ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಉಕ್ಕಿನನಗರಿ ಭದ್ರಾವತಿಯಲ್ಲಿ ಈ ಬಾರಿ ಬದಲಾಣೆಯ ಗಾಳಿ ಬೀಸುತ್ತಿದ್ದು, ನಗರಸಭೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ನಿಶ್ಚಿತ ಎಂದು ಪಕ್ಷದ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ವಿಶ್ವಾಸ ವ್ಯಕ್ತಪಡಿಸಿದರು.
ಬಸವೇಶ್ವರ ವೃತ್ತದ ಬಳಿ ಇರುವ ಬಿಜೆಪಿ ಚುನಾವಣಾ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಗರದಲ್ಲಿ ಒಂದು ರೀತಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಬೇರೆ ಪಕ್ಷದ ಮುಖಂಡರುಗಳು ಬಿಜೆಪಿ ತತ್ವ ಸಿದ್ದಾಂತ ಹಾಗೂ ಅಭಿವೃದ್ಧಿ ಕಾರ್ಯವನ್ನು ಮೆಚ್ಚಿ ನಮ್ಮ ಪಕ್ಷಕ್ಕೆ ಸೇರಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದಿಂದ ನಗರದಲ್ಲಿ ಬಹಳಷ್ಟಟ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಇದನ್ನು ಗುರುತಿಸಿರುವ ಮತದಾರರು ಈ ಬಾರಿ ಬಿಜೆಪಿಯನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ. ಇದು ನಮ್ಮ ಪಕ್ಷದ ಗೆಲುವಿನ ಚುನಾವಣೆ ಎಂದು ವ್ಯಾಖ್ಯಾನಿಸಿದರು.
ಬಿಜೆಪಿ ಹಿರಿಯ ಮುಖಂಡ ಆರ್.ಕೆ. ಸಿದ್ರಾಮಣ್ಣ ಮಾತನಾಡಿ, ಭದ್ರಾವತಿಗೆ ಹಿಡಿದಿದ್ದ ಅಮಾವಾಸ್ಯೆ ಮುಗಿದಿದೆ ಹೊಸ ವರ್ಷ ಆರಂಭದ ಯುಗಾದಿ ಹೊಸ್ತಿಲಲ್ಲಿ ಹೊಸ ಶಾಖೆ ಆರಂಭವಾಗುತ್ತಿದ್ದು, ಭದ್ರಾವತಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯುತ್ತದೆ. ದೇಶದಾದ್ಯಂತ ಹಲವು ರಾಜ್ಯಗಳ ಚುನಾವಣೆ ನಡೆಯುತ್ತಿದ್ದು, ಎಲ್ಲಾ ಕಡೆಯೂ ಬಿಜೆಪಿ ಪರ ಅಲೆ ಇದೆ. ಅದರಂತೆಯೇ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದ ಅಭಿವೃದ್ಧಿ ಕಾರ್ಯಗಳು ನಮಗೆ ವರದಾನವಾಗಿದ್ದು, ಜನರು ಇದನ್ನು ಬೆಂಬಲಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಜೆಡಿಎಸ್ ಸ್ಥಳೀಯ ಮುಖಂಡ ಶ್ರೀಧರ ಗೌಡ ಅವರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು. ಪಕ್ಷದ ಬಾವುಟ ನೀಡುವ ಮೂಲಕ ಇವರನ್ನು ಸ್ವಾಗತಿಸಲಾಯಿತು. ಹಾಗೂ ಬಿಜೆಪಿ ಚುನಾವಣಾ ಉಸ್ತುವಾರಿಗಳ ಪಟ್ಟಿ ಮತ್ತು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು.
ಒಂದನೆಯ ವಾರ್ಡ್ ಅಭ್ಯರ್ಥಿ ಹೆಸರು ಘೋಷಣೆ ಬಾಕಿ:
ಭದ್ರಾವತಿ ನಗರಸಭೆ ಚುನಾವಣೆಗೆ ಕಳೆದ ವಾರ 21 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಜಿಲ್ಲಾಧ್ಯಕ್ಷರು ಬಿಡುಗಡೆ ಮಾಡಿದ್ದರು. ಇಂದು ಒಂದನೆಯ ವಾರ್ಡ್ ಅಭ್ಯರ್ಥಿ ಹೊರತಾಗಿ ಇನ್ನೆಲ್ಲಾ ವಾರ್ಡ್ಗಳಿಗೆ ಹೆಸರುಗಳನ್ನು ಘೋಷಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮೇಘರಾಜ್, ಒಂದನೆಯ ವಾರ್ಡ್ಗೆ ಅಚ್ಚರಿಯ ಅಭ್ಯರ್ಥಿಯೊಬ್ಬರನ್ನು 15ನೆಯ ತಾರೀಖು ಘೋಷಣೆ ಮಾಡುತ್ತೇವೆ. ಈ ಅಭ್ಯರ್ಥಿ ಯಾರು ಎಂಬುದನ್ನು ಕಾದು ನೋಡಿ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಆರ್ಯವೈಶ್ಯ ಮಂಡಳೀ ಅಧ್ಯಕ್ಷ ಡಿ.ಎಸ್. ಅರುಣ್, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಪ್ರಮುಖರಾದ ಎಸ್. ದತ್ತಾತ್ರಿ, ರಾಮಲಿಂಗಯ್ಯ, ಗಿರೀಶ್ ಪಟೇಲ್, ಸಿ. ಮಂಜುಳಾ, ಮಂಗೋಟೆ ರುದ್ರೇಶ್, ಶ್ರೀನಾಥ್, ಶಿವರಾಜ್, ಅರಳೀಹಳ್ಳಿ ಪ್ರಕಾಶ್, ಪ್ರವೀಣ್, ದತ್ತಾತ್ರಿ, ರಾಮಪ್ಪ, ಮರಿಸ್ವಾಮಿ, ವಿಶ್ವನಾಥ್, ಋಷಿಕೇಶ್ ಪೈ ಸೇರಿದಂಥೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post