ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಲ್ಲಿನ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವರ ಅದ್ದೂರಿ ಬ್ರಹ್ಮ ರಥೋತ್ಸವ ಇಂದು ವಿಜೃಂಭಣೆಯಿಂದ ಜರುಗಿತು.
ರಥೋತ್ಸವದ ಹಿನ್ನೆಲೆಯಲ್ಲಿ ಇಂದು ನಸುಕಿನಿಂದಲೇ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆದವು. ಮಧ್ಯಾಹ್ನ 12.30ಕ್ಕೆ ಅಭಿಜಿನ್ ಮುಹೂರ್ತದಲ್ಲಿ ಬ್ರಹ್ಮರಥೋತ್ಸವ ಆರಂಭಗೊಂಡಿತು. ಈ ಬಾರಿ ದೇವಸ್ಥಾನದ ಪ್ರಾಂಗಣದಲ್ಲಿಯೇ ಧಾರ್ಮಿಕ ಆಚರಣೆಗಳೊಂದಿಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಭಕ್ತಾಧಿಗಳು ಸ್ವಾಮಿಗೆ ಜೈಕಾರ ಹಾಕಿ ಸಂಭ್ರಮಿಸಿದರು. ಸೇವಾಕರ್ತರಿಂದ ಪಾನಕ, ಕೋಸಂಬರಿ ಸೇರಿದಂತೆ ಪ್ರಸಾದ ವಿತರಣೆ ನಡೆಯಿತು.
Also read: ಲೋಕದ ಸಂಕಟಗಳಿಗೆ ಬುದ್ಧ ನೀಡಿದ ಪರಿಹಾರ ಪ್ರತಿಯೊಬ್ಬರಿಗೂ ಮಾದರಿ: ಪ್ರೊ. ಬಿ.ಪಿ. ವೀರಭದ್ರಪ್ಪ
ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ಎಸ್. ರಂಗನಾಥ ಶರ್ಮ, ಸಹಾಯಕ ಅರ್ಚಕ ಎಸ್. ಶ್ರೀನಿವಾಸ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಮುಜರಾಯಿ ಇಲಾಖೆ ಅಧಿಕಾರಿಗಳು, ದೇವಸ್ಥಾನದ ಸೇವಾಕರ್ತರು, ಭಕ್ತರು ಪಾಲ್ಗೊಂಡಿದ್ದರು.
ಮೇ 6 ರ ನಾಳೆ ಬೆಳಿಗ್ಗೆ ಗಜವಾಹನೋತ್ಸವ, ಅಷ್ಟಾವಧಾನ, ಮಹಾಮಂಗಳಾರತಿ, ಸಂಜೆ ಶೇಷವಾಹನೋತ್ಸವ, ಅಷ್ಟಾವಧಾನ ಸೇವೆ, ಮಹಾಮಂಗಳಾರತಿ, ಮೇ 7 ರಂದು ಬೆಳಿಗ್ಗೆ ಉತ್ಸವ, ಸಂಧಾನ ಸೇವೆ, ಅವಭೃತ ಸ್ನಾನ, ಸಂಜೆ ಹನುಮಂತೋತ್ಸವ, ಪೂರ್ಣಾಹುತಿ, ಧ್ವಜಾವತರಣ, ದೇವತಾ ಸಂಪ್ರೋಕ್ಷಣೆ, ಅಷ್ಟಾವಧಾನ, ಮಹಾಮಂಗಳಾರತಿ, 8ಕ್ಕೆ ಪೂರ್ಣಾಹುತಿ ಹಾಗೂ ಮೇ 8ರಂದು ಬೆಳಿಗ್ಗೆ 9ಕ್ಕೆ ಮಹಾಭಿಷೇಕ ಅಷ್ಟಾವಧಾನ, ಮಹಾಮಂಗಳಾರತಿ, ಸಂಜೆ ಪಲ್ಲಕ್ಕಿ ಉತ್ಸವ, ಅಷ್ಟಾವಧಾನ, ಮಹಾಮಂಗಳಾರತಿ ನಡೆಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post