No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಮೋದಿ ಸರ್ಕಾರ ಕಿತ್ತೊಗೆಯಲು ಉಪಚುನಾವಣೆ ನಾಂದಿ: ದಿನೇಶ್ ಗುಂಡೂರಾವ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 22, 2018
in ಭದ್ರಾವತಿ
0
Share on FacebookShare on TwitterShare on WhatsApp

ಭದ್ರಾವತಿ: ಪೊಳ್ಳು ಭರವಸೆಗಳನ್ನು ನೀಡುತ್ತಾ ದಲಿತರ, ರೈತರ, ಅಮಾಯಕರ, ಬಡವರ ದಮನ ಮಾಡಲು ಮುಂದಾಗಿರುವ ಕೇಂದ್ರದ ನರೇಂದ್ರ ಮೋದಿ ಬಿಜೆಪಿ ಸರಕಾರವನ್ನು ಕಿತ್ತೊಗೆಯಲು ಉಂಟಾಗಿರುವ ಉಪ ಚುನಾವಣೆಯಾಗಿದೆ ಎಂದು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾರ್ಮಿಕವಾಗಿ ನುಡಿದರು.

ಅವರು ಸೋಮವಾರ ಹಳೇನಗರದ ವೀರಶೈವ ಸಭಾಭವನದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ರಾಜ್ಯವನ್ನು ಪ್ರಗತಿಯತ್ತ ಕೊಂಡ್ಯೊಯುವ ಸಲುವಾಗಿ ಹಾಗು ರೈತರನ್ನು ಸಂಕಷ್ಟದಿಂದ ಪಾರು ಮಾಡಲು ಸಮಿಶ್ರ ಸರಕಾರ ಅಧಿಕಾರಕ್ಕೆ ಬಂದಿರುವುದೇ ವಿನಾ ಅಧಿಕಾರದ ಆಸೆಯಿಂದಲ್ಲ. ಅನಿರೀಕ್ಷಿತವಾಗಿ ಬಂದಿರುವ ಉಪ ಚುನಾವಣೆಯಾದರೂ ಸಾಮಾನ್ಯ ಚುನಾವಣೆ ಎಂದು ಯಾರು ಅರಿಯಬೇಡಿ. ಮುಂದಿನ ಸಂಸತ್ ಚುನಾವಣೆ ದಿಕ್ಸೂಚಿಯಾಗಿದೆ ಎಂದರು.

ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಬಲಿಷ್ಟವಾಗಿದ್ದರು ಯುವ ಶಕ್ತಿಗೆ ಮತ್ತು ಉತ್ತಮ ಅಭ್ಯರ್ಥಿಯನ್ನಾಗಿ ವರಿಷ್ಟರು ಒಗ್ಗೂಡಿ ಶಕ್ತಿಗೆ ಮತ್ತೊಂದು ಹೆಸರಾಗಿದ್ದ ಮಾಜಿ ಸಿಎಂ ಎಸ್. ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಅವರನ್ನು ಉಭಯ ಪಕ್ಷಗಳು ಆಯ್ಕೆ ಮಾಡಿದೆ. ಬಂಗಾರಪ್ಪ ರವರ ಸ್ಥಾನದಲ್ಲಿ ಮಧು ರವರನ್ನು ಕಾಣುವ ಸದಾವಕಾಶ ಸಂದಿದೆ. ನಾವೆಲ್ಲರು ಒಗ್ಗೂಡಿ ಶ್ರಮಿಸಿ ಸಹಕಾರಗೊಳಿಸಿ ಅತ್ಯಧಿಕ ಮತಗಳ ಅಂತರದಿಂದ ಆಯ್ಕೆ ಮಾಡಿ ಸಂಸತ್‌ಗೆ ಕಳುಹಿಸೊಣ.
ಬಿಜೆಪಿಯಲ್ಲಿ ಸಿದ್ದಾಂತ ಮತ್ತು ನೀತಿಗಳಿಲ್ಲ. ಬಿ.ಎಸ್. ಯಡಿಯೂರಪ್ಪ ಮತ್ತು ಬಿ.ವೈ. ರಾಘವೇಂದ್ರ ಸಂಸದರಾಗಿ ಈ ಕ್ಷೇತ್ರಕ್ಕೆ ಏನು ಸಾಧಿಸಿಲ್ಲ. ಅವಳಿ ಕಾರ್ಖಾನೆಗಳಿಗೆ ಚೇತನ ನೀಡುವ ಬದಲು ಹಾಳು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕೇಂದ್ರ ಮೋದಿ ಸರಕಾರ ಜನರ ನೆಮ್ಮದಿ ಹಾಳು ಮಾಡುವ ಸರಕಾರವಾಗಿದೆ. ಜನರ ವಿರೋಧಿಯಾಗಿ ವರ್ತಿಸುತ್ತಿದೆ. ದೇಶವನ್ನು ಛಿದ್ರ ಮಾಡುವ ಕೆಲಸದಲ್ಲಿ ತೊಡಗಿದೆ. ಮೋದಿ ಅಧಿಕಾರಕ್ಕೇರಿ ನಾಲ್ಕುವರೆ ವರ್ಷಗಳು ಆದರೂ ಏನು ಸಾಧನೆ ಮಾಡದೆ ಕೇವಲ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡುವ ಕೆಲಸದಲ್ಲಿ ತೊಡಗಿದೆ. ಅದೇ ಅವರ ಸಾಧನೆಯಾಗಿದೆ ಎಂದು ಟೀಕಿಸಿದರು.

ವಿದೇಶಿ ಹಣ, ಭಯೋತ್ಪಾದನೆ ನಿಗ್ರಹ, ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಎಂಬಿತ್ಯಾದಿ ಸುಳ್ಳು ಭರವಸೆ ನೀಡುತ್ತಾ ದೇಶದ ಸ್ಥಿತಿ ಚಿಂತಾಜನಕ ಮಾಡುತ್ತಿದ್ದಾರೆ. ಭ್ರಷ್ಟಾಚಾರಕ್ಕೆ ಕಡಿವಾಣ ಇಲ್ಲದಂತಾಗಿದೆ. ಪವಿತ್ರ ಗಂಗಾನದಿಯನ್ನು ಸ್ವಚ್ಚ ಮಾಡುತ್ತೇನೆಂದು ಹೇಳಿ ಐದಾರು ಸಾವಿರ ಕೋಟಿ ಹಣ ನುಂಗಿ ನೀರು ಕುಡಿದಿದ್ದಾರೆ. ಹಿಂದೆಂಗಿಂತಲೂ ನದಿಯು ಹೆಚ್ಚು ಮಾಲಿನ್ಯವಾಗಿದೆ. ಧರ್ಮ ಪ್ರಚೋಧನೆ ಮಾಡುವುದರಿಂದ ಹಾಗೂ ಅಲ್ಪಸಂಖ್ಯಾತರ, ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ನೋಟು ಅಮಾನ್ಯದಿಂದ ಬಡವರಿಗೆ ತೊಂದರೆ ಮುಂತಾದ ಸಾಧನೆಯೆ ಬಿಜೆಪಿ ಸರಕಾರದ್ದಾಗಿದೆ ಎಂದು ಟೀಕಿಸಿದರು.

ಜಿಲ್ಲೆಯಲ್ಲಿ ಬಂಗಾರಪ್ಪ ರವರ ಸ್ಥಾನ ತುಂಬಲು ಕಾಂಗ್ರೆಸ್ ಪಕ್ಷದ ಅಪಾರ ಶಕ್ತಿಯನ್ನು ಸ್ಥಳೀಯ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ನೇತೃತ್ವದಲ್ಲಿ ಮಧು ಬಂಗಾರಪ್ಪ ಅವರಿಗೆ ಮತ ನೀಡುವ ಮೂಲಕ ಶಕ್ತಿ ತುಂಬುವುದು ನೆರೆದಿರುವ ಜನಸ್ಥೋಮವೇ ಇದಕ್ಕೆ ಸಾಕ್ಷಿಯಾಗಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತಪ್ಪು ಮಾಡಿ ಸ್ಥಳೀಯ ಶಾಸಕರಿಗೆ ಟಿಕೇಟ್ ವಂಚಿಸಿದೆ. ಅದರ ಅರಿವಾಗಿ ಪುನಃ ಟಿಕೇಟ್ ನೀಡಿ ಪಕ್ಷವನ್ನು ಬಲಿಷ್ಟಗೊಳಿಸಿದೆ. ಮುಂದಿನ ದಿನಗಳಲ್ಲಿ ಅವರು ಪಕ್ಷದಲ್ಲಿ ಬಹು ಎತ್ತರಕ್ಕೆ ಹೋಗುವುದರಲ್ಲಿ ಅನುಮಾನವಿಲ್ಲ ಎಂದರು.

ಅಭ್ಯರ್ಥಿ ಮಧು ಬಂಗಾರಪ್ಪ ಮಾತನಾಡಿ, ನಿರೀಕ್ಷಿಸದೆ ಬಂದಿರುವ ಚುನಾವಣೆಯಲ್ಲಿ ಹಿರಿಯರ ಮಾತಿಗೆ ಗೌರವಿಸಿ ರಾಷ್ಟ್ರ ಕಟ್ಟಲು ಚುನಾವಣೆಗೆ ಸ್ಪರ್ಧಿಸಿದ್ದೇನೆ. ಇದರಿಂದ ಸಮಿಶ್ರ ಸರಕಾರಕ್ಕೆ ಹೆಚ್ಚಿನ ಶಕ್ತಿ ಬಂದಂತ್ತಾಗಿದೆ. ಬಿಜೆಪಿಯನ್ನು ದೂರವಿಡಲು ತೀರ್ಮಾನಿಸಿರುವ ಸಿಎಂ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಪಕ್ಷ ಎಲ್ಲಾ ಮುಖಂಡರು ಪಣ ತೊಟ್ಟಿರುವುದರಿಂದ ಬಂಗಾರಪ್ಪ ರವರ ಶಕ್ತಿ ತಾಣವಾಗಿರುವ ಈ ಜಿಲ್ಲೆಯಿಂದ ನಮ್ಮನ್ನು ಸಂಸದರಾಗಿ ಆರಿಸಿ ಕಳುಹಿಸಿಕೊಡಿ ಎಂದು ಮನವಿ ಮಾಡಿದರು.

ಶಾಸಕ ಬಿ.ಕೆ. ಸಂಗಮೇಶ್ವರ್ ಮಾತನಾಡಿ, ಪ್ರಸ್ತುತ ಉಪ ಚುನಾವಣೆಯಲ್ಲಿ ಮಾತಿಗಿಂತ ಹೆಚ್ಚು ಕೆಲಸ ಮಾಡಿ ಮಧು ಬಂಗಾರಪ್ಪ ಅವರನ್ನು ಲೋಕಸಭೆಗೆ ಆರಿಸಿ ಕಳುಹಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ. ಕಾರ್ಯಕರ್ತರು ನಮ್ಮೊಂದಿಗೆ ಶ್ರಮವಹಿಸಿ ಗೆಲ್ಲಿಸಲು ಪಣ ತೊಡಬೇಕೆಂದು ಮತದಾರರನ್ನು ನಮ್ರವಾಗಿ ಕಾಲು ಮುಗಿದು ಬೇಡುತ್ತೇನೆ ಎಂದು ಮನವಿ ಮಾಡಿದರು.

ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಮಾತನಾಡಿದರು. ಪಕ್ಷದ ಜಿಲ್ಲಾಧ್ಯಕ್ಷ ತೀ.ನಾ. ಶ್ರೀನಿವಾಸ್ ಮುಖಂಡರಾದ ಪ್ರಭಾಕರ್, ಎಚ್.ಸಿ. ದಾಸೇಗೌಡ, ವಿಷ್ಣುನಾಥ್, ಸುಂದರೇಶ್, ರವಿಕುಮಾರ್, ಶಾಂತವೀರನಾಯ್ಕ, ಬಲ್ಕೀಷ್ ಬಾನು, ನಾರಾಯಣಸ್ವಾಮಿ, ಸಿ.ಎಂ. ಖಾದರ್, ಬಿ.ಟಿ. ನಾಗರಾಜ್, ಚಂದ್ರಶೇಖರಪ್ಪ, ಬಾಲಕೃಷ್ಣ, ಎಚ್.ಎಲ್. ಷಡಾಕ್ಷರಿ, ಟಿ. ಚಂದ್ರೇಗೌಡ, ಲೋಕೇಶ್, ಶಿವಕುಮಾರ್, ಅಂಜನಿ, ಫ್ರಾನ್ಸಿಸ್, ಬಾಬಾಜಾನ್ ಮುಂತಾದವರು ಉಪಸ್ಥಿತರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: B K SangameshwaraBhadravathiElectionKPCC PresidentMadhu Bangarappashivamogga by election 2018ದಿನೇಶ್ ಗುಂಡೂರಾವ್
Share196Tweet123Send
Previous Post

ಕನ್ನಡದ ಮೂಲಕ ತುಳು ಕಲಿಯಿರಿ: ಸರಣಿ ಲೇಖನ-1

Next Post

ಭದ್ರಾವತಿ; ಸಂಗಮೇಶ್ ಅನಿವಾರ್ಯ ಸ್ಥಿತಿಯಲ್ಲಿದ್ದಾರೆ: ದೇಶಪಾಂಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ; ಸಂಗಮೇಶ್ ಅನಿವಾರ್ಯ ಸ್ಥಿತಿಯಲ್ಲಿದ್ದಾರೆ: ದೇಶಪಾಂಡೆ

ಭದ್ರಾವತಿ; ಸಂಗಮೇಶ್ ಅನಿವಾರ್ಯ ಸ್ಥಿತಿಯಲ್ಲಿದ್ದಾರೆ: ದೇಶಪಾಂಡೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸಿಎಂ ಸಿದ್ಧರಾಮಯ್ಯ ಸಕಾರಾತ್ಮಕ ಸ್ಪಂದನೆ: ರಾಘವೇಂದ್ರ ಸ್ವಾಮಿ

May 21, 2026
ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

ಶಿವಮೊಗ್ಗದಲ್ಲೇ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕು: ಕೆಡ್ಲ್ಯೂಜೆ ಆಗ್ರಹ

May 21, 2026
ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

ಹೈಕೋರ್ಟ್‌ ಸಂಚಾರ ಪೀಠ ಸ್ಥಾಪನೆಗೆ ಡಿ. ಮಂಜುನಾಥ್ ಒತ್ತಾಯ

May 21, 2026
ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

ಬೆಂಗಳೂರು | ಲ್ಯಾಂಡಿಂಗ್ ವೇಳೆ ರನ್ ವೇಗೆ ಅಪ್ಪಳಿಸಿದ ವಿಮಾನ | ತಪ್ಪಿದ ಭಾರೀ ಅನಾಹುತ

May 21, 2026
ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿ | ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಫಿನೀಶ್

May 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL