ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಕೊರೋನಾ ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಒಳಗಾದವರಿಗೆ ನಗರದ ಭದ್ರಾನದಿ ದಡದಲ್ಲಿರುವ ಶ್ರೀ ಧರ್ಮಶಾಸ್ತ್ರ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸೇವಾ ಟ್ರಸ್ಟ್ ನೆರವು ನೀಡಲು ಮುಂದಾಗಿದೆ.
ಕೊರೋನಾ 2ನೆಯ ಅಲೆಯಿಂದಾಗಿ ಜಾರಿಗೊಳಿಸಲಾದ ಸೆಮಿ ಲಾಕ್ಡೌನ್ ಪರಿಣಾಮ, ಹಲವರು ತೀರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಸಂದಿಗ್ದ ಪರಿಸ್ಥಿತಿಯಲ್ಲಿ ಟ್ರಸ್ಟ್ ಮಾನವೀಯತೆ ಮೆರೆಯುವ ಮೂಲಕ ಸಂಕಷ್ಟಕ್ಕೆ ಒಳಗಾದವರಿಗೆ ಅಗತ್ಯವಿರುವ ದಿನಸಿ ಸಾಮಾಗ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ.
ಕೊರೋನಾ ಮೊದಲ ಅಲೆಯ ಲಾಕ್ಡೌನ್ ಸಂದರ್ಭದಲ್ಲಿ ಸಿದ್ದಪಡಿಸಿದ ಆಹಾರ ವಿತರಿಸುವ ಮೂಲಕ ಹಸಿದವರ ನೆರವಿಗೆ ಮುಂದಾಗಿತ್ತು. ಕೇವಲ ಧಾರ್ಮಿಕ ಆಚರಣೆಗಳಿಗೆ ಸೀಮಿತವಾಗದೆ. ಹಲವು ಸಾಮಾಜಿಕ ಸೇವಾ ಕಾರ್ಯಗಳನ್ನು ಸಹ ನಡೆಸಿಕೊಂಡು ಬರುತ್ತಿರುವುದು ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದೆ.
ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಮುನಿರಾಜು ಹಾಗು ಪ್ರಧಾನ ಅರ್ಚಕ ಸಂಜಯ್ಕುಮಾರ್ ನೇತೃತ್ವದಲ್ಲಿ ನಡೆದ ವಿತರಣಾ ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಆರ್. ಕರುಣಾಮೂರ್ತಿ, ಯುವ ಮುಖಂಡ ಬಿ.ಎಸ್ ಗಣೇಶ್, ವಲಯ ಅರಣ್ಯಾಧಿಕಾರಿ ಮಂಜುನಾಥ್, ಉಪ ವಲಯ ಅರಣ್ಯಾಧಿಕಾರಿ ಬಿ.ಆರ್ ದಿನೇಶ್ಕುಮಾರ್, ಸಂಚಾರಿ ಪೊಲೀಸ್ ಠಾಣಾಧಿಕಾರಿ ಕವಿತಾ ಹಾಗೂ ಟ್ರಸ್ಟ್ ಪದಾಧಿಕಾರಿಗಳು, ಸೇವಾಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post