ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಬಾಬಾಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಗಣರಾಜ್ಯೋತ್ಸವದ ದಿನ ಅಪಮಾನ ಮಾಡಿದ ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಮಲ್ಲಿಕಾರ್ಜುನಗೌಡ ಪಾಟೀಲ್ ವರ್ತನೆ ಅಕ್ಷಮ್ಯ ಅಪರಾಧವಾಗಿದ್ದು, ಈ ಬಗ್ಗೆ ಸೂಕ್ತ ವಿಚಾರಣೆ ನಡೆಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಶ್ರಬೇಕೆಂದು ಭದ್ರಾವತಿ ವಕೀಲರ ಸಂಘದ ಅಧ್ಯಕ್ಷ ಕೆ.ಎನ್. ಶ್ರೀಹರ್ಷ ಹೇಳಿದರು.
ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಮಲ್ಲಿಕಾರ್ಜುನಗೌಡ ಪಾಟೀಲ್ ಗಣರಾಜ್ಯೋತ್ಸವದಂದು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆಸುವ ಮೂಲಕ ಮಾಡಿದ ಅವಮಾನವನ್ನು ಖಂಡಿಸಿ ಭದ್ರಾವತಿ ವಕೀಲರ ಸಂಘ ನಡೆಸಿದ ಖಂಡನಾ ಸಭೆ ಹಾಗೂ ಮೆರವಣಿಗೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿಶ್ವದಲ್ಲಿಯೇ ಶ್ರೇಷ್ಠ ಮಟ್ಟದ ಸಂವಿಧಾನವನ್ನು ರಚಿಸಿದ ಕೀರ್ತಿಗೆ ಭಾಜನರಾದ ಅಂಬೇಡ್ಕರ್ಅವರ ಹಿರಿಮೆ, ಜ್ಞಾನ,ಅವರ ಹೋರಾಟ, ಎಲ್ಲವೂ ಇಂದಿನ ಯುವಪೀಳಿಗೆಗೆ ಆದರ್ಶ ಮತ್ತು ಅನುಕರಣೀಯವಾದುದು. ಇಂಹತ ಉನ್ನತ ವ್ಯಕ್ತಿತ್ವದ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿರುವುದು ಒಬ್ಬ ಜಿಲ್ಲಾನ್ಯಾಯಾಧೀಶರಾಗಿ ಜವಾಬ್ದಾರಿ ಸ್ಥಾನದಲ್ಲಿದ್ದು ಈ ರೀತಿ ನಡೆದುಕೊಂಡಿರುವುದನ್ನು ಸಹಿಸಲು ಸಾಧ್ಯವಿಲ್ಲ. ಕೂಡಲೇ ಇವರ ಹಾಗೂ ಈ ಘಟನೆಗೆ ಕಾರಣರಾದ ಆ ನ್ಯಾಯಾಲಯದ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ವಿರುದ್ಧ ರಾಜ್ಯಪಾಲರು ಸೂಕ್ತ ಕ್ರಮ ಕೈಗೊಳ್ಳಲು ಆದೇಶಿಸಬೇಕು ಮತ್ತು ಉಚ್ಛ ನ್ಯಾಯಾಲಯವು ಈ ಕುರಿತಂತೆ ಸೂಕ್ತತನಿಕೆ ನಡೆಸಿ ತಪ್ಪತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಸಂಘವು ಆಗ್ರಹಿಸುತ್ತದೆ ಎಂದರು.
ಪ್ರತಿಭಟನೆಗೂ ಮುನ್ನ ಸಂಘದ ಅಧ್ಯಕ್ಷ ಶ್ರೀಹರ್ಷ ಅವರ ಅಧ್ಯಕ್ಷತೆಯಲ್ಲಿ ಸಂಘದದಲ್ಲಿ ನಡೆದ ಸಭೆಯಲ್ಲಿ ವಕೀಲರಾದ ಸಯ್ಯದ್ ನಿಯಾಜ್, ಶಿವಕುಮಾರ್, ಸುಧೀಂದ್ರ, ಮಹಮದ್ ಇಲಿಯಾಸ್, ಹಾಗೂ ಸಂಘದ ಮಾಜಿ ಅಧ್ಯಕ್ಷರಾದ ಟಿ. ಚಂದ್ರೇಗೌಡ, ವಿ. ವೆಂಕಟೇಶ್, ಮಾಜಿ ಉಪಾಧ್ಯಕ್ಷ ಜಯರಾಂ ಮುಂತಾದವರು ಅಂಬೇಡ್ಕರ್ ವ್ಯಕ್ತಿತ್ವ ಹಾಗೂ ಅವರ ಪರಿಶ್ರಮದಿಂದ ರಚನೆಯಾದ ಸಂವಿಧಾನದ ವಿಶೇಷತೆ ಕುರಿತು ಮಾತನಾಡಿದರು.
