ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿ ಅಪಾಯಕಾರಿಯಾಗಿರುವ ನೂರಾರು ಹೆಲ್ಮೆಟ್’ಗಳನ್ನು ವಶಕ್ಕೆ ಪಡೆಯಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ಎಸ್’ಪಿ ಅನಿಲ್ ಕುಮಾರ್ ಭೂಮರೆಡ್ಡಿ ಅವರುಗಳ ಸೂಚನೆಯ ಹಿನ್ನೆಲೆಯಲ್ಲಿ ಡಿವೈಎಸ್’ಪಿ ಜಿತೇಂದ್ರ ಕುಮಾರ್ ದಯಾಮ ಅವರ ನೇತೃತ್ವದ ತಂಡ ನಗರದ ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿದೆ.
ನಗರದಲ್ಲಿ ಐಎಸ್’ಐ ಪ್ರಮಾಣಿತವಲ್ಲದ ಅರ್ಧ ಹೆಲ್ಮೆಟ್’ಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 141 ಐಎಸ್’ಐ ಪ್ರಮಾಣಿತವಲ್ಲದ ಅರ್ಧ ಹೆಲ್ಮೆಟ್’ಗಳನ್ನು ವಶಪಡಿಸಿಕೊಂಡಿದ್ದಾರೆ.
Also read: ಉಡುಪಿ ಹಿಂದೂ ಯುವತಿಯರ ವೀಡಿಯೋ ಪ್ರಕರಣ: ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ
ಅಂಗಡಿ ಮಾಲೀಕರುಗಳಿಗೆ ಈ ರೀತಿಯ ಅರ್ಧ ಹೆಲ್ಮೆಟ್’ಗಳನ್ನು ದಾಸ್ತಾನು ಮಾಡಿ, ಮಾರಾಟ ಮಾಡದಂತೆ ಪೊಲೀಸ್ ತಿಳುವಳಿಕೆ ಪತ್ರವನ್ನು ನೀಡಿದ್ದಾರೆ.
ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ಉಪ ನಿರೀಕ್ಷಕರು ಹಾಗೂ ಸಂಚಾರಿ ಪೊಲೀಸ್ ಠಾಣಾ ಸಿಬ್ಬಂದಿಗಳ ತಂಡ ದಾಳಿ ವೇಳೆಯಲ್ಲಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post