ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಪ್ರತಿ ವರ್ಷದಂತೆ ಈ ಬಾರಿ ಸಹ ನಗರಸಭೆ ವತಿಯಿಂದ ಆಯೋಜಿಸಲಾಗಿರುವ ನಾಡಹಬ್ಬ ದಸರಾ ಕಾರ್ಯಕ್ರಮಕ್ಕೆ ಸಾಹಿತಿ, ವೈದ್ಯ ಡಾ. ಕೃಷ್ಣ ಎಸ್. ಭಟ್ ಹಳೇನಗರದ ಶ್ರೀ ಹಳದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಿದರು.
ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಜ್ಯೋತಿ ಬೆಳಗಿಸುವ ಮೂಲಕ ದಸರಾ ಉತ್ಸವಕ್ಕೆ ಚಾಲನೆ ನೀಡಿ, ಎಲ್ಲರಿಗೂ ಶುಭ ಕೋರಿದರು. ಇದಕ್ಕೂ ಮೊದಲು ನಗರಸಭೆ ಆಡಳಿತ ಪರವಾಗಿ ಪೌರಾಯುಕ್ತ ಕೆ. ಪರಮೇಶ್, ಕಂದಾಯಾಧಿಕಾರಿ ಎಂ.ಎಸ್ ರಾಜ್ಕುಮಾರ್, ಸಹಾಯಕ ಕಾರ್ಯಪಾಲ ಅಭಿಯಂತರ ಶ್ರೀರಂಗರಾಜಪುರೆ, ಪರಿಸರ ಅಭಿಯಂತರ ಪ್ರಭಾಕರ್, ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ್ ಹಾಗು ಸಿಬ್ಬಂದಿ ವರ್ಗದವರು, ನಗರಸಭೆ ಸದಸ್ಯರು ಸೇರಿದಂತೆ ಇನ್ನಿತರರು ಕೃಷ್ಣ ಎಸ್ ಭಟ್ ಅವರನ್ನು ಸ್ವಾಗತಿಸಿದರು.
ನಗರಸಭೆ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಶ್ರೀ ಚಾಮುಂಡೇಶ್ವರಿ ದೇವಿ ಹಾಗು ಶ್ರೀ ಹಳದಮ್ಮ ದೇವಿ ಸೇರಿದಂತೆ ಎಲ್ಲಾ ಪ್ರತಿಷ್ಠಾಪನಾ ಮೂರ್ತಿಗಳನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಪೌರಕಾರ್ಮಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post