ಘಟನೆಯನ್ನು ಖಂಡಿಸಿ ಉಚ್ಛ ನ್ಯಾಯಾಲಯದ ಕಾರ್ಯದಶಿಗಳಿಗೆ ಹಾಗೂ ರಾಜ್ಯಪಾಲರಿಗೆ ಘಟನೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಬೇಕು. ನ್ಯಾಯಾಲಯದ ಕಲಾಪಗಳಿಂದ ಹೊರಗುಳಿಯುವ ಮೂಲಕ ಪ್ರತಿಭಟನೆ ನಡೆಸಬೇಕೆಂಬ ಅಭಿಪ್ರಯವ್ಯಕ್ತಪಡಿಸಿದರು. ಸದಸ್ಯರ ಅಭಿಪ್ರಾಯದಂತೆ ಸಂಘ ನಿರ್ಧಾರ ಕೈಗೊಂಡು ವಕೀಲರು ನ್ಯಾಯಾಲಯದ ಕಾರ್ಯಕಲಾಪಗಳಿಂದ ಹೊರಗುಳಿದು ಪ್ರತಿಭಟನಾ ಮೆರವಣಿಗೆ ನಡೆಸಿದರು.
ನ್ಯಾಯಾಲಯದ ಆವರಣದಿಂದ ರಂಗಪ್ಪ ವೃತ್ತದ ಮೂಲಕ ತಾಲೂಕು ಕಚೇರಿವರೆಗೆ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಪಾಟೀಲ್ ವಿರುದ್ಧ ಘೋಷಣೆ ಕೂಗುತ್ತ ಮೆರವಣಿಗೆ ನಡೆಸಿದರು.
ಸಂಘದ ಕಾರ್ಯದರ್ಶಿ ಉದಯಕುಮಾರ್ ಮನವಿಯನ್ನು ವಾಚಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ ನ್ಯಾಯಾಧೀಶ ಮಲ್ಲಿಕಾಜುನಗೌಡ ಪಾಟೀಲ್ ಅವರನ್ನು ಹಾಗೂ ಘಟನೆಗೆ ಸಂಬಂಧಿಸಿದಂತೆ ಆ ನ್ಯಾಯಾಲಯದ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಶಿಸ್ತಿನ ಕಾನೂನು ಕ್ರಮಕೈಗೊಂಡು ಅವರನ್ನು ಕೆಲಸದಿಂದ ವಜಾಗೊಳಿಸಬೇಕೆಂದು ಎಂದು ರಾಜ್ಯಪಾಲರಿಗೆ ಉಪತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ಡಿ.ಎಂ. ವಿಶ್ವನಾಥ್, ಖಜಾಂಚಿ ವಿಮಲ, ಸದಸ್ಯರಾದ ರವಿ, ನವರತ್ನಮಾಲ, ಮಗೇಶ್ ಬಾಬು, ಟಿ.ವಿ. ವೆಂಕಟೇಶ್, ಕೃಷ್ಣೇಗೌಡ, ರೂಪಾರಾವ್, ವಿಶ್ವನಾಥ್, ಆರ್.ಎಸ್. ಶೋಭ, ಬೇಕಲ್ವಿದ್ಯಾ, ಆಶಾ, ಭವ್ಯ, ಆಂಥೊಣಿ, ಸೋಮಶೇಖರ್, ರಮೇಶ್, ಉಮಾಶಂಕರ್, ನಾರಾಯಣ ಸ್ವಾಮಿ, ವಿಜಯ, ಮಹಮದ್ ಇಲಿಯಾಸ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post