕೇಂದ್ರಗಳು ಬೆಂಗಳೂರಿನಲ್ಲೇ ಇವೆ. ಉಳಿದ ಜಿಲ್ಲೆಗಳಲ್ಲಿ ಒಟ್ಟು 444 ಕೇಂದ್ರಗಳಿವೆ. ಹೊರನಾಡು & ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಅಗಸ್ಟ್ 30ರಂದು ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುವುದು. ಈ ಕೇಂದ್ರಗಳಲ್ಲಿ 1682 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಪ್ರತಿ ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಯಲ್ಲಿ 24 ಅಭ್ಯರ್ಥಿಗಳು ಪರೀಕ್ಷೆ ಬರೆಯುವಂತೆ ಹಾಗೂ ಪ್ರತಿ ಒಂದು ಬೆಂಚಿನಲ್ಲಿ ಇಬ್ಬರು ಅಭ್ಯರ್ಥಿಗಳು ಕುಳಿತುಕೊಳ್ಳುವಂತೆ ಹಾಗೂ ಎರಡು ಬೆಂಚ್ ನಡುವೆ ಮೂರು ಅಡಿ ಅಂತರ ಕಾಪಾಡಿಕೊಳ್ಳಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕ್ರಮ ವಹಿಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್ ಸ್ಕ್ಯಾನರ್, ಹ್ಯಾಂಡ್ ಸ್ಯಾನಿಟೈಸರ್ ಅಳವಡಿಸಲಾಗಿದೆ. ಬೆಂಗಳೂರಿನಲ್ಲಿರುವ ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಬಿಬಿಎಂಪಿ ವತಿಯಿಂದ ಸ್ಯಾನಿಟೈಸ್ ಮಾಡಲು ಕ್ರಮ ಕೈಗೊಳ್ಳಲಾಗಿದೆ ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ 100 ಮಾಸ್ಕ್‌ʼಗಳನ್ನು ಸ್ವಯಂ ಸೇವಾ ಸಂಸ್ಥೆಯಿಂದ ಪರೀಕ್ಷೆ ನಡೆಯುವ ಎರಡು ದಿನಗಳಂದು ಪರೀಕ್ಷಾ ಕೇಂದ್ರಕ್ಕೆ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.
ವಾರಾಂತ್ಯದ ಕರ್ಫ್ಯೂ ಇರುವ ಗಡಿ ಜಿಲ್ಲೆಗಳಲ್ಲಿ ಅಭ್ಯರ್ಥಿಗಳು ಮತ್ತು ಪೋಷಕರು ಸಿಇಟಿ ಪರೀಕ್ಷಾ ಕೇಂದ್ರಕ್ಕೆ ತಲುಪಲು ಅನುಕೂಲವಾಗಲು ಸಿಇಟಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪರಿಗಣಿಸಿ ಅವಕಾಶ ನೀಡಲು ಎಲ್ಲ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ಮುಖ್ಯವಾಗಿ ಕೇರಳ ಮತ್ತು ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ಬಹಳಷ್ಟು ಎಚ್ಚರಿಕೆ ವಹಿಸಲಾಗಿದೆ.

ಉಳಿದಂತೆ ಪರೀಕ್ಷೆಗೆ ಅಗತ್ಯವಾದ ಎಲ್ಲ ವ್ಯವಸ್ಥೆಗಳನ್ನೂ ಸಮರ್ಪಕವಾಗಿ ಮಾಡಲಾಗಿದೆ. ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಮಾಡಿದೆ.

ಪರೀಕ್ಷೆ ವೇಳಾಪಟ್ಟಿ ಹೀಗಿದೆ:
28ರಂದು ಶನಿವಾರ ಬೆಳಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತದ ಪರೀಕ್ಷೆ ಇರುತ್ತದೆ.
29ರಂದು ಭಾನುವಾರ ಬೆಳಗ್ಗೆ 10.30ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.
30ರಂದು ಭಾನುವಾರ ಬೆಳಗ್ಗೆ 11.30ರಿಂದ 12.50 ರವರೆಗೆ ಹೊರನಾಡು, ಗಡಿನಾಡ ಕನ್ನಡಿಗ ಹಾಗೂ ಕನ್ನಡಿಗ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಯುತ್ತದೆ.

