ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಐಎಸ್ಎಲ್ #VISL ಸಿಲ್ವರ್ ಜ್ಯೂಬಿಲಿ ಸ್ಟೇಡಿಯಂನಲ್ಲಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ ಧ್ವಜಾರೋಹಣ ನೆರವೇರಿಸಿದರು.
ವಿಐಎಸ್ಎಲ್ ಸೆಕ್ಯುರಿಟಿ, ಭದ್ರಾವತಿಯ ಪ್ರೌಢ ಮತ್ತು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪಥಸಂಚಲನ ನಡೆಸಿದರು. ಲಿಟ್ಲಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸೈಂಟ್ ಚಾರ್ಲ್ಸ್ ಆಂಗ್ಲ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಐಕ್ಯತೆ ಮತ್ತು ದೇಶಪ್ರೇಮ ವಿಷಯಗಳ ಕುರಿತು ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿ, ಸಮೂಹಗಾನ ಹಾಡಿದರು.

Also read: ಸರ್ಕಾರ ಶರಾವತಿ ಸಂತ್ರಸ್ತರ ಕೈ ಹಿಡಿಯಲಿದೆ | ಸಚಿವ ಮಧು ಬಂಗಾರಪ್ಪ ಭರವಸೆ
ನಿತಿನ್ ಜೋಸ್, ಸಹಾಯಕ ಮಹಾಪ್ರಬಂಧಕರು (ಸಿ ಅಂಡ್ ಐಟಿ) ರವರು ಕೇರಳದಲ್ಲಿ ನಡೆದ 7ನೇ ಕೇರಳ ರಾಜ್ಯ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಸಿಂಗಲ್ಸ್ ವಿಭಾಗದಲ್ಲಿ ಕಂಚಿನ ಪದಕ ಮತ್ತು ಡಬಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ (SU-5) ವಿಭಾಗದಲ್ಲಿ ಪಡೆದಿದ್ದು ಹಾಗೂ ರಾಷ್ಟಮಟ್ಟದಲ್ಲಿ ಕೇರಳವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಕ್ಕಾಗಿ ಅವರನ್ನು ಅಭಿನಂದಿಸಲಾಯಿತು.
ವಿಐಎಸ್ಎಲ್ ಕಾರ್ಮಿಕರ ಸಂಘ ಮತ್ತು ವಿಐಎಸ್ಎಲ್ ಅಧಿಕಾರಿಗಳ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಇಸ್ಪಾತ್ ಮಹಿಳಾ ಸಮಾಜದ ಸದಸ್ಯರು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ಶಾಲಾ ಮಕ್ಕಳು, ಪೋಷಕರು, ಅಧ್ಯಾಪಕ ವೃಂದದವರು, ಭದ್ರಾವತಿಯ ನಾಗರೀಕರು ಕಾಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ 500ಪಪ್ಪಾಯ, ನುಗ್ಗೆ, ಹಲಸು ಮತ್ತು ಅಡಿಕೆ ಸಸಿಗಳನ್ನು ವಿಐಎಸ್ಎಲ್ನ ಉದ್ಯೋಗಿಗಳು, ಗುತ್ತಿಗೆ ಕಾರ್ಮಿಕರು ಮತ್ತು ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post