ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದಲ್ಲಿರುವ ಹೊಯ್ಸಳರ ಕಾಲದಲ್ಲಿ ನಿರ್ಮಾಣವಾಗಿರುವ ಐತಿಹಾಸಿಕ ಪ್ರಸಿದ್ಧ ಕ್ಷೇತ್ರದ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯ ಶಿಥಿಲಾವಸ್ಥೆಯಲ್ಲಿದ್ದು, ಶೀಘ್ರ ದುರಸ್ಥಿ ಮಾಡಬೇಕು ಎಂದು ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ದೇವಾಲಯ ಶಿಥಿಲಾವಸ್ಥೆಯಲ್ಲಿರುವುದರಿಂದ ನೊಂದ ಭಕ್ತರ ಬಳಗದ ವತಿಯಿಂದ ಇಂದು ತಹಶೀಲ್ದಾರ್ ಹಾಗೂ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

Also read: ಗಮನಿಸಿ! ಅ.26ರಂದು ಭದ್ರಾವತಿಯ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ
ಕಳೆದ ನಾಲ್ಕು ವರ್ಷಗಳಿಂದ ಮಳೆ ಬಂದಾಗ ದೇವಾಲಯದಲ್ಲಿ ಗರ್ಭಗುಡಿಯಾದಿಯಾಗಿ ಸೋರಿಕೆಯಾಗುತ್ತಿದೆ. ದೇವಾಲಯದಲ್ಲಿನ ವಿದ್ಯುತ್ ಸಂಪರ್ಕ ದುರಸ್ಥಿಯಾಗಬೇಕಿದ್ದು, ಇದರಿಂದ ಭಕ್ತರಿಗೆ ಹಾಗೂ ನಿತ್ಯ ಪೂಜಾ ಕಾರ್ಯಕ್ರಮಕ್ಕೆ ತೊಂದರೆಯಾಗುತ್ತಿದೆ ಎಂದು ಮನವರಿಕೆ ಮಾಡಿಕೊಟ್ಟರು.

ಜಿಲ್ಲೆಯ ಪ್ರಸಿದ್ಧ ಹಾಗೂ ಪ್ರತಿಷ್ಠಿತವಾಗಿರುವ ಈ ಐತಿಹಾಸಿಕ ದೇವಾಲಯವನ್ನು ಶೀಘ್ರ ದುರಸ್ಥಿಗೊಳಿಸಿ, ಭವಿಷ್ಯದಲ್ಲಿ ಕಾಪಾಡಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ಮೂಲಕ, ಜಿಲ್ಲಾಧಿಕಾರಿಗಳು ಹಾಗೂ ಪುರಾತತ್ವ ಇಲಾಖೆಗೆ ಮನವಿ ಸಲ್ಲಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post