ಅಭ್ಯರ್ಥಿಗಳು http://kea.kar.nic.in ನಲ್ಲಿ ತಮ್ಮ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಬೇಕು ಹಾಗೂ ಅದರಲ್ಲಿ ಮುದ್ರಿತವಾಗಿರುವ ಸೂಚನೆಗಳನ್ನು ಪಾಲಿಸಿ, ಅದರಲ್ಲಿ ನಮೂದಿಸಲಾದ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕು.

ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳು/ಉತ್ತರಗಳು ಇಂಗ್ಲೀಷ್ ಮತ್ತು ಕನ್ನಡ ಭಾಷೆಯಲ್ಲಿ ಮುದ್ರಿತವಾಗಿರುತ್ತವೆ. ವಿದ್ಯಾರ್ಥಿಗಳು ಸೂಕ್ಷ್ಮವಾಗಿ ಗಮನಿಸಿಕೊಳ್ಳಬೇಕು.
ಸೋಂಕಿತರಿಗೆ ಪ್ರತ್ಯೇಕ ವ್ಯವಸ್ಥೆ
ಕಳೆದ ವರ್ಷದಂತೆ ಈ ವರ್ಷವೂ ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿದ್ದರೆ, ಅಂಥವರಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಎಸ್ಒಪಿ ಪ್ರಕಾರ ಅವರಿಗೆ ಪ್ರತಿ ಜಿಲ್ಲೆಯಲ್ಲೂ ಇವರಿಂದ ಪರೀಕ್ಷೆ ಬರೆಸಲಾಗುವುದು. ಯಾರೇ ವಿದ್ಯಾರ್ಥಿಗಳು ಸೋಂಕಿತರಿದ್ದರೆ ಧೈರ್ಯವಾಗಿ ಪರೀಕ್ಷೆ ಬರೆಯಲು ಅವಕಾಶ ಇದೆ. ಅವರಿಗೆ ಅಗತ್ಯವಾದ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿಯೂ ಅರೆವೈದ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಭದ್ರತೆಗೆ ಹೆಚ್ಚು ಒತ್ತು
ಒಟ್ಟು 530 ವೀಕ್ಷಕರು, 1060 ವಿಶೇಷ ಜಾಗೃತ ದಳದ ಸದಸ್ಯರು, 530 ಪ್ರಶ್ನೆ ಪತ್ರಿಕೆ ಪಾಲಕರು, ಸುಮಾರು 8409 ಕೊಠಡಿ ಮೇಲ್ವಿಚಾರಕರು ಹಾಗೂ ಒಟ್ಟಾರೆ 20415 ಅಧಿಕಾರಿ/ಸಿಬ್ಬಂದಿ ಪರೀಕ್ಷ ಕರ್ತವ್ಯ ನಿರ್ವಹಿಸಲಿದ್ದಾರೆ. ಪರೀಕ್ಷಾ ದಿನಗಳಂದು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ/ಖಜಾನೆಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ.
ಆನ್ ಲೈನ್ ಮೂಲಕ ದಾಖಲೆಗಳ ಸಲ್ಲಿಕೆ
ಕಳೆದ ವರ್ಷದಂತೆ ಈ ವರ್ಷವೂ ಪರೀಕ್ಷೆ ಮುಗಿದ ನಂತರದ ದಿನಗಳಲ್ಲಿ ಅಭ್ಯರ್ಥಿಗಳು ಸಿಇಟಿ ಅರ್ಜಿಯಲ್ಲಿ ಕೋರಿರುವ ಮೀಸಲಾತಿಗೆ ಅಗತ್ಯ ದಾಖಲೆಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಚಿವ ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಹೀಗೆ ಆನ್ ಲೈನ್ ಮೂಲಕ ಸಲ್ಲಿಸಿರುವ ದಾಖಲೆಗಳನ್ನು ಆನ್ ಲೈನ್ ಮೂಲಕವೇ ಪರಿಶೀಲನೆ ಮಾಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಬಗ್ಗೆ ವಿವರವಾದ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ʼನಲ್ಲಿ ಪ್ರಕಟಿಸಲಾಗುವುದು.

