No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Thursday, May 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಜೆಡಿಎಸ್ ಸದಸ್ಯರಿಂದ ಧರಣಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 17, 2022
in ಭದ್ರಾವತಿ
0
ಅನುದಾನ ಹಂಚಿಕೆಯಲ್ಲಿ ತಾರತಮ್ಯ ಜೆಡಿಎಸ್ ಸದಸ್ಯರಿಂದ ಧರಣಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ಪ್ರಭಾರ ಅಧ್ಯಕ್ಷ ಚನ್ನಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯಸಭೆಯ ಆರಂಭದಲ್ಲಿ ಜೆಡಿಎಸ್ ಸದಸ್ಯರು 15ನೇ ಹಣಕಾಸು ಅನುದಾನವನ್ನು ಎಲ್ಲಾ ೩೫ ವಾರ್ಡ್‌ಗಳಿಗೂ ಸಮಾನವಾಗಿ ಅನುದಾನ ಹಂಚಿಕೆ ಮಾಡುವಂತೆ ಆಗ್ರಹಿಸಿ ಸಭೆಯ ಬಾವಿಗಿಳಿದು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.

ಜೆಡಿಎಸ್ ಸದಸ್ಯ ಬಸವರಾಜ ಬಿ. ಆನೇಕೊಪ್ಪ ನೇತೃತ್ವದಲ್ಲಿ ಜೆಡಿಎಸ್ ಸದಸ್ಯರು ಸಭೆಯ ಬಾವಿಗಿಳಿದು ಪ್ರತಿಭಟನೆ ನಡೆಸುವ ಮೂಲಕ ನಗರಸಭೆ 15ನೇ ಹಣಕಾಸು ಯೋಜನೆಯಡಿ 35 ವಾರ್ಡ್ ಗಳಿಗೂ ಸಮಾನವಾಗಿ ಅನುದಾನ ಬಿಡುಗಡೆಗೊಳಿಸಬೇಕು. ಆದರೆ ಕಾಂಗ್ರೆಸ್ ಪಕ್ಷದ ಸದಸ್ಯರ ವಾರ್ಡ್‌ಗಳಿಗೆ ಮಾತ್ರ ಹೆಚ್ಚಿನ ಅನುದಾನ ಬಿಡುಗೊಳಿಸುವ ಮೂಲಕ ತಾರತಮ್ಯ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೆ ಧ್ವನಿಗೂಡಿಸಿದ ಉಳಿದ ಜೆಡಿಎಸ್ ನಗರಸಭಾ ಸದಸ್ಯರು ತಾರತಮ್ಯ ನೀತಿ ತಕ್ಷಣ ಸರಿಪಡಿಸುವಂತೆ ಆಗ್ರಹಿಸಿ ಧರಣಿ ನಡೆಸಿದರು. ಈ ನಡುವೆ ಕಾಂಗ್ರೆಸ್ ಸದಸ್ಯ ಬಿ.ಕೆ ಮೋಹನ್ ಸಾಮಾನ್ಯ ಸಭೆಯಲ್ಲಿ ಜೆಡಿಎಸ್ ಸದಸ್ಯರು ಸಭೆ ಸುಗಮವಾಗಿ ನಡೆಯಲು ಅವಕಾಶ ನೀಡದೆ ಪ್ರದರ್ಶನಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆಂದು ಹೇಳಿಕೆ ನೀಡುವ ಮೂಲಕ ಧರಣಿನಿರತರು ಅದರಲ್ಲೂ ಮಹಿಳಾ ಸದಸ್ಯರು ಮತ್ತಷ್ಟು ಆಕ್ರೋಶಗೊಳ್ಳಲು ಕಾರಣರಾದರು. ಈ ನಡುವೆ ಬಿ.ಕೆ ಮೋಹನ್ ಅಜೆಂಡಾದಲ್ಲಿರುವ ಪ್ರಸ್ತಾವನೆಗಳನ್ನು ಪಾಸ್ ಮಾಡುವಂತೆ ಮತ್ತೊಂದು ಹೇಳಿಕೆ ನೀಡಿದ್ದು, ಈ ಹಿನ್ನಲೆಯಲ್ಲಿ ಜೆಡಿಎಸ್ ಸದಸ್ಯೆ ವಿಜಯ ಅವರು ಆಕ್ರೋಶಗೊಂಡು ಅಧ್ಯಕ್ಷರು ಮತ್ತು ಆಯುಕ್ತರಿಗೆ ಧಿಕ್ಕಾರ ಹಾಕಿದರು.

ಅಧ್ಯಕ್ಷ ಚನ್ನಪ್ಪ ಧರಣಿ ನಿರತ ಜೆಡಿಎಸ್ ಸದಸ್ಯರಿಗೆ ತಮ್ಮ ಸ್ಥಳಗಳಿಗೆ ತೆರಳಿದರೆ ಉತ್ತರಿಸುವುದಾಗಿ ತಿಳಿಸಿದ್ದು, ಈ ಹಿನ್ನಲೆಯಲ್ಲಿ ತಮ್ಮ ಸ್ಥಳಿಗಳಿಗೆ ತೆರಳಿದರು. ಆದರೂ ಉತ್ತರಿಸುವಲ್ಲಿ ವಿಳಂಬ ಮಾಡಿದ ಹಿನ್ನಲೆಯಲ್ಲಿ ಪುನಃ ೨ನೇ ಬಾರಿಗೆ ಪ್ರತಿಭಟನೆಗೆ ಮುಂದಾದರು. ಅಂತಿಮವಾಗಿ ಅನುದಾನ ನೀಡುವ ಭರವಸೆ ನೀಡಲಾಯಿತು.
ಇದಕ್ಕೂ ಮೊದಲು ಈ ಬಾರಿ 9 ದಿನಗಳ ಕಾಲ ನಾಡಹಬ್ಬ ದಸರಾ ಆಚರಣೆ ಅದ್ದೂರಿಯಾಗಿ ಆಚರಿಸುವ ಸಂಬಂಧ ಮೆಸ್ಕಾಂ, ಪೊಲೀಸ್ ಹಾಗು ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ದಸರಾ ಹಬ್ಬ ಆಚರಣೆಯಲ್ಲಿ ಶಾಲಾ ಮಕ್ಕಳ ಪಾಲ್ಗೊಳ್ಳುವಿಕೆ, ವಿದ್ಯುತ್ ದೀಪ ಅಳವಡಿಕೆ ಹಿನ್ನಲೆಯಲ್ಲಿ ಯಾವುದೇ ದುರ್ಘಟನೆ ನಡೆಯದಂತೆ ಮುನ್ನಚ್ಚರಿಕೆವಹಿಸುವುದು. ದಸರಾ ಮೆರವಣಿಗೆಯಲ್ಲಿ ಪೊಲೀಸ್ ಹಾಗು ಆರ್‌ಎಎಫ್ ಸಿಬ್ಬಂದಿಗಳಿಂದ ಪಥಸಂಚನ ನಡೆಸುವುದು ಇತ್ಯಾಧಿ ವಿಷಯ ಕುರಿತು ಚಿರ್ಚಿಸಲಾಯಿತು.

Also read: ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಡಿಸಿ ಡಾ. ಸೆಲ್ವಮಣಿ ಸೂಚನೆ

ಕಸ ವಿಲೇವಾರಿಗೆ ಒದಗಿಸಲಾಗಿದ್ದ ವಾಹನದ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಹಿನ್ನಲೆಯಲ್ಲಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ನಗರಸಭೆ ವತಿಯಿಂದ ಪರಿಹಾರ ನೀಡಲು ಆದೇಶವಾಗಿರುವ ಹಿನ್ನಲೆಯಲ್ಲಿ ಸಲ್ಲಿಕೆಯಾದ ಪ್ರಸ್ತಾವನೆಗೆ ಸಂಬಂಧಿಸಿದಂತೆ ಸದಸ್ಯರು ಮಾತನಾಡಿ, ನಗರಸಭೆಯಲ್ಲಿ ಕಸವಿಲೇವಾರಿಗೆ ಬಳಸುತ್ತಿರುವ ವಾಹನಗಳು ಚಾಲನಾ ಪರವಾನಗಿ, ವಿಮೆ ಸೇರಿದಂತೆ ಅಗತ್ಯವಿರುವ ಸಮರ್ಪಕವಾದ ದಾಖಲಾತಿಗಳನ್ನು ಹೊಂದಿರುವ ಬಗ್ಗೆ ಪರಿಶೀಲನೆ ನಡೆಸಬೇಕು. ದಾಖಲಾತಿಗಳು ಇಲ್ಲದಿದ್ದಲ್ಲಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸದಸ್ಯರು ಸಭೆಯ ಗಮನಕ್ಕೆ ತಂದರು. ಇದಕ್ಕೆ ಉತ್ತರಿಸಿದ ಪೌರಾಯುಕ್ತ ಮನುಕುಮಾರ್ ದಾಖಲಾತಿಗಳ ಪರಿಶೀಲನೆ ಹಾಗು ಅಗತ್ಯ ಕ್ರಮ ಕೈಗೊಳ್ಳಲು 50ಲಕ್ಷ ರು. ಅನುದಾನ ಮೀಸಲಿಡಲಾಗಿದೆ. ಶೀಘ್ರದಲ್ಲಿಯೇ ವಾಹನಗಳ ದಾಖಲಾತಿ ಪರಿಶೀಲನೆ ನಡೆಯಲಿದೆ ಎಂದರು.
ಸದಸ್ಯರೊಬ್ಬರು ಮಾತನಾಡಿ, ಒಟ್ಟು 35 ವಾರ್ಡ್‌ಗಳ ವ್ಯಾಪ್ತಿಯಲ್ಲಿ ಕೇವಲ ಒಂದೇ ಒಂದು ಮುಕ್ತಿವಾಹನವಿದೆ. ಇದರಿಂದಾಗಿ ಸಮಸ್ಯೆ ಎದುರಾಗಿದೆ ಈ ಹಿನ್ನಲೆಯಲ್ಲಿ ಇನ್ನೊಂದು ಮುಕ್ತಿವಾಹಿನಿ ವಾಹನ ಖರೀದಿಸುವಂತೆ ಮನವಿ ಮಾಡಿದರು. ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ಹಳೇನಗರದ ಕನಕಮಂಟಪ ಮೈದಾನದಲ್ಲಿ ಮಹಿಳೆಯರಿಗಾಗಿ ಇನ್ನೊಂದು ಶೌಚಾಲಯದ ಅಗತ್ಯವಿದ್ದು, ಯಾವುದಾದರೂ ಅನುದಾನದಲ್ಲಿ ಶೌಚಾಲಯ ನಿರ್ಮಿಸುವಂತೆ ಒತ್ತಾಯಿಸಿದರು.

ಸದಸ್ಯ ಆರ್. ಮೋಹನ್‌ಕುಮಾರ್ ಸೇರಿದಂತೆ ಇನ್ನಿತರ ಸದಸ್ಯರು ಮಾತನಾಡಿ, ನಗರಸಭೆ ಅಧಿಕಾರಿಗಳು ಸದಸ್ಯರಿಗೆ ಸರಿಯಾಗಿ ಗೌರವ ನೀಡುತ್ತಿಲ್ಲ. ಸದಸ್ಯರು ನೀಡುವ ಅರ್ಜಿಗಳಿಗೂ ಸಹ ಯಾವುದೇ ಬೆಲೆ ಇಲ್ಲದಂತೆ ವರ್ತಿಸುತ್ತಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದರು.

ಸಭೆಯಲ್ಲಿ ಒಟ್ಟು 20 ಪ್ರಸ್ತಾವನೆಗಳ ಕುರಿತು ಚರ್ಚಿಸಲಾಯಿತು. ಬಹುತೇಕ ಪ್ರಸ್ತಾವನೆಗಳಿಗೆ ಒಪ್ಪಿಗೆ ಸೂಚಿಸಲಾಯಿತು. ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share223Tweet123Send
Previous Post

ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಡಿಸಿ ಡಾ. ಸೆಲ್ವಮಣಿ ಸೂಚನೆ

Next Post

ಮಡಿಕೇರಿ, ಗೋಣಿಕೊಪ್ಪ ದಸರಾ ಸಂಪ್ರದಾಯದಂತೆ ಆಚರಿಸಿ: ಸಚಿವ ಬಿ.ಸಿ. ನಾಗೇಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಡಿಕೇರಿ, ಗೋಣಿಕೊಪ್ಪ ದಸರಾ ಸಂಪ್ರದಾಯದಂತೆ ಆಚರಿಸಿ: ಸಚಿವ ಬಿ.ಸಿ. ನಾಗೇಶ್

ಮಡಿಕೇರಿ, ಗೋಣಿಕೊಪ್ಪ ದಸರಾ ಸಂಪ್ರದಾಯದಂತೆ ಆಚರಿಸಿ: ಸಚಿವ ಬಿ.ಸಿ. ನಾಗೇಶ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೈಕಮಾಂಡ್​ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ಸಿಎಂ ಸಿದ್ದರಾಮಯ್ಯ

May 28, 2026
“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

May 27, 2026
ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

May 27, 2026
ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

May 27, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

SIR ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ನ್ಯಾಯಪೀಠದ ಸ್ಪಷ್ಟನೆಯೇನು?

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL