ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹಳೆನಗರದ ಶ್ರೀಲಕ್ಷ್ಮೀನರಸಿಂಹಸ್ವಾಮಿಯ ಬ್ರಹ್ಮರಥೋತ್ಸವ ನಿಮಿತ್ತ ಮೇ 2ರಿಂದ ೮ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಮೇ 3ರ ಸಂಜೆ ಗರುಡೋತ್ಸವ, ಅಷ್ಟಾವಧಾನ, ಮಹಾಮಂಗಳಾರತಿ ಜರುಗಲಿದೆ.
4ರಂದು ಬೆಳಿಗ್ಗೆ ಶ್ರೀ ನರಸಿಂಹ ಜಯಂತಿ, ವಸಂತಸೇವೆ, ಅಷ್ಟವಧಾನ, ಮಹಾಮಂಗಳಾರತಿ, ಸಂಜೆ 7ಕ್ಕೆ ಶ್ರೀಸ್ವಾಮಿಯವರಿಗೆ ಕಲ್ಯಾಣೋತ್ಸವ, ಅಷ್ಟಾವಧಾನ, ಮಹಾಮಂಗಳಾರತಿ ನಡೆಯಲಿದೆ.
5 ರಂದು ಮಧ್ಯಾಹ್ನ ಅಭಿಜಿನ್ ಮುಹೂರ್ತದಲ್ಲಿ ಬ್ರಹ್ಮರಥೋತ್ಸವ, ಸಂಜೆ ಅಷ್ಟಾವಧಾನ ಮಹಾಮಂಗಳಾರತಿ.
6 ರಂದು ಬೆಳಿಗ್ಗೆ ಗಜವಾಹನೋತ್ಸವ, ಅಷ್ಟಾವಧಾನ, ಮಹಾಮಂಗಳಾರತಿ, ಸಂಜೆ ಶೇಷವಾಹನೋತ್ಸವ, ಅಷ್ಟಾವಧಾನ ಸೇವೆ, ಮಹಾಮಂಗಳಾರತಿ.
7 ರಂದು ಬೆಳೀಗ್ಗೆ ಉತ್ಸವ, ಸಂಧಾನಸೇವೆ, ಅವಭೃತ ಸ್ನಾನ, ಸಂಜೆ ಹನುಮಂತೋತ್ಸವ, ಪೂರ್ಣಾಹುತಿ, ಧ್ವಜಾವತರಣ, ದೇವತಾಸಂಪ್ರೋಕ್ಷಣೆ, ಅಷ್ಟಾವಧಾನ, ಮಹಾಮಂಗಳಾರತಿ, 8ಕ್ಕೆ ಪೂರ್ಣಾಹುತಿ
8ರಂದು ಬೆಳಿಗ್ಗೆ 9ಕ್ಕೆ ಮಹಾಭಿಷೇಕ ಅಷ್ಟಾವಧಾನ, ಮಹಾಮಂಗಳಾರತಿ, ಸಂಜೆ ಪಲ್ಲಕ್ಕಿ ಉತ್ಸವ, ಅಷ್ಟಾವಧಾನ, ಮಹಾಮಂಗಳಾರತಿ ನಡೆಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post