ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಪ್ರತಿ ವರ್ಷಕ್ಕಿಂತಲೂ ಈ ಬಾರಿ ಮೂರು ದಿನಗಳ ಕಾಲ ಮಾತ್ರ ನಾಡಹಬ್ಬ ದಸರಾವನ್ನು Dasara ಸರಳವಾಗಿ ಆಚರಿಸಲು ತೀರ್ಮಾನ ಮಾಡಲಾಗಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಹಿರಿಯ ಸಮಾಜ ಸೇವಕರಾದ ವೆಂಕಟರಮಣ ಶೇಟ್ ಅವರು ನಗರಸಭೆ ಆವರಣದಲ್ಲಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಾಡಹಬ್ಬ ದಸರಾ ಉದ್ಘಾಟಿಸಲಿದ್ದಾರೆ ಎಂದರು.
ಪೌರಾಯುಕ್ತ ಎಚ್.ಎಂ. ಮನುಕುಮಾರ್ ಮಾಹಿತಿ ನೀಡಿ, ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಮಾರ್ಗದರ್ಶನದಲ್ಲಿ 3 ದಿನಗಳ ಕಾಲ ಸರಳವಾಗಿ ದಸರಾ ಆಚರಣೆ ನಡೆಸಲು ತೀರ್ಮಾನಿಸಲಾಗಿದೆ. ಈಗಾಗಲೇ ಈ ಸಂಬAಧ ನಗರದ ವಿವಿಧ ಸಂಘ-ಸಂಸ್ಥೆಗಳ ಹಾಗೂ ದೇವಸ್ಥಾನ ಸಮಿತಿಗಳ ಸಲಹೆ-ಸಹಕಾರ ಪಡೆಯಾಗಿದೆ ಎಂದರು.
ಎಷ್ಟು ಸಮಿತಿಗಳು ಇರಲಿವೆ?
ಅಧ್ಯಕ್ಷೆ ಶೃತಿ ವಸಂತಕುಮಾರ್ ನೇತೃತ್ವದಲ್ಲಿ 11 ಜನ ಸದಸ್ಯರ ಉಸ್ತುವಾರಿ ಸಮಿತಿ
ಸದಸ್ಯ ಬಷೀರ್ ಅಹಮದ್ ನೇತೃತ್ವ 13 ಸದಸ್ಯರ ಸ್ವಾಗತ ಸಮಿತಿ
ಸದಸ್ಯ ಆರ್. ಮೋಹನ್ ಕುಮಾರ್ ನೇತೃತ್ವದ 13 ಸದಸ್ಯರ ಸಾಂಸ್ಕೃತಿಕ ಮತ್ತು ಮೆರವಣಿಗೆ ಸಮಿತಿ
ಹಿರಿಯ ಸದಸ್ಯ ವಿ. ಕದಿರೇಶ್ ನೇತೃತ್ವದ 13 ಸದಸ್ಯರ ಪ್ರಚಾರ ಮತ್ತು ಅಲಂಕಾರ ಸಮಿತಿ
ಸದಸ್ಯ ಬಸವರಾಜ ಬಿ. ಅನೇಕೊಪ್ಪ ನೇತೃತ್ವದ 14 ಸದಸ್ಯರ ಮನರಂಜನಾ ಸಮಿತಿ
ಮಾಜಿ ಉಪಾಧ್ಯಕ್ಷ ಚನ್ನಪ್ಪ ನೇತೃತ್ವದ 15 ಸದಸ್ಯರ ಕ್ರೀಡಾ ಸಮಿತಿ
ಸದಸ್ಯ ಮಣಿ ಎಎನ್’ಎಸ್ ನೇತೃತ್ವದ 12 ಸದಸ್ಯರ ದೇವರುಗಳ ಉತ್ಸವ ಸಮಿತಿ
ಮಾಜಿ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ನೇತೃತ್ವದ 19 ಸದಸ್ಯರ ಆಯುಧ ಪೂಜೆ ಉಸ್ತುವಾರಿ ಸಮಿತಿ
ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?
ಕನಕಮಂಟಪ ಮೈದಾನದಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವಿಶೇಷವಾಗಿ ಈ ಬಾರಿ ಕುಸ್ತಿ ಪಂದ್ಯಾವಳಿ ವಿಜೇತರಾದವರಿಗೆ `ಭದ್ರಾವತಿ ಕೇಸರಿ’ ಪ್ರಶಸ್ತಿ ನೀಡಲಾಗುವುದು.
Also read: ಜಾತಿ ಗಣತಿ ಹೌದೊ ಅಲ್ಲವೊ ಸರ್ಕಾರ ಸ್ಪಷ್ಟಪಡಿಸಲಿ: ಬಸವರಾಜ ಬೊಮ್ಮಾಯಿ ಆಗ್ರಹ
ಪ್ರತಿ ವರ್ಷದಂತೆ ಈ ಬಾರಿ ಸಹ ಮಹಿಳಾ ದಸರಾ ನಡೆಯಲಿದ್ದು, ಕನಕಮಂಟಪ ಮೈದಾನದಲ್ಲಿ ಬೆಂಗಳೂರಿನ ಕಲಾವಿದರ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದ್ದು, ಸ್ಥಳೀಯ ಕಲಾವಿದರಿಂದ ನಗರಸಭೆ ಮುಂಭಾಗ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.
ಪ್ರತಿವರ್ಷದಂತೆ ಈ ಬಾರಿ ಸಹ ಸಂಪ್ರದಾಯದಂತೆ ದೇವಾನುದೇವತೆಗಳ ಉತ್ಸವ ಮೆರವಣಿಗೆ ನಡೆಯಲಿದ್ದು, ಕನಕಮಂಟಪ ಮೈದಾನದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೋರಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















