ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಕ್ಷೇತ್ರದ ಜನತೆಗಾಗಿ ಕೋವಿಡ್19 ಲಸಿಕೆ ಖರೀದಿ ಮಾಡಲು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 1 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಎಂದು ಜಿಲ್ಲಾಧಿಕಾರಿಗಳಿಗೆ ಶಾಸಕ ಬಿ.ಕೆ. ಸಂಗಮೇಶ್ವರ ಅವರು ಮನವಿ ಮಾಡಿದ್ದಾರೆ.
ಈ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಅವರು, ಕೋವಿಡ್ ಮಹಾಮಾರಿಯ 2ನೆಯ ಅಲೆಯ ಹೊಡೆತಕ್ಕೆ ಜನಜೀವನ ತತ್ತರಗೊಂಡಿದ್ದು, ಇದೇ ವೇಳೆ 3ನೆಯ ಅಲೆ ಅಪ್ಪಳಿಸುವ ಮುನ್ಸೂಚನೆಯನ್ನು ತಜ್ಞರು ನೀಡಿದ್ದಾರೆ. ಇದನ್ನು ಸಮರ್ಥವಾಗಿ ಎದುರಿಸಲು ಜನರಿಗೆ ಲಸಿಕೆ ನೀಡುವುದೇ ಪರಿಣಾಮಕಾರಿ ಕ್ರಮವಾಗಿದೆ ಎಂದಿದ್ದಾರೆ.

ಸನ್ನಿವೇಶ ಹೀಗಿರುವಾಗ ಪ್ರಸ್ತುತ ಜಿಲ್ಲಾ, ತಾಲೂಕು, ವಾರ್ಡ್ ಹಾಗೂ ಗ್ರಾಮ ಮಟ್ಟದಲ್ಲಿ ಲಸಿಕೆ ದೊರೆಯುತ್ತಿಲ್ಲ. ಹೀಗಾಗಿ, ಕ್ಷೇತ್ರದ ಜನರಿಗಾಗಿ ಲಸಿಕೆ ಖರೀದಿ ಮಾಡಲು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 1 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ವಾರ್ಡ್ಗಳಲ್ಲಿ ಲಸಿಕೆ ನೀಡುವ ಅಭಿಯಾನಕ್ಕೆ ಅನುಮತಿ ನೀಡಿ, ಜನರ ಪ್ರಾಣ ಕಾಪಾಡುವ ಮಹತ್ಕಾರ್ಯಕ್ಕೆ ಅನುಮೋದನೆ ನೀಡಿ ಎಂದು ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















