ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಉಪ ವಿಭಾಗ ಹಾಗು ಸಿಆರ್ಪಿಎಫ್ ವತಿಯಿಂದ ಪಥ ಸಂಚಲನ (ರೂಟ್ ಮಾರ್ಚ್) ನಡೆಸಲಾಯಿತು.
ಉಪ ವಿಭಾಗದ ಉಪಾಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಮತ್ತು ಸಿಆರ್ಪಿಎಫ್ ಅಸಿಸ್ಟೆಂಟ್ ಕಮಾಂಡೆಂಟ್ ಶಿವಾರೆಡ್ಡಿ ನೇತೃತ್ವದಲ್ಲಿ ನಗರದ ರಂಗಪ್ಪ ವೃತ್ತದಿಂದ ಆರಂಭಗೊಂಡ ಪಥ ಸಂಚಲನ ಮಾಧವಾಚಾರ್ ವೃತ್ತ, ತರೀಕೆರೆ ರಸ್ತೆಯ ಗಾಂಧಿ ವೃತ್ತ, ಓಎಸ್ಎಂ ರಸ್ತೆ ಮುಖಾಂತರ ಹೊಸಮನೆ ಶಿವಾಜಿ ವೃತ್ತದವರೆಗೂ ನಡೆಯಿತು.
ನಗರ ಪೊಲೀಸ್ ವೃತ್ತ ನಿರೀಕ್ಷಕ ಶಾಂತಿನಾಥ್, ವಿವಿಧ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು, ಸಿಆರ್ಪಿಎಫ್(ಕೇಂದ್ರ ಮೀಸಲು ಪೊಲೀಸ್ ಪಡೆ)ಅಧಿಕಾರಿ ಮತ್ತು ಸಿಬ್ಬಂಧಿಗಳು ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು.
Also read: ವಿಜೃಂಭಣೆಯ ಕಾವಡಿ ಉತ್ಸವ: ಮೈನವಿರೇಳಿಸಿದ ಹರಕೆ ಸಮರ್ಪಿಸುವ ಪರಿ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















