ಕಲ್ಪ ಮೀಡಿಯಾ ಹೌಸ್
ಕೂಡ್ಲಿಗೆರೆ: ಕೋವಿಡ್19 ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಕೂಡ್ಲಿಗೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಜಾಗೃತಿ ಪಥ ಸಂಚಲನ ನಡೆಸಲಾಯಿತು.
ಟಾಸ್ಕ್ ಫೋರ್ಸ್ ಸಮಿತಿ ವತಿಯಿಂದ ಕೋವಿಡ್ 19 ಬಗ್ಗೆ ಜಾಗೃತಿ ಮೂಡಿಸಲು ಎಲ್ಲ ಇಲಾಖೆಗಳ ಸಹಯೋಗದಲ್ಲಿ ಮೈಕ್ ಮೂಲಕ ಪ್ರಚಾರ ಮಾಡಿ ಪಥಸಂಚಲನ ನಡೆಸಿ, ಸೋಂಕು ನಿಯಂತ್ರಣಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ವಿನಂತಿಸಲಾಯಿತು.

ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಅಶೋಕ್, ಉಪ ತಹಶೀಲ್ದಾರ್ ನಾರಾಯಣ ಗೌಡ, ರಾಜಸ್ವ ನಿರೀಕ್ಷಕರಾದ ಜಗದೀಶ್, ಗ್ರಾಮ ಲೆಕ್ಕಾಧಿಕಾರಿ ಜ್ಞಾನೇಶ್ವರ್, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಅಶೋಕ್, ಗ್ರಾಮ ಪಂಚಾಯ್ತಿ ಸದಸ್ಯರಾದ ರುದ್ರೇಶ.ಆರ್.ಎನ್, ಸ್ವಾಮಿನಾಥನ್, ಎಸ್’ಡಿಎಂಸಿ ಅಧ್ಯಕ್ಷ ವೀರಪ್ಪನ್, ಪೊಲೀಸ್ ಇಲಾಖೆಯ ಜಗದೀಶ್, ಆರೋಗ್ಯ ಇಲಾಖೆಯ ಸಿಬ್ಬಂದಿ, ಗ್ರಾಮ ಪಂಚಾಯ್ತಿ ಸಿಬ್ಬಂದಿ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