ಜತೆಗೆ, ವಿಶೇಷ ವರ್ಗದ ಅಭ್ಯರ್ಥಿಗಳಿಗೆ ದಾಖಲಾತಿ ಸಲ್ಲಿಸಲು ಮತ್ತೊಮ್ಮೆ ಅವಕಾಶವನ್ನು ನೀಡಲಾಗುವುದು ಎಂದ ಅವರು, ಎಲ್ಲ ಅಭ್ಯರ್ಥಿಗಳಿಗೆ ಅರ್ಜಿಯಲ್ಲಿರುವ ಮಾಹಿತಿಯನ್ನು ತಿದ್ದುಪಡಿ ಮಾಡಿಕೊಳ್ಳಲೂ ಸಹ ಅಂತಿಮ ಅವಕಾಶವನ್ನು ನೀಡಲಾಗುತ್ತಿದ್ದು, ಅದಕ್ಕಾಗಿ ಒಂದು ವಾರ ಕಾಲಾವಕಾಶ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUC N Ashwath NarayanCETCET Exam FestKannada News WebsiteKarnataka CETKarnataka Testing AuthorityLatest News Kannadaಕರ್ನಾಟಕ ಪರೀಕ್ಷಾ ಪ್ರಾಧಿಕಾರಕೆಇಎಡಾ.ಸಿ.ಎನ್.ಅಶ್ವತ್ಥನಾರಾಯಣಬೆಂಗಳೂರುಸಾಮಾನ್ಯ ಪ್ರವೇಶ ಪರೀಕ್ಷೆಸಿಇಟಿಸಿಇಟಿ ಪರೀಕ್ಷೋತ್ಸವ
Share198Tweet123Send
Previous Post

ಆ. 27ರಿಂದ ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಜಿಲ್ಲಾಪ್ರವಾಸ

Next Post

ಶಿರಾಳಕೊಪ್ಪ ಪೊಲೀಸರ ಭರ್ಜರಿ ಬೇಟೆ: 5 ಠಾಣಾ ವ್ಯಾಪ್ತಿ, 10 ಪ್ರಕರಣ, 37 ಲಕ್ಷ ರೂ. ಮೌಲ್ಯದ ವಸ್ತು ವಶಕ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿರಾಳಕೊಪ್ಪ ಪೊಲೀಸರ ಭರ್ಜರಿ ಬೇಟೆ: 5 ಠಾಣಾ ವ್ಯಾಪ್ತಿ, 10 ಪ್ರಕರಣ, 37 ಲಕ್ಷ ರೂ. ಮೌಲ್ಯದ ವಸ್ತು ವಶಕ್ಕೆ

ಶಿರಾಳಕೊಪ್ಪ ಪೊಲೀಸರ ಭರ್ಜರಿ ಬೇಟೆ: 5 ಠಾಣಾ ವ್ಯಾಪ್ತಿ, 10 ಪ್ರಕರಣ, 37 ಲಕ್ಷ ರೂ. ಮೌಲ್ಯದ ವಸ್ತು ವಶಕ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

May 26, 2026
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಯಲ್ಲಿ ರೂ.100 ಕೋಟಿ ದುರ್ಬಳಕೆ | ಡಿಸಿಎಂ ಶಿವಕುಮಾರ್ ಹೇಳಿದ್ದೇನು?

May 26, 2026
ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

May 26, 2026
ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

May 26, 2026
ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL