No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ತಾಲೂಕಿನ 4 ಶಿಕ್ಷಕರಿಗೆ ಜಿಲ್ಲಾಮಟ್ಟದ ಶಿಕ್ಷಕ ಪ್ರಶಸ್ತಿ…

kalpa News by kalpa News
September 4, 2021
in ಭದ್ರಾವತಿ
0
ಭದ್ರಾವತಿ ತಾಲೂಕಿನ 4 ಶಿಕ್ಷಕರಿಗೆ ಜಿಲ್ಲಾಮಟ್ಟದ ಶಿಕ್ಷಕ ಪ್ರಶಸ್ತಿ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ಶಿಕ್ಷಕ ವೃತ್ತಿಯೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅನಿತಾ ಮೇರಿ ಸೇರಿದಂತೆ ತಾಲೂಕಿನ 4 ಶಿಕ್ಷಕರಿಗೆ ಜಿಲ್ಲಾಮಟ್ಟದ ಶಿಕ್ಷಕ ಪ್ರಶಸ್ತಿ ಲಭಿಸಿದೆ.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಕೋವಿಡ್-19ರ ಹಿನ್ನಲೆಯಲ್ಲಿ ಕಳೆದ 2 ವರ್ಷಗಳಿಂದ ಶಿಕ್ಷಕರ ದಿನಾಚರಣೆ ಸರಳವಾಗಿ ಆಚರಿಸಲಾಗುತ್ತಿದ್ದು, ಈ ನಡುವೆ ಸಾಧಕ ಶಿಕ್ಷಕರನ್ನು ಗುರುತಿಸಿ ಗೌರವಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಎಲೆಮರೆ ಕಾಯಿಯಂತೆ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಾದ ಅನಿತಾಮೇರಿ, ಆರ್. ಬಸವರಾಜ್, ವಿರೂಪಾಕ್ಷಪ್ಪ ಹಿರೇಮಠ್ ಮತ್ತು ಸುಶೀಲಾ ಮಾರ್ಗರೇಟ್ ಅವರಿಗೆ ಪ್ರಶಸ್ತಿ ಲಭಿಸಿರುವುದು ಶಿಕ್ಷಕರ ವರ್ಗಕ್ಕೆ ಸಂತಸವನ್ನುಂಟು ಮಾಡಿದೆ.


ಅನಿತಾ ಮೇರಿ:

ಅನಿತಾ ಮೇರಿ ಅವರು 1998ರಲ್ಲಿ ದೈಹಿಕ ಶಿಕ್ಷಕಿಯಾಗಿ ನೇಮಕಗೊಂಡು ತೀರ್ಥಹಳ್ಳಿ ತಾಲೂಕಿನಲ್ಲಿ ಕರ್ತವ್ಯ ಆರಂಭಿಸಿದ್ದು, ನಂತರ ತಾಲೂಕಿನ ತಡಸ ಸರ್ಕಾರಿ ಉರ್ದು ಶಾಲೆ, ಭದ್ರಾ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಅಲ್ಲದೆ 2 ವರ್ಷ ದೊಣಬಘಟ್ಟ ಸರ್ಕಾರಿ ಕನ್ನಡ ಶಾಲೆಯಲ್ಲಿ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸಿದ್ದು, ಪ್ರಸ್ತುತ ಹುಣಸೇಕಟ್ಟೆ ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸರ್ಕಾರಿ ಕೆಲಸಕ್ಕೆ ಸೇರುವ ಮೊದಲು 1987ರಿಂದಲೇ ವಿವಿಧೆಡೆ ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ಇವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ ಇದೆ ಮೊದಲ ಬಾರಿಗೆ ಶಿಕ್ಷಣ ಇಲಾಖೆ ವತಿಯಿಂದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾಮಟ್ಟದ ಪ್ರಶಸ್ತಿಗೆ ಅನಿತಾ ಮೇರಿ ಭಾಜನರಾಗಿದ್ದಾರೆ.

ಅನಿತಾ ಮೇರಿಯವರು ಸರ್ಕಾರಿ ವೃತ್ತಿಯೊಂದಿಗೆ ಪ್ರಮುಖವಾಗಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದು, ನಾಡಿನಾದ್ಯಂತ ಚಿರಪರಿಚಿತರಾಗಿದ್ದಾರೆ. ಸ್ವಂತ ಖರ್ಚಿನಲ್ಲಿ ಸುಮಾರು 415 ಬಡ ಮಕ್ಕಳ ಹೃದಯ ಶಸ್ತ್ರ ಚಿಕಿತ್ಸೆಯನ್ನು ನೆರವೇರಿಸಿರುವುದು ಗಮನಾರ್ಹ ಸಾಧನೆಯಾಗಿದೆ. ಜಿಲ್ಲಾಡಳಿತ, ತಾಲೂಕು ಆಡಳಿತ, ವಿವಿಧ ಸಂಘ-ಸಂಸ್ಥೆಗಳು ಮಾತ್ರವಲ್ಲದೆ ವಿವಿಧ ಮಾಧ್ಯಮ ಸಂಸ್ಥೆಗಳು ಸಹ ಹಲವಾರು ಪ್ರಶಸ್ತಿ, ಬಿರುದುಗಳನ್ನು ನೀಡಿ ಗೌರವಿಸಿವೆ.


ಆರ್. ಬಸವರಾಜ್:

ಹೊಸಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಕಳೆದ ಸುಮಾರು 6 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಆರ್. ಬಸವರಾಜ್ ಅವರಿಗೆ ಈ ಬಾರಿ ಪ್ರೌಢ ಶಾಲೆ ವಿಭಾಗದ ಜಿಲ್ಲಾಮಟ್ಟದ ಶಿಕ್ಷಕರ ಪ್ರಶಸ್ತಿ ಲಭಿಸಿದೆ.

1999ರಲ್ಲಿ ಮುಖ್ಯ ಶಿಕ್ಷಕರ ಹುದ್ದೆಗೆ ನೇಮಕಗೊಂಡ ಬಸವರಾಜ್ ಅವರು ರಾಯಚೂರಿನಲ್ಲಿ ಕರ್ತವ್ಯ ಆರಂಭಿಸಿದರು. ನಂತರ ಚಿತ್ರದುರ್ಗದಲ್ಲಿ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ನಂತರ ತಾಲೂಕಿನ ಎಡೇಹಳ್ಳಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ಹೊಸಸಿದ್ದಾಪುರ ಪ್ರೌಢಶಾಲೆಗೆ ವರ್ಗಾವಣೆಗೊಂಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಶಾಲೆಯ ಬೆಳವಣಿಗೆಯಲ್ಲಿ ಬಸವರಾಜ್ ಅವರು ಹೆಚ್ಚಿನ ಶ್ರಮ ವಹಿಸಿದ್ದು, ತಾಲೂಕಿನಲ್ಲಿ ಮಾದರಿ ಶಾಲೆಗಳಲ್ಲಿ ಒಂದಾಗಿ ಗುರುತಿಸಿಕೊಳ್ಳುವಲ್ಲಿ ಕಾರಣಕರ್ತರಾಗಿದ್ದಾರೆ.

ವಿರೂಪಾಕ್ಷಪ್ಪ ಹಿರೇಮಠ :
ತಾಲೂಕಿನ ಕಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 4 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ವಿರೂಪಾಕ್ಷಪ್ಪ ಹಿರೇಮಠ ಅವರಿಗೆ ಜಿಲ್ಲಾಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಹಿರೇಮಠ ಅವರು 1992ರಲ್ಲಿ ವೃತ್ತಿಗೆ ಸೇರ್ಪಡೆಗೊಂಡಿದ್ದು, ಶಾಲೆಯ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಅಲ್ಲದೆ ಹಿರೇಮಠ್ ಅವರು ರಂಗಕಲಾವಿದರಾಗಿದ್ದು, ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಈ ನಡುವೆ ಕಳೆದ 2 ವರ್ಷಗಳಿಂದ ಎದುರಾಗಿರುವ ಕೋವಿಡ್-೧೯ರ ಸಂಕಷ್ಟದ ಸಮಯದಲ್ಲಿ ಮಕ್ಕಳಿಗೆ ಶಿಕ್ಷಣ ಕಲಿಕೆ ಕುರಿತು ಜಾಗೃತಿ ಮೂಡಿಸುವಲ್ಲಿ ಗಮನ ಸೆಳೆದಿದ್ದರು.

ಸುಶೀಲಾ ಮಾರ್ಗರೇಟ್:
ತಾಲೂಕಿನ ಕಲ್ಲಿಹಾಳ್ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವರ್ಹಿಸುತ್ತಿರುವ ಸುಶೀಲಾ ಮಾರ್ಗರೇಟ್ ಅವರಿಗೆ ಈ ಬಾರಿ ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕರ ಪ್ರಶಸ್ತಿ ಲಭಿಸಿದೆ.

1994ರಲ್ಲಿ ಚಿಕ್ಕಮಗಳೂರು ಲಕ್ಕವಳ್ಳಿಯಲ್ಲಿ ವೃತ್ತಿ ಆರಂಭಿಸಿದ ಇವರು ನಂತರ ತಾಲೂಕಿನ ದೊಣಬಘಟ್ಟ, ಭದ್ರಾ ಕಾಲೋನಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರು ಮಕ್ಕಳ ಕಲಿಕಾ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಪರಿಣತಿ ಹೊಂದಿದ್ದು, ಹಲವಾರು ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದಾರೆ. ಅಲ್ಲದೆ ಮಕ್ಕಳಿಗೆ ಆಂಗ್ಲ ವಿಷಯ ಕಲಿಕೆಗೆ ಸಂಬಂಧಿಸಿದಂತೆ ವಿಶೇಷ ಸಾಧನೆಯನ್ನು ಮಾಡಿದ್ದಾರೆ. ಇವರ ಸಾಧನೆಗೆ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಅವರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಇಲಾಖೆ ಇವರಲ್ಲಿನ ಪ್ರತಿಭೆಯನ್ನು ಗುರುತಿಸಿ ಇದೀಗ ಪ್ರಶಸ್ತಿಯನ್ನು ನೀಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsTeachers awardಉಕ್ಕಿನನಗರಿಭದ್ರಾವತಿಮಲೆನಾಡು_ಸುದ್ಧಿಶಿಕ್ಷಕ ಪ್ರಶಸ್ತಿಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

2021ನೇ ಸಾಲಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ: ಯಾರ್‍ಯಾರಿಗೆ ಲಭಿಸಿದೆ? ಇಲ್ಲಿದೆ ಮಾಹಿತಿ

Next Post

ಭದ್ರಾವತಿ: ಸೆ.5ರಂದು ಶ್ರೀ ಸಿದ್ದಲಿಂಗಮಹಾಸ್ವಾಮೀಜಿಯವರ 23 ತಿಂಗಳ ತಪೋನುಷ್ಠಾನ ಸಮಾರೋಪ

kalpa News

kalpa News

Next Post
ಭದ್ರಾವತಿ: ಸೆ.5ರಂದು ಶ್ರೀ ಸಿದ್ದಲಿಂಗಮಹಾಸ್ವಾಮೀಜಿಯವರ 23 ತಿಂಗಳ ತಪೋನುಷ್ಠಾನ ಸಮಾರೋಪ

ಭದ್ರಾವತಿ: ಸೆ.5ರಂದು ಶ್ರೀ ಸಿದ್ದಲಿಂಗಮಹಾಸ್ವಾಮೀಜಿಯವರ 23 ತಿಂಗಳ ತಪೋನುಷ್ಠಾನ ಸಮಾರೋಪ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL