ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಕೋವಿಡ್ ಸಂಕಷ್ಟದಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿರುವ ಬಜರಂಗದಳದ ಕಾರ್ಯಕರ್ತರನ್ನು ಹೊಸಮನೆ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರಸೇನಾ, ಶ್ರಿ ವಿನಾಯಕ ಸೇವಾ ಸಮಿತಿ ವತಿಯಿಂದ ಅಭಿನಂದಿಸಲಾಯಿತು.
ಕೊರೋನಾ ಸೋಂಕು 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ನಡುವೆಯೂ ವಿಶಿಷ್ಟವಾಗಿ ಸೇವೆ ಸಲ್ಲಿಸುತ್ತಿರುವವರ ನೆರವಿಗೆ ನಗರದ ವಿವಿಧ ಸಂಘ-ಸಂಸ್ಥೆಗಳು ಮುಂದಾಗುವ ಜೊತೆಗೆ ಮತ್ತಷ್ಟು ಪ್ರೋತ್ಸಾಹ ನೀಡುತ್ತಿವೆ.ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಮೂಲಕ ವಿಶೇಷವಾಗಿ ಸೇವೆ ಸಲ್ಲಿಸುತ್ತಿರುವ ಬಜರಂಗದಳ ಕಾರ್ಯಕರ್ತರನ್ನು ಸನ್ಮಾನಿಸಿ ಸುಮಾರು 25 ಸಾವಿರ ರೂ. ಆರ್ಥಿಕ ನೆರವನ್ನು ನೀಡಿ ಪ್ರೋತ್ಸಾಹಿಸಲಾಯಿತು.
ಬಜರಂಗದಳ ಕಾರ್ಯಕರ್ತರು ವಾಹನವೊಂದನ್ನು ಬಾಡಿಗೆಗೆ ಪಡೆದು ಕೋವಿಡ್-19ರ ಸೇವೆಗೆ ಮೀಸಲಿಡುವ ಜೊತೆಗೆ ಉಚಿತವಾಗಿ ಇದುವರೆಗೂ ಸುಮಾರು 33 ಮೃತ ದೇಹಗಳ ಅಂತ್ಯಸಂಸ್ಕಾರವನ್ನು ಕೈಗೊಂಡಿದೆ.ಹಿಂದೂ ಮಹಾಸಭಾ, ಹಿಂದೂ ರಾಷ್ಟ ಸೇನಾ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್, ಉಪಾಧ್ಯಕ್ಷರಾದ ಮಣಿ ಎಎನ್ಎಸ್, ಕೆ. ಮಂಜುನಾಥ್, ಪ್ರಧಾನ ಕಾರ್ಯದರ್ಶಿಗಳಾದ ಭವಾನಿ, ಚನ್ನಪ್ಪ, ಕಾರ್ಯದರ್ಶಿ ಕೆ. ಸುದೀಪ್ ಕುಮಾರ್, ಪ್ರಮುಖರಾದ ಶೇಖರಪ್ಪ, ಗಿರೀಶ್, ಬಜರಂಗದಳ ಪ್ರಮುಖರಾದ ಸುನಿಲ್, ವಡಿವೇಲು, ದೇವರಾಜ್, ಕೃಷ್ಣ, ಕುಮಾರ್ ಸೇರಿದಂತೆ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post