ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ನಗರದಲ್ಲಿ ಕೇಂದ್ರೀಯ ವಿದ್ಯಾಲಯಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಶೀಘ್ರದಲ್ಲೇ ಸ್ಥಾಪನೆಯಾಗಲಿದೆ.
ಈ ಕುರಿತಂತೆ ಮಾತನಾಡಿರುವ ಸಂಸದ ಬಿ.ವೈ. ರಾಘವೇಂದ್ರ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್ ಅವರು ಸಮ್ಮತಿ ಸೂಚಿಸಿದ್ದು, ರ್ಯಾಪಿಡ್ ಆಕ್ಷನ್ ಫೋರ್ಸ್ ಘಟಕದ ಬಳಿಯಲ್ಲಿ ಸ್ಥಾಪನೆಯಾಗಲಿದೆ ಎಂದರು.

ಈ ಕೇಂದ್ರೀಯ ವಿದ್ಯಾಲಯದಲ್ಲಿ ಶೇ.15 ಸೀಟುಗಳನ್ನು ಆರ್’ಎಎಫ್ ಸಿಬ್ಬಂದಿ ಮಕ್ಕಳಿಗೆ ನೀಡಲಿದ್ದು, ಉಳಿದ ಶೇ.85 ಸೀಟುಗಳು ಸ್ಥಳೀಯರಿಗೆ ಕೇಂದ್ರೀಯ ವಿದ್ಯಾಲಯ ಮಾರ್ಗಸೂಚಿಯಂತೆ ದೊರೆಯಲಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















