ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ತಾಲೂಕು ಸಂಘ ಪರಿವಾರ ಹಾಗೂ ಬಿಜೆಪಿಯಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಹಿರಿಯ ಮುಖಂಡ ವೆಂಕಟೇಶ್ ರಾಜ್ ಅರಸ್(74) ನಿನ್ನೆ ಸಂಜೆ ವಿಧಿವಶರಾಗಿದ್ದಾರೆ.
ಹನುಮಂತನಗರ ನಿವಾಸಿಯಾಗಿದ್ದ ಇವರು ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ವೆಂಕಟೇಶ್ ರಾಜ್ ಬಗ್ಗೆ
ನಾಗಪುರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತರಬೇತಿ ಪಡೆದಿದ್ದ ವೆಂಕಟೇಶ್ ರಾಜ್, ತಮ್ಮ ತರುಣಾವಸ್ಥೆಯಲ್ಲಿ ಮೂರು ಬಾರಿ ಬಿಜೆಪಿ ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರ ಕಾರ್ಯವ್ಯಾಪ್ತಿ ಶಿವಮೊಗ್ಗಕ್ಕೆ ಮಾತ್ರವಲ್ಲದೇ ಚಿಕ್ಕಮಗಳೂರು ಹಾಗೂ ದಾವಣಗೆರೆಗೂ ಸಹ ವಿಸ್ತರಿಸಿತ್ತು.
ಇಂದಿನ ಮುಖ್ಯಮಂತ್ರಿವ ಬಿ.ಎಸ್. ಯಡಿಯೂರಪ್ಪನವರೊಂದಿಗೆ ಹಿಂದಿನಿಂದಲೂ ಉತ್ತಮ ಒಡನಾಟ ಹೊಂದಿದ್ದರು. ಯಡಿಯೂರಪ್ಪನವರು ಹಿಂದೆ ಜಿಲ್ಲಾಧ್ಯಕ್ಷರಾಗಿದ್ದ ಅವಧಿಯಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ ನಡೆದ ಪಾದಯಾತ್ರೆಯಲ್ಲಿ ಮುಂಚೂಣಿಯಲ್ಲಿದ್ದರು. ಪಕ್ಷ ಹಾಗೂ ಸಂಘ ಪರಿವಾರದ ಸಂಘಟನೆಗೆ ಇವರು ಸದಾ ಒತ್ತು ನೀಡಿದ್ದರು ಎನ್ನಲಾಗಿದೆ.
ಹನುಮಂತ ನಗರದ ನಿವಾಸಿಗಳಿಗೆ ಹಕ್ಕು ಪತ್ರ ಕೊಡಿಸುವಲ್ಲಿ ಇವರ ಪಾತ್ರ ಅತ್ಯಂತ ಪ್ರಮುಖವಾಗಿತ್ತು. ಅವರ ನಿಧನಕ್ಕೆ ಪ್ರಮುಖರಾದ ನರಸಿಂಹಾಚಾರ್ ಹಾಗೂ ನಗರಸಭೆ ಮಾಜಿ ಉಪಾಧ್ಯಕ್ಷ ವೆಂಕಟೇಶ್ ಸಂತಾಪ